ಸಿಸಿಎಫ್ ಸೋನಲ್ ವೃಷ್ಣಿ (ಒಳ ಚಿತ್ರದಲ್ಲಿ ಮೃತ ಗಣಪತಿ) 
ರಾಜ್ಯ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

ಹಾಡಹಗಲೇ ಕಾಫಿ ತೋಟದಲ್ಲಿ ಕಾಡಾನೆ ಕಾಣಿಸಿಕೊಂಡ ಪರಿಣಾಮ ಸ್ಥಳಕ್ಕೆ ಪೊಲೀಸರು, ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಡಿಕೇರಿ: ಇತ್ತೀಚಿಗೆ ಕೊಡಗಿನಲ್ಲಿ ಕಾಡಾನೆ ದಾಳಿ ಹೆಚ್ಚುತ್ತಿದ್ದು, ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪ ಹೈಸ್ಕೂಲ್ ಪೈಸಾರಿಯಲ್ಲಿ ಕಾಫಿ ತೋಟಕ್ಕೆ ತೆರಳಿದ್ದ ಕಾಫಿ ಬೆಳೆಗಾರನ ಮೇಲೆ ಆನೆ ದಾಳಿ ಮಾಡಿದೆ.

ಆನೆ ದಾಳಿಗೊಳಗಾದ ರೈತ ಗಣಪತಿ(49) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಾಡಹಗಲೇ ಕಾಫಿ ತೋಟದಲ್ಲಿ ಕಾಡಾನೆ ಕಾಣಿಸಿಕೊಂಡ ಪರಿಣಾಮ ಸ್ಥಳಕ್ಕೆ ಪೊಲೀಸರು, ಅರಣ್ಯ ಅಧಿಕಾರಿಗಳಾದ ಸಿಸಿಎಫ್ ಸೋನಲ್ ವೃಷ್ಣಿ, ಡಿಸಿಎಫ್ ಅಭಿಷೇಕ್ ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇತ್ತೀಚಿಗೆ ಕುಶಾಲನಗರ ತಾಲೂಕಿನ ವಾಲ್ನೂರಿನಲ್ಲಿ ನಂಜರಾಯಪಟ್ಟಣ ಗ್ರಾಮ ಪಂಚಾಯತ್​​ ಮಾಜಿ ಸದಸ್ಯೆ ಜಲಜಾಕ್ಷಿ ಎಂಬವರು ಆನೆ ದಾಳಿಯಿಂದ ಮೃತಪಟ್ಟಿದ್ದರು. ಈ ಸಾವು ಮಾಸುವ ಮುನ್ನವೇ ಆನೆ ದಾಳಿಗೆ ಮತ್ತೊಂದು ಬಲಿಯಾಗಿದೆ.

ಕೊಡಗಿನಲ್ಲಿ ಕಳೆದ 12 ದಿನಗಳ ನಡೆದ ಮೂರನೇ ಆನೆ ದಾಳಿ ಇದಾಗಿದ್ದು, ಜಿಲ್ಲೆಯಾದ್ಯಂತ ನೂರಾರು ರೈತರು ತೀವ್ರ ಆಕ್ರೋಶಗೊಂಡಿದ್ದಾರೆ. ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿ, ವನ್ಯಜೀವಿ ಸಂಘರ್ಷದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವ ಇಲಾಖೆಯ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದರು.

ಜಿಲ್ಲೆಯ ಮದೆನಾಡು ಮತ್ತು ವಲ್ನೂರು ವ್ಯಾಪ್ತಿಯಲ್ಲಿ ಇತ್ತೀಚೆಗೆ 19 ವರ್ಷದ ಬಾಲಕಿ ಮತ್ತು 50 ವರ್ಷದ ಮಹಿಳೆ ಸಾವನ್ನಪ್ಪಿದ ನಂತರ 12 ದಿನಗಳಲ್ಲಿ ವರದಿಯಾದ ಮೂರನೇ ಸಾವು ಇದಾಗಿದೆ. ಮೂರು ತಿಂಗಳಲ್ಲಿ ಜಿಲ್ಲೆಯಲ್ಲಿ ಕಾಡಾನೆ ದಾಳಿಯಲ್ಲಿ ಒಟ್ಟು ಐದು ಜನರು ಪ್ರಾಣ ಕಳೆದುಕೊಂಡಿದ್ದು, ಕೊಡಗಿನಾದ್ಯಂತ ಗ್ರಾಮಸ್ಥರು ಮತ್ತು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಜಿಲ್ಲೆಯಾದ್ಯಂತ ರೈತರ ಬೆಂಬಲದೊಂದಿಗೆ ನೂರಾರು ಗ್ರಾಮಸ್ಥರು ಸಿದ್ದಾಪುರದ ಘಟನಾ ಸ್ಥಳದಲ್ಲಿ ಜಮಾಯಿಸಿ ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿದರು. ವನ್ಯಜೀವಿಗಳು ಗ್ರಾಮಗಳಿಗೆ ನುಗ್ಗುವುದನ್ನು ತಡೆಯುವಲ್ಲಿ ವಿಫಲವಾದ ಅರಣ್ಯ ಇಲಾಖೆಯ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಆಗ್ರಹಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಂಗಾಳದಲ್ಲಿ ಬದಲಾವಣೆಯ ಪರ್ವ: ಗಡಿ ಸುರಕ್ಷತೆಗೆ ಆದ್ಯತೆ: BSFಗೆ ಭೂಮಿ ಹಸ್ತಾಂತರಿಸಲು ಸುವೇಂದು ಸರ್ಕಾರ ಅಸ್ತು, ಮೊದಲ ಸಂಪುಟ ಸಭೆಯಲ್ಲೇ ಮಹತ್ವದ ನಿರ್ಧಾರ..!

ನೇಪಾಳದಿಂದ ಭಾರತಕ್ಕೆ ಅಪಮಾನ?; ಹುದ್ದೆ ಅಂತರದ ಕಾರಣ ನೀಡಿ ವಿದೇಶಾಂಗ ಕಾರ್ಯದರ್ಶಿ ಭೇಟಿಗೆ ನಿರಾಕರಿಸಿದ ಪ್ರಧಾನಿ ಬಾಲೇನ್ ಶಾ: ವರದಿ

'Why English?': ಇರಲಾರದೇ ಇರುವೆ ಬಿಟ್ಟು ಕೊಂಡ ಪಾಕಿಸ್ತಾನ ಜನರಲ್, ಹಬ್ಬ ಮಾಡಿದ ಟ್ರೋಲರ್ಸ್! Video

'ಇನ್ನೊಂದ್ ವರ್ಷ ಖರೀದಿ ಮಾಡ್ಬೇಡಿ..'.: ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಪಾತಾಳಕ್ಕೆ ಕುಸಿದ ಚಿನ್ನಾಭರಣ ಷೇರು

ಎರಡು ವರ್ಷದವೆರೆಗಿನ 'ಸಮ್ಮತಿಯ ಲೈಂಗಿಕ ಸಂಬಂಧ' ಅತ್ಯಾಚಾರವೇ? ಕೋರ್ಟ್ ಹೇಳಿದ್ದೇನು!

SCROLL FOR NEXT