ಸಿದ್ದರಾಮಯ್ಯ  
ರಾಜ್ಯ

ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

ಸದನಕ್ಕೆ ಗೈರುಹಾಜರಾಗುವ ಮತ್ತು ಶಾಸಕರ ಅಹವಾಲುಗಳಿಗೆ ಸ್ಪಂದಿಸದ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರು ಆಗ್ರಹಿಸಿದ್ದಾರೆ

ಬೆಂಗಳೂರು: ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ಕೆಲವು ಸಚಿವರ ಕಾರ್ಯವೈಖರಿಯ ಬಗ್ಗೆ ಆಡಳಿತ ಪಕ್ಷದ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು, ನಡೆಯುತ್ತಿರುವ ಶಾಸಕಾಂಗ ಅಧಿವೇಶನಕ್ಕೆ ಗೈರುಹಾಜರಾಗುವುದನ್ನು ಮುಂದುವರಿಸಿದರೆ ಆ ಸಚಿವರನ್ನು ತಮ್ಮ ಸಂಪುಟದಿಂದ ಕೈಬಿಡುವಂತೆ ಕೇಳಿಕೊಂಡಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಕೆಲವು ಸಚಿವರ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸದನಕ್ಕೆ ಗೈರುಹಾಜರಾಗುವ ಮತ್ತು ಶಾಸಕರ ಅಹವಾಲುಗಳಿಗೆ ಸ್ಪಂದಿಸದ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರು ಆಗ್ರಹಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಕ್ಷಮತೆಯ ಮೌಲ್ಯಮಾಪನವಾಗಬೇಕು ಎಂದು ಹಿರಿಯ ಶಾಸಕರು ಈ ಸಂದರ್ಭದಲ್ಲಿ ಒತ್ತಾಯಿಸಿದರು.

ಸಭೆಯಲ್ಲಿ ಮಾತನಾಡಿದ ಶಾಸಕರು, ಅನಿವಾರ್ಯ ಕಾರಣಗಳ ಹೊರತಾಗಿ ಸಚಿವರು ಕಡ್ಡಾಯವಾಗಿ ಸದನದಲ್ಲಿ ಇರಬೇಕೆಂದು ಮುಖ್ಯಮಂತ್ರಿಗಳೇ ಸೂಚಿಸಿದ್ದರೂ, ಅನೇಕ ಸಚಿವರು ಇದನ್ನು ಪಾಲಿಸುತ್ತಿಲ್ಲ ಎಂದು ದೂರಿದ್ದಾರೆ. ಅಲ್ಲದೆ, ತಮ್ಮ ಕ್ಷೇತ್ರಗಳ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ವಿಳಂಬವಾಗುತ್ತಿದೆ ಎಂದು ಶಾಸಕರು ಅಸಮಾಧಾನ ಹೊರಹಾಕಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಜಿಎಸ್ಟಿ ಹಂಚಿಕೆಯಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಮತ್ತು ಗ್ಯಾಸ್ ಬೆಲೆ ಏರಿಕೆಯ ವಿಷಯದಲ್ಲಿ ಬಿಜೆಪಿಯನ್ನು ಸದನದಲ್ಲಿ ತರಾಟೆಗೆ ತೆಗೆದುಕೊಳ್ಳುವಂತೆ ಶಾಸಕರಿಗೆ ಸೂಚಿಸಿದರು.

ಸಭೆಯು ಕೆಲವು ನಾಟಕೀಯ ಬೆಳವಣಿಗೆಗಳಿಗೂ ಸಾಕ್ಷಿಯಾಯಿತು. ಅಧಿಕಾರಿಗಳು ಜನಪ್ರತಿನಿಧಿಗಳ ಮಾತಿಗೆ ಬೆಲೆ ನೀಡುತ್ತಿಲ್ಲ ಎಂದು ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ದೂರಿದರೆ, ಶೃಂಗೇರಿ ಶಾಸಕ ರಾಜೇಗೌಡ ಅವರು ಅಧಿಕಾರಿಗಳ ಪರವಾಗಿ ಮಾತನಾಡಿದರು.

ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ನಾರಾಯಣಸ್ವಾಮಿ ಅವರು ಸಭೆಯಿಂದ ಹೊರನಡೆದರು. ಇದೇ ವೇಳೆ ಬೆಂಗಳೂರಿನ ಶಾಸಕರು ಮುಂಬರುವ ಬಿಬಿಎಂಪಿ ಚುನಾವಣೆ ದೃಷ್ಟಿಯಿಂದ ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಗೆ ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT