ಸಚಿವ ಕೃಷ್ಣ ಬೈರೇಗೌಡ 
ರಾಜ್ಯ

ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ಮಾರ್ಗಸೂಚಿ ದರ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

ಭೂಸ್ವಾಧೀನ ಪ್ರಕ್ರಿಯೆ 2013ರ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ವ್ಯವಸ್ಥಾಪನೆಯಲ್ಲಿ ನ್ಯಾಯಸಮ್ಮತ ಪರಿಹಾರ ಮತ್ತು ಪಾರದರ್ಶಕತೆ ಹಕ್ಕು ಕಾಯ್ದೆ ಪ್ರಕಾರ ನಡೆಯುತ್ತದೆ. ಪ್ರಾಥಮಿಕ ಅಧಿಸೂಚನೆ ಹೊರಬಂದ ನಂತರ ಮಾರ್ಗಸೂಚಿ ಮೌಲ್ಯವನ್ನು ಪರಿಷ್ಕರಿಸಲಾಗುವುದಿಲ್ಲ.

ಬೆಂಗಳೂರು: ಭೂಸ್ವಾಧೀನ ಸಂದರ್ಭಗಳಲ್ಲಿ ರೈತರಿಗೆ ನ್ಯಾಯಸಮ್ಮತ ಪರಿಹಾರ ದೊರಕುವಂತೆ ಮಾಡಲು ಮಾರ್ಗಸೂಚಿ ದರ ಪರಿಷ್ಕರಣೆ ಅಗತ್ಯ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ಹೇಳಿದರು.

ವಿಧಾನಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಕೆಎಸ್.ನವೀನ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಾರ್ಗಸೂಚಿ ಮೌಲ್ಯವನ್ನು ನಿಯಮಿತವಾಗಿ ಪರಿಷ್ಕರಿಸಿದರೆ ಅಧಿಕೃತ ದರ ಮತ್ತು ಮಾರುಕಟ್ಟೆ ದರಗಳ ನಡುವಿನ ಅಂತರ ಕಡಿಮೆಯಾಗುತ್ತದೆ ಎಂದು ಹೇಳಿದರು.

ಕೆಲವು ಭೂಸ್ವಾಧೀನ ಪ್ರಕರಣಗಳಲ್ಲಿ 2023ರಲ್ಲಿ ಮಾರ್ಗಸೂಚಿ ಮೌಲ್ಯ ಪರಿಷ್ಕರಣೆ ನಡೆದಿದ್ದರೂ ಪರಿಹಾರವನ್ನು 2019ರ ದರ ಆಧರಿಸಿ ನೀಡಲಾಗಿದೆ ಎಂಬ ಪ್ರಶ್ನೆಯನ್ನು ನವೀನ್ ಎತ್ತಿದ್ದರು. ಇದರಿಂದ ಭೂಮಿ ಕಳೆದುಕೊಂಡ ರೈತರಿಗೆ ಆರ್ಥಿಕ ನಷ್ಟ ಉಂಟಾಗಿದೆಯೇ ಎಂದು ಕೇಳಿದರು.

ಇದಕ್ಕೆ ಉತ್ತರಿಸಿದ ಸಚಿವರು, ಭೂಸ್ವಾಧೀನ ಪ್ರಕ್ರಿಯೆ 2013ರ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ವ್ಯವಸ್ಥಾಪನೆಯಲ್ಲಿ ನ್ಯಾಯಸಮ್ಮತ ಪರಿಹಾರ ಮತ್ತು ಪಾರದರ್ಶಕತೆ ಹಕ್ಕು ಕಾಯ್ದೆ ಪ್ರಕಾರ ನಡೆಯುತ್ತದೆ. ಪ್ರಾಥಮಿಕ ಅಧಿಸೂಚನೆ ಹೊರಬಂದ ನಂತರ ಮಾರ್ಗಸೂಚಿ ಮೌಲ್ಯವನ್ನು ಪರಿಷ್ಕರಿಸಲಾಗುವುದಿಲ್ಲ. ಬದಲಾಗಿ, ಹಿಂದಿನ ಮಾರ್ಗಸೂಚಿ ಬೆಲೆ ಅಥವಾ ಹಿಂದಿನ ಮೂರು ವರ್ಷಗಳಲ್ಲಿ ನೋಂದಾಯಿಸಲಾದ ಅತ್ಯಧಿಕ ಮಾರಾಟ ಪತ್ರಗಳ ಸರಾಸರಿಯನ್ನು ಆಧರಿಸಿ ಪರಿಹಾರವನ್ನು ನಿರ್ಧರಿಸಲಾಗುತ್ತದೆ ಎಂದು ಹೇಳಿದರು.

ಕೆಲ ಪ್ರದೇಶಗಳಲ್ಲಿ ಮಾರ್ಗಸೂಚಿ ಮೌಲ್ಯ ಸುಮಾರು ರೂ.2 ಲಕ್ಷ ಇದ್ದರೂ ಮಾರುಕಟ್ಟೆ ಮೌಲ್ಯ ರೂ.80 ಲಕ್ಷವರೆಗೆ ಇರುವ ಉದಾಹರಣೆಗಳಿವೆ. ಈ ಅಂತರವೇ ‘ಚೆಕ್’ ಮತ್ತು ‘ಕ್ಯಾಶ್’ ಮೂಲಕ ನಡೆಯುವ ಕಪ್ಪು ಹಣದ ವ್ಯವಹಾರಗಳಿಗೆ ಕಾರಣವಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ಆದ್ದರಿಂದ ಮಾರ್ಗಸೂಚಿ ಮೌಲ್ಯವನ್ನು ನಿಯಮಿತವಾಗಿ ಪರಿಷ್ಕರಿಸಿದರೆ ಮಾರುಕಟ್ಟೆ ದರದೊಂದಿಗೆ ಅಂತರ ಕಡಿಮೆಯಾಗುವುದರ ಜೊತೆಗೆ ಸಾರ್ವಜನಿಕ ಯೋಜನೆಗಳಿಗೆ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯಸಮ್ಮತ ಪರಿಹಾರ ದೊರಕುತ್ತದೆ ಎಂದು ಸಚಿವರು ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ಬ್ರದರ್ ನಿಮಗೆ ತೊಂದರೆಯಾಗಿದ್ದರೆ ಇರಾನ್‌ಗೆ ಹೋಗಿ ಹೋರಾಡಿ: ಯುಪಿ ಪೊಲೀಸ್ ಅಧಿಕಾರಿ ಹೀಗೆ ಹೇಳಿದ್ದು ಯಾರಿಗೆ?

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಬಂದ್! ಇಂದಿರಾ ಕ್ಯಾಂಟೀನ್ ನಡೆಯುತ್ತಾ?

ಇಂಧನ ಸುರಕ್ಷತೆ ಕುರಿತು ಇರಾನ್ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಮೂರು ಬಾರಿ ಮಾತುಕತೆ

SCROLL FOR NEXT