ಸಂಗ್ರಹ ಚಿತ್ರ 
ರಾಜ್ಯ

ಬಿಸಿಯೂಟ ತಯಾರಿಕೆಗೆ ಶಾಲಾ ಮಕ್ಕಳಿಂದ ಕೆಲಸ: ವ್ಯಾಪಕ ಆಕ್ರೋಶ, ಮಕ್ಕಳ ರಕ್ಷಣಾ ಆಯೋಗದಿಂದ ಸ್ವಯಂ ಪ್ರೇರಿತ ದೂರು

ಕಲಬುರಗಿ ಜಿಲ್ಲೆಯ ಚಿತ್ತಾಪುರ, ನಾಲ್ವಾರ್ ಮತ್ತು ವಾಡಿ ವ್ಯಾಪ್ತಿಯ ಕೆಲವು ಶಾಲೆಗಳಲ್ಲಿ ಮಧ್ಯಾಹ್ನದ ಊಟ ತಯಾರಿಸಲು ಅಡುಗೆ ಸಿಬ್ಬಂದಿಗೆ ಸಹಾಯ ಮಾಡಲು ವಿದ್ಯಾರ್ಥಿಗಳಿಂದ ದೂರದ ಸ್ಥಳಗಳಿಂದ ಕುಡಿಯುವ ನೀರನ್ನು ಹೊತ್ತು ತರಿಸಲಾಗುತ್ತಿದೆ ಎನ್ನಲಾಗಿದೆ.

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಕೆಲಸಗಳನ್ನು ಮಾಡಿಸಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ, ನಾಲ್ವಾರ್ ಮತ್ತು ವಾಡಿ ವ್ಯಾಪ್ತಿಯ ಕೆಲವು ಶಾಲೆಗಳಲ್ಲಿ ಮಧ್ಯಾಹ್ನದ ಊಟ ತಯಾರಿಸಲು ಅಡುಗೆ ಸಿಬ್ಬಂದಿಗೆ ಸಹಾಯ ಮಾಡಲು ವಿದ್ಯಾರ್ಥಿಗಳಿಂದ ದೂರದ ಸ್ಥಳಗಳಿಂದ ಕುಡಿಯುವ ನೀರನ್ನು ಹೊತ್ತು ತರಿಸಲಾಗುತ್ತಿದೆ ಎನ್ನಲಾಗಿದೆ.

ಈ ಕುರಿತು ಆಯೋಗದ ಅಧ್ಯಕ್ಷ ಶಶಿಧರ್ ಕೊಸಂಬೆ ಅವರು ಬುಧವಾರ ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಪತ್ರ ಬರೆದು ಸ್ಪಷ್ಟನೆ ಕೇಳಿದ್ದಾರೆ.

ಕೆಲ ಶಾಲೆಗಳಲ್ಲಿ ಸಿಬ್ಬಂದಿ ಕೊರತೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಂದ ತರಕಾರಿ ಕತ್ತರಿಸುವ ಕೆಲಸವನ್ನೂ ಮಾಡಿಸಲಾಗುತ್ತಿದೆ ಎಂಬ ಮಾಹಿತಿ ದೊರೆತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ವಿದ್ಯಾರ್ಥಿಗಳು ಯಾವುದೇ ತೊಂದರೆ ಇಲ್ಲದೆ ವಿದ್ಯಾಭ್ಯಾಸ ಮಾಡಲು ಶಾಲೆಗಳಲ್ಲಿ ಅಗತ್ಯ ಕುಡಿಯುವ ನೀರಿನ ವ್ಯವಸ್ಥೆ ತಕ್ಷಣ ಮಾಡಬೇಕು. ಜೊತೆಗೆ ಕೈಗೊಂಡ ಕ್ರಮಗಳ ಕುರಿತು ಐದು ದಿನಗಳೊಳಗೆ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದ್ದಾರೆಂದು ತಿಳಿದುಬಂದಿದೆ.

ವಿದ್ಯಾರ್ಥಿಗಳಿಂದ ಇಂತಹ ಕೆಲಸಗಳನ್ನು ಮಾಡಿಸಬಾರದು ಎಂಬ ನಿಯಮಗಳಿದ್ದರೂ ಈ ರೀತಿಯ ಘಟನೆಗಳು ವರದಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದ್ದು, ಶಿಕ್ಷಕರು, ಅಧಿಕಾರಿಗಳ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್