ಸಾಂದರ್ಭಿಕ ಚಿತ್ರ PTI
ರಾಜ್ಯ

ರಾಜ್ಯದಲ್ಲಿ ಹೆಚ್ಚುತ್ತಿದೆ ಬಿಸಿಲ ಧಗೆ; ಕರಾವಳಿ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದ ಹಲವಾರು ಜಿಲ್ಲೆಗಳು ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ದಾಖಲಿಸುತ್ತಿದ್ದು, ಜನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಮಂಗಳೂರು: ರಾಜ್ಯಾದ್ಯಂತ ಬಿಸಿಲ ಧಗೆ ಹೆಚ್ಚಾಗುತ್ತಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ತಿಳಿಸಿದೆ.

ರಾಜ್ಯದ ಹಲವಾರು ಜಿಲ್ಲೆಗಳು ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ದಾಖಲಿಸುತ್ತಿದ್ದು, ಜನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗೆ ಯಲ್ಲೋ ಅಲರ್ಟ ಘೋಷಿಸಲಾಗಿದ್ದು, ನಾಳೆ ಮತ್ತು ನಾಡಿದ್ದು ಹೆಚ್ಚಿನ ಬಿಸಿಲು ಮತ್ತು ಉಷ್ಣತೆ ಹೆಚ್ಚಾಗಲಿದೆ. ಇದು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಮಾರ್ಚ್ 11 ರಂದು ಬೆಳಗ್ಗೆ 8.30ಕ್ಕೆ ಕೊನೆಗೊಳ್ಳುವ 24 ಗಂಟೆಗಳ ಅವಧಿಗೆ ಐಎಂಡಿ ಬಿಡುಗಡೆ ಮಾಡಿದ ದತ್ತಾಂಶವು ಕರ್ನಾಟಕದ ಹಲವು ಭಾಗಗಳಲ್ಲಿ 33°C ಮತ್ತು 37°C ನಡುವೆ ಗರಿಷ್ಠ ತಾಪಮಾನ ದಾಖಲಾಗಿದೆ ಎಂದು ತೋರಿಸುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ತಾಪಮಾನ ಅಂದರೆ 37°C ತಾಪಮಾನ ದಾಖಲಾಗಿದ್ದರೆ, ಉಡುಪಿಯಲ್ಲಿ 35.8°C ಕನಿಷ್ಠ ತಾಪಮಾನ ದಾಖಲಾಗಿದೆ. ತುಲನಾತ್ಮಕವಾಗಿ ಹೆಚ್ಚಿನ ಕನಿಷ್ಠ ತಾಪಮಾನ 24°C ಆಗಿದೆ. ಉತ್ತರ ಕನ್ನಡದಲ್ಲಿ ಗರಿಷ್ಠ ತಾಪಮಾನ 36.6°C ಮತ್ತು ಕನಿಷ್ಠ ತಾಪಮಾನ 21.2°C ದಾಖಲಾಗಿದೆ.

ಇನ್ನು ಕರ್ನಾಟಕದ ಹಲವಾರು ಒಳನಾಡಿನ ಜಿಲ್ಲೆಗಳು ಸಹ ಈ ಅವಧಿಯಲ್ಲಿ ಹೆಚ್ಚಿನ ತಾಪಮಾನವನ್ನು ದಾಖಲಿಸಿವೆ. ಅವುಗಳಲ್ಲಿ, ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ 36.6°C, ಹಾವೇರಿಯಲ್ಲಿ 36.4°C ದಾಖಲಾಗಿದೆ.

ಬೀದರ್‌ನಲ್ಲಿ 36.3°C ಮತ್ತು ರಾಯಚೂರಿನಲ್ಲಿ 36.1°C ದಾಖಲಾಗಿದೆ. ಬಾಗಲಕೋಟೆ (35.9°C), ಬೆಳಗಾವಿ (35.4°C), ಶಿವಮೊಗ್ಗ (35.3°C) ಮತ್ತು ಬಳ್ಳಾರಿ (35°C) ಜಿಲ್ಲೆಗಳಲ್ಲಿಯೂ ಹಗಲಿನ ತಾಪಮಾನ ಹೆಚ್ಚಾಗಿದೆ. ಇದು ರಾಜ್ಯದ ಹಲವಾರು ಭಾಗಗಳಲ್ಲಿ ಬಿಸಿಲು ಕ್ರಮೇಣ ಏರಿಕೆಯಾಗುವುದನ್ನು ಸೂಚಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

ಬ್ರದರ್ ನಿಮಗೆ ತೊಂದರೆಯಾಗಿದ್ದರೆ ಇರಾನ್‌ಗೆ ಹೋಗಿ ಹೋರಾಡಿ: ಯುಪಿ ಪೊಲೀಸ್ ಅಧಿಕಾರಿ ಹೀಗೆ ಹೇಳಿದ್ದು ಯಾರಿಗೆ?

ಬಿಕ್ಲು ಶಿವ ಕೊಲೆ ಪ್ರಕರಣ: ಜೈಲುಪಾಲಾಗಿದ್ದ ಬಿಜೆಪಿ ಶಾಸಕ ಭೈರತಿ ಬಸವರಾಜ್‌ಗೆ ಜಾಮೀನು

SCROLL FOR NEXT