ಸೆರೆ ಸಿಕ್ಕ ಆನೆ 
ರಾಜ್ಯ

ಕೊಡಗಿನಲ್ಲಿ ಕಾಫಿ ಬೆಳೆಗಾರನ ಬಲಿ ಪಡೆದಿದ್ದ ಕಾಡಾನೆ ಸೆರೆ

38 ರಿಂದ 40 ವರ್ಷ ವಯಸ್ಸಿನ ಈ ಕಾಡಾನೆಯನ್ನು ಸೆರೆಹಿಡಿದು ಜಿಲ್ಲೆಯ ದುಬಾರೆ ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ.

ಮಡಿಕೇರಿ: ಕೊಡಗಿನ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಗುಹ್ಯದಲ್ಲಿ ಗುರುವಾರ ಕಾಫಿ ಬೆಳೆಗಾರನನ್ನು ಕೊಂದಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಶುಕ್ರವಾರ ಸೆರೆಹಿಡಿದಿದೆ.

38 ರಿಂದ 40 ವರ್ಷ ವಯಸ್ಸಿನ ಈ ಕಾಡಾನೆಯನ್ನು ಸೆರೆಹಿಡಿದು ಜಿಲ್ಲೆಯ ದುಬಾರೆ ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ.

ಕಾಡಾನೆ ದಾಳಿಯಲ್ಲಿ ಗುಹ್ಯದ ಕಾಫಿ ಬೆಳೆಗಾರ ಗಣಪತಿ(ಗಪ್ಪು) ಮೃತಪಟ್ಟಿದ್ದರು. ಕೊಡಗಿನಲ್ಲಿ ಕಳೆದ 12 ದಿನಗಳ ನಡೆದ ಮೂರನೇ ಆನೆ ದಾಳಿ ಇದಾಗಿದ್ದು, ಜಿಲ್ಲೆಯಾದ್ಯಂತ ನೂರಾರು ರೈತರು ತೀವ್ರ ಆಕ್ರೋಶಗೊಂಡಿದ್ದಾರೆ. ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿ, ವನ್ಯಜೀವಿ ಸಂಘರ್ಷದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವ ಇಲಾಖೆಯ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದರು.

ಈ ಬೆಳವಣಿಗೆ ನಂತರ, ಇಲಾಖೆಗೆ ಕಾಡಾನೆಯನ್ನು ಸೆರೆಹಿಡಿಯಲು ರಾಜ್ಯ ಸರ್ಕಾರದಿಂದ ತಕ್ಷಣ ಅನುಮತಿ ಸಿಕ್ಕಿತು ಮತ್ತು ಇಲಾಖೆ ಗುರುವಾರ ಸಂಜೆ ಸಂಘರ್ಷ ವಲಯದಲ್ಲಿ ಶಿಬಿರ ಸ್ಥಾಪಿಸಿತು. ಆನೆ ಸೆರೆಹಿಡಿಯುವ ಕಾರ್ಯಾಚರಣೆಗೆ ಬೆಂಬಲವಾಗಿ ಆರು ಪಳಗಿದ ಆನೆಗಳನ್ನು ಸ್ಥಳಕ್ಕೆ ಕರೆತರಲಾಯಿತು. ಅಲ್ಲದೆ ಆನೆಯನ್ನು ಪತ್ತೆಹಚ್ಚಲು ಥರ್ಮೋ ಡ್ರೋನ್‌ಗಳು ಮತ್ತು ಇತರ ಡ್ರೋನ್ ಕ್ಯಾಮೆರಾಗಳನ್ನು ಬಳಸಲಾಯಿತು.

ಆನೆ ಸೆರೆಹಿಡಿಯುವ ಕಾರ್ಯಾಚರಣೆ ಇಂದು ಬೆಳಗ್ಗೆ ಪ್ರಾರಂಭವಾಯಿತು ಮತ್ತು ಸಂಜೆ ವೇಳೆ ಅರಣ್ಯ ಇಲಾಖೆ, ಗಂಡು ಆನೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಯಿತು. ಘಟನೆ ನಡೆದ ಸ್ಥಳದಿಂದ ಸುಮಾರು 15 ಕಿ.ಮೀ ದೂರ ಕ್ರಮಿಸಿದ್ದ ಆನೆಯನ್ನು ಹುಂಡಿ ಗ್ರಾಮದಲ್ಲಿ ಸೆರೆಹಿಡಿಯಲಾಗಿದೆ ಎಂದು ಮೂಲಗಳು ದೃಢಪಡಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಂಗಾಳದಲ್ಲಿ ಬದಲಾವಣೆಯ ಪರ್ವ: ಗಡಿ ಸುರಕ್ಷತೆಗೆ ಆದ್ಯತೆ: BSFಗೆ ಭೂಮಿ ಹಸ್ತಾಂತರಿಸಲು ಸುವೇಂದು ಸರ್ಕಾರ ಅಸ್ತು, ಮೊದಲ ಸಂಪುಟ ಸಭೆಯಲ್ಲೇ ಮಹತ್ವದ ನಿರ್ಧಾರ..!

'ಇನ್ನೊಂದ್ ವರ್ಷ ಖರೀದಿ ಮಾಡ್ಬೇಡಿ..'.: ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಪಾತಾಳಕ್ಕೆ ಕುಸಿದ ಚಿನ್ನಾಭರಣ ಷೇರು

ಎರಡು ವರ್ಷದವೆರೆಗಿನ 'ಸಮ್ಮತಿಯ ಲೈಂಗಿಕ ಸಂಬಂಧ' ಅತ್ಯಾಚಾರವೇ? ಕೋರ್ಟ್ ಹೇಳಿದ್ದೇನು!

IPL 2026: ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸುತ್ತಲೇ ಅಸಭ್ಯ ವರ್ತನೆ ತೋರಿದ ಸ್ಟಾರ್ ಬ್ಯಾಟರ್ Tim David, ಬಿಸಿಸಿಐ ಕೆಂಗಣ್ಣು!

West Asia war ಎಫೆಕ್ಟ್: ಭಾರತೀಯ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ; ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ

SCROLL FOR NEXT