ಮಾಜಿ ಕಾರು ಡ್ರೈವರ್ ಬಂಧನ 
ರಾಜ್ಯ

ಬೆಂಗಳೂರು: ಮನೆಯೊಂದರಲ್ಲಿ 14 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳ್ಳತನ; ಮಾಜಿ ಕಾರು ಡ್ರೈವರ್ ಬಂಧನ

ಈತನ ಬಂಧನದೊಂದಿಗೆ 14 ಲಕ್ಷದ 65 ಸಾವಿರ ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಫೆಬ್ರವರಿ 24 ರಂದು ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕಳ್ಳತನ ನಡೆದಿತ್ತು.

ಬೆಂಗಳೂರು: ಮನೆಯೊಂದರಲ್ಲಿ 14 ಲಕ್ಷದ 65 ಸಾವಿರ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಅಭರಣ ದೋಚಿದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.

ಈತನ ಬಂಧನದೊಂದಿಗೆ 14 ಲಕ್ಷದ 65 ಸಾವಿರ ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಫೆಬ್ರವರಿ 24 ರಂದು ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕಳ್ಳತನ ನಡೆದಿತ್ತು.

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ತನ್ನ ಅತ್ತೆಯ ಮನೆಯ ಕಬೋರ್ಡ್‌ನಲ್ಲಿ ಇರಿಸಲಾಗಿದ್ದ ವಜ್ರ ಮತ್ತು ಚಿನ್ನಾಭರಣಗಳು ಕಾಣೆಯಾಗಿವೆ ಎಂದು ದೂರು ದಾಖಲಾಗಿತ್ತು. ಸುಮಾರು 10 ವರ್ಷಗಳಿಂದ ಚಾಲಕನಾಗಿ ದುಡಿದು ಎರಡು ತಿಂಗಳ ಹಿಂದೆ ಕೆಲಸ ಬಿಟ್ಟಿದ್ದ ವ್ಯಕ್ತಿಯ ಮೇಲೆ ದೂರುದಾರರು ಅನುಮಾನ ವ್ಯಕ್ತಪಡಿಸಿದ್ದರು.

ತದನಂತರ ಜಕ್ಕೂರು ಸರ್ಕಾರಿ ಶಾಲೆಯ ಬಳಿ ಹಿಂದಿನ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ತನ್ನ ಸ್ನೇಹಿತನೊಂದಿಗೆ ಸೇರಿ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕದ್ದ ವಜ್ರ ಮತ್ತು ಚಿನ್ನಾಭರಣಗಳನ್ನು ಆಭರಣ ಮಳಿಗೆಗೆ ಮಾರಾಟ ಮಾಡಿರುವುದನ್ನು ಆರೋಪಿ ಬಹಿರಂಗಪಡಿಸಿದ್ದಾರೆ. ಆರೋಪಿಯ ಸ್ನೇಹಿತ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪ್ರಯತ್ನ ನಡೆಯುತ್ತಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೌದು ನಾವು ಒಂದ್ ರೀತಿ ಕಡಲ್ಗಳ್ಳರೇ...; ಹೆಮ್ಮೆ ಇದೆ: ಜಲಸಂಧಿಗೆ ದಿಗ್ಬಂಧನದ ವಿಷಯವಾಗಿ ಟ್ರಂಪ್ ಹೊಸ ವರಸೆ!

ಪೊಲೀಸರ ಸಮ್ಮುಖದಲ್ಲೇ ಧಮ್ಕಿ: ಸಾರಾ ಗೋವಿಂದ್ ವಿರುದ್ಧ ಚೇತನ್ ಅಹಿಂಸಾ ದೂರು, FIR ದಾಖಲು!

2029ರ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಏಕಾಂಗಿ ಸ್ಪರ್ಧೆ?: 'ಮಹಾ' ಸಚಿವನ ಹೇಳಿಕೆ ಕೋಲಾಹಲ!

ಬೆಂಗಳೂರು: ಅನಾರೋಗ್ಯದಿಂದ ದಕ್ಷ ಅಧಿಕಾರಿ 39 ವರ್ಷದ SP ಲಾವಣ್ಯ ಹಠಾತ್‌ ನಿಧನ!

ಟಿಎಂಸಿ ಕಾರ್ಯಕರ್ತರಿಂದ ಜೀವ ಬೆದರಿಕೆ ಇದೆ; ಮತ ಎಣಿಕೆ ವೇಳೆ ನಮಗೆ ಭದ್ರತೆ ಕೊಡಿ: ಬಂಗಾಳದಲ್ಲಿ ನೂರಾರು ಗ್ರಾಮಸ್ಥರಿಂದ ಪ್ರತಿಭಟನೆ

SCROLL FOR NEXT