ಸಾಂದರ್ಭಿಕ ಚಿತ್ರ  
ರಾಜ್ಯ

ಇಸ್ರೇಲ್-ಇರಾನ್ ಯುದ್ಧ: 4 ಸಾವಿರ ಲೀಟರ್ ಡೀಸೆಲ್ ಸಂಗ್ರಹಿಸಿಟ್ಟಿದ್ದ ಮಂಗಳೂರು ಮೂಲದ ವ್ಯಕ್ತಿ ಬಂಧನ

ನಿಖರ ಮಾಹಿತಿಯ ಆಧಾರದಲ್ಲಿ ಬೆಳ್ತಂಗಡಿ ಉಪವಿಭಾಗದ ಡಿವೈಎಸ್‌ಪಿ ರೋಹಿಣಿ ಸಿ.ಕೆ. ಅವರು ಮಾರ್ಚ್ 9ರ ರಾತ್ರಿ ಕಣಿಯೂರು ಗ್ರಾಮದ ಮುಡಲ್ತಿಯಾರ್‌ನಲ್ಲಿ ದಾಳಿ ನಡೆಸಿದರು.

ಮಂಗಳೂರು: ಇಸ್ರೇಲ್-ಇರಾನ್ ಯುದ್ಧದ ಪರಿಸ್ಥಿತಿಯಿಂದ ಇಂಧನ ಬೆಲೆ ಏರಿಕೆಯಾಗಬಹುದು ಎಂಬ ಭಯದಿಂದ ವ್ಯಕ್ತಿಯೊಬ್ಬರು ಅಕ್ರಮವಾಗಿ ಸಂಗ್ರಹಿಸಿದ್ದ 4 ಸಾವಿರ ಲೀಟರ್‌ಗಿಂತಲೂ ಅಧಿಕ ಡೀಸೆಲ್ ನ್ನು ಬೆಳ್ತಂಗಡಿಯಲ್ಲಿ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.

ನಿಖರ ಮಾಹಿತಿಯ ಆಧಾರದಲ್ಲಿ ಬೆಳ್ತಂಗಡಿ ಉಪವಿಭಾಗದ ಡಿವೈಎಸ್‌ಪಿ ರೋಹಿಣಿ ಸಿ.ಕೆ. ಅವರು ಮಾರ್ಚ್ 9ರ ರಾತ್ರಿ ಕಣಿಯೂರು ಗ್ರಾಮದ ಮುಡಲ್ತಿಯಾರ್‌ನಲ್ಲಿ ದಾಳಿ ನಡೆಸಿದರು. ಜಗದೀಶ್ (35ವ) ಅವರ ನಿವಾಸದ ಸಮೀಪದ ಒಂದು ಶೆಡ್‌ನ್ನು ಪೊಲೀಸರು ಪರಿಶೀಲಿಸಿದಾಗ, ಡ್ರಮ್‌ಗಳು ಮತ್ತು ಕ್ಯಾನ್‌ಗಳಲ್ಲಿ ದೊಡ್ಡ ಪ್ರಮಾಣದ ಡೀಸೆಲ್ ಅಕ್ರಮವಾಗಿ ಸಂಗ್ರಹಿಸಿರುವುದು ಪತ್ತೆಯಾಯಿತು.

ಪರಿಶೀಲನೆಯ ವೇಳೆ, 200 ಲೀಟರ್ ಸಾಮರ್ಥ್ಯದ 20 ಡ್ರಮ್‌ಗಳಲ್ಲಿ ಹಾಗೂ ಸುಮಾರು 35 ಲೀಟರ್ ಸಾಮರ್ಥ್ಯದ ಐದು ಕ್ಯಾನ್‌ಗಳಲ್ಲಿ ಒಟ್ಟು 4,175 ಲೀಟರ್ ಡೀಸೆಲ್ ಸಂಗ್ರಹಿಸಿದ್ದನ್ನು ಅಧಿಕಾರಿಗಳು ಪತ್ತೆಹಚ್ಚಿದರು. ಹಲವಾರು ಖಾಲಿ ಡ್ರಮ್‌ಗಳು ಮತ್ತು ಕ್ಯಾನ್‌ಗಳನ್ನೂ ಸ್ಥಳದಲ್ಲಿ ಪತ್ತೆಹಚ್ಚಲಾಯಿತು. ವಶಪಡಿಸಿಕೊಂಡ ಡೀಸೆಲ್‌ನ ಮೌಲ್ಯ ಸುಮಾರು 3.5 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

ಜಗದೀಶ್ ಅವರು ಯಾವುದೇ ಪರವಾನಗಿ ಪಡೆಯದೇ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಡೀಸೆಲ್ ಸಂಗ್ರಹಿಸಿದ್ದರು. ವಿಚಾರಣೆ ವೇಳೆ ಅವರು ಸುಮಾರು ಒಂದು ವಾರದ ಹಿಂದೆ ಸ್ನೇಹಿತನ ಬಳಿಯಿಂದ ಡೀಸೆಲ್ ಖರೀದಿಸಿ ವಾಣಿಜ್ಯ ಉದ್ದೇಶಕ್ಕಾಗಿ ಸಂಗ್ರಹಿಸಿದ್ದಾಗಿ ಹೇಳಿಕೊಂಡಿದ್ದಾರೆ. ಅವರ ಬಳಿ ಲಾರಿ ಮತ್ತು ಎಕ್ಸ್ಕಾವೇಟರ್ ಇರುವುದಾಗಿ ತಿಳಿದುಬಂದಿದೆ.

ಈಗ ನಡೆಯುತ್ತಿರುವ ಇಸ್ರೇಲ್-ಇರಾನ್ ಯುದ್ಧದ ಪರಿಣಾಮ ಜಾಗತಿಕ ಇಂಧನ ಬೆಲೆಗಳು ಏರಿಕೆಯಾಗಬಹುದು ಎಂಬ ನಿರೀಕ್ಷೆಯಿಂದ ಆರೋಪಿಯು ಇಂಧನವನ್ನು ಸಂಗ್ರಹಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಜಗದೀಶ್ ವಿರುದ್ಧ ಭಾರತೀಯ ನ್ಯಾಯ ಸಂಹಿತ (ಬಿಎನ್‌ಎಸ್)ನ ಸೆಕ್ಷನ್ 287 ಮತ್ತು 3(5), ಪೆಟ್ರೋಲಿಯಂ ಕಾಯ್ದೆ 1934ರ ಸೆಕ್ಷನ್ 23 ಹಾಗೂ ಅಗತ್ಯ ಸಾಮಗ್ರಿಗಳ ಕಾಯ್ದೆ 1955ರ ಸೆಕ್ಷನ್ 3 ಮತ್ತು 7ರಡಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂದಿನ ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

ಬ್ರದರ್ ನಿಮಗೆ ತೊಂದರೆಯಾಗಿದ್ದರೆ ಇರಾನ್‌ಗೆ ಹೋಗಿ ಹೋರಾಡಿ: ಯುಪಿ ಪೊಲೀಸ್ ಅಧಿಕಾರಿ ಹೀಗೆ ಹೇಳಿದ್ದು ಯಾರಿಗೆ?

ಬಿಕ್ಲು ಶಿವ ಕೊಲೆ ಪ್ರಕರಣ: ಜೈಲುಪಾಲಾಗಿದ್ದ ಬಿಜೆಪಿ ಶಾಸಕ ಭೈರತಿ ಬಸವರಾಜ್‌ಗೆ ಜಾಮೀನು

SCROLL FOR NEXT