ಕೊಲೆ ಆರೋಪಿ ಸಂತೋಷ್ ಎಂಬಾತನ ಮೇಲೆ ದಾಳಿ ನಡೆಸಿದ ಪುಂಡರು 
ರಾಜ್ಯ

ಬೆಂಗಳೂರು: ಹಾಡಹಗಲೇ ಕೊಲೆ ಆರೋಪಿ ಮೇಲೆ ಮಾರಣಾಂತಿಕ ದಾಳಿ, 68 ಬಾರಿ ಮಚ್ಚೇಟು, ಕುಣಿದು ಕುಪ್ಪಳಿಸಿದ ದುಷ್ಕರ್ಮಿಗಳು!

ಮಾರ್ಚ್ 09 ಸೋಮವಾರ ಮಾಗಡಿ ರೋಡ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಂತೋಷ್ ಎಂಬಾತನ ಮೇಲೆ ಮೂವರು ಯುವಕರು ದಾಳಿ ಮಾಡಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರೌಡಿಗಳು ಅಟ್ಟಹಾಸ ಮೆರೆದಿದ್ದಾರೆ. ಹಾಡಹಗಲೇ ಯುವಕನ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದಾರೆ. 68 ಬಾರಿ ಮಚ್ಚಿನಿಂದ ಹೊಡೆದು ಮನಸೋ ಇಚ್ಚೆ ಥಳಿಸಿದ್ದಾರೆ. ಬಳಿಕ ಕುಣಿದು ಕುಪ್ಪಳಿಸಿದ್ದಾರೆ.

ಮಾರ್ಚ್ 09 ಸೋಮವಾರ ಮಾಗಡಿ ರೋಡ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಂತೋಷ್ ಎಂಬಾತನ ಮೇಲೆ ಮೂವರು ಯುವಕರು ದಾಳಿ ಮಾಡಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

68 ಬಾರಿ ಮಚ್ಚೇಟು ಬಿದ್ರು ಅದೃಷ್ಟವಶಾತ್​ ಸಂತೋಷ್ ಜೀವ ಉಳಿದಿದೆ. ಮಚ್ಚಿನಿಂದ ಚುಚ್ಚಿದ ದುಷ್ಕರ್ಮಿಗಳು ಬಳಿಕ ಡ್ಯಾನ್ಸ್ ಮಾಡಿ ವಿಕೃತಿ ಮೆರೆದಿದ್ದಾರೆ. ಶರತ್ ಆ್ಯಂಡ್​​ ಗ್ಯಾಂಗ್ ನಿಂದ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.

ಅಣ್ಣನ ಕೊಲೆಯ ಪ್ರತೀಕಾರಕ್ಕೆ ಮಾರಕಾಸ್ತ್ರದಿಂದ ಅಗ್ರಹಾರ ದಾಸರಹಳ್ಳಿ ನಿವಾಸಿ ಸಂತೋಷ್ ಮೇಲೆ ಶರತ್ ಅಂಡ್ ಗ್ಯಾಂಗ್​ ಅಟ್ಯಾಕ್ ಮಾಡಿ ಕೊಲೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. 2024ರಲ್ಲಿ ಸಂತೋಷ್​​ನಿಂದ ಮೋಹನ್ ಎಂಬಾತನ ಕೊಲೆ ನಡೆದಿತ್ತು. ಕಾರಿನ ವಿಚಾರಕ್ಕೆ ಇಬ್ಬರ ನಡುವೆ ಬೆಂಗಳೂರಿನಲ್ಲಿ ಗಲಾಟೆ ನಡೆದಿದೆ. ಈ ವೇಳೆ ಮಂಡ್ಯದಲ್ಲಿ ಕುಡಿದು ಕೊಳ್ಳೇಗಾಲಕ್ಕೆ ಹೋಗಿ ಗಲಾಟೆ ಮಾಡಿದ್ದ ಸಂತೋಷ್ ಮೋಹನ್ ಗೆ ಕಾಲಿಂದ ಒದ್ದು ಕೊಲೆ ಮಾಡಿದ್ದನಂತೆ. ಬಳಿಕ ಕೊಳ್ಳೆಗಾಲದ ಕೆರೆಯಲ್ಲಿ ಮೃತದೇಹವನ್ನು ಬಿಸಾಡಿ ಹೋಗಿದ್ದ ಎನ್ನಲಾಗುತ್ತಿದೆ.

ಈ ಸಂಬಂಧ ಕೊಳ್ಳೇಗಾಲ ಪೊಲೀಸ್ ಸ್ಟೇಷನ್ ನಲ್ಲಿ ಮೊದಲಿಗೆ ಯುಡಿಆರ್ ಆಗಿತ್ತು. ನಂತರ ಕೊಲೆ ಪ್ರಕರಣ ದಾಖಲಿಸಿ ಸಂತೋಷ ಬಂಧಿಸಿದ್ದ ಕೊಳ್ಳೆಗಾಲ ಪೊಲೀಸರು ಆರೋಪಿಯನ್ನ ಜೈಲಿಗಟ್ಟಿದ್ರು. ಕೊಲೆ ಕೇಸ್ ನಲ್ಲಿ ಜೈಲಿನಲ್ಲಿ ನಾಲ್ಕು ವರ್ಷ ಇದ್ದು, ಇತ್ತೀಚೆಗಷ್ಟೇ ಜಾಮೀನು ಮೇಲೆ ಸಂತೋಷ್ ಹೊರ ಬಂದಿದ್ದ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಮಾರ್ಚ್ 9ರಂದು ಆರೋಪಿ ಶರತ್ ಅಂಡ್ ಗ್ಯಾಂಗ್ ಕುಡಿದು ಸಂತೋಷ್ ಮೇಲೆ ದಾಳಿ ಮಾಡಿದೆ ಅನ್ನೋದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು: ಗಾಜಿಯಾಬಾದ್‌ನ ಹರೀಶ್ ರಾಣಾ ದಯಾಮರಣಕ್ಕೆ ಅನುಮತಿ! ಏನಿದು ಪ್ರಕರಣ?

'ಜಸ್ಪ್ರೀತ್ ಬುಮ್ರಾ ನನ್ನಿಂದ ನಿಧಾನಗತಿಯ ಬೌಲಿಂಗ್ ಕಲಿತರು': ಚರ್ಚೆಗೆ ಗ್ರಾಸವಾದ ಪಾಕ್ ಮೂಲದ ವೇಗಿಯ ಹೇಳಿಕೆ!

ನನಗೆ ಅನ್ಯಾಯವಾಗಿದೆ: BJP ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ ರಾಜೀನಾಮೆ!

ರಣಾಂಗಣದಲ್ಲಿ ಅಮೆರಿಕಕ್ಕೆ ಹಿನ್ನಡೆಯಾಗಿರಬಹುದು, ಆದರೆ ಇಸ್ರೇಲಿಗಲ್ಲ! (ತೆರೆದ ಕಿಟಕಿ)

ದೇಶಾದ್ಯಂತ 'ಗ್ಯಾಸ್ ಟ್ರಬಲ್': ಪ್ರಮುಖ ನಗರಗಳಲ್ಲಿ LPG ಕೊರತೆಯ ಭೀತಿ; ಸಮಸ್ಯೆ ಬಗೆಹರಿಸಲು ಅಗತ್ಯ ಸರಕುಗಳ ಕಾಯ್ದೆ ಬಳಸಿದ ಕೇಂದ್ರ!

SCROLL FOR NEXT