ವೈರಮುಡಿ ಬ್ರಹ್ಮೋತ್ಸವದ ಸಾಂದರ್ಭಿಕ ಚಿತ್ರ 
ರಾಜ್ಯ

ಮಾರ್ಚ್ 23ರಿಂದ ಏಪ್ರಿಲ್ 4 ರವರೆಗೆ ವೈರಮುಡಿ ಬ್ರಹ್ಮೋತ್ಸವ: ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದಲ್ಲಿ ಪೂರ್ವ ಸಿದ್ಧತಾ ಸಭೆ!

ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಎನ್. ಚಲುವರಾಯಸ್ವಾಮಿ, ಉತ್ಸವದಲ್ಲಿ ಯಾವುದೇ ಲೋಪದೋಷಗಳಾಗದಂತೆ, ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಮತ್ತು ಬಿಗಿ ಭದ್ರತೆ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಡ್ಯ: ಐತಿಹಾಸಿಕ ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ವೈರಮುಡಿ ಬ್ರಹ್ಮೋತ್ಸವ ಮಾ. 23ರಿಂದ ಏ. 4 ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ ಆಕರ್ಷಣೆಯಾದ ವೈರಮುಡಿ ಕಿರೀಟ ಧಾರಣೆಯು ಮಾ. 28 ರಂದು ಜರುಗಲ್ಲಿದ್ದು, ವೈರಮುಡಿ ಉತ್ಸವದಲ್ಲಿ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೂಚಿಸಿದರು.

ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಎನ್. ಚಲುವರಾಯಸ್ವಾಮಿ, ಉತ್ಸವದಲ್ಲಿ ಯಾವುದೇ ಲೋಪದೋಷಗಳಾಗದಂತೆ, ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಮತ್ತು ಬಿಗಿ ಭದ್ರತೆ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವೈರಮುಡಿ ಉತ್ಸವದಲ್ಲಿ ಲಕ್ಷಾಂತರ ಭಕ್ತಾಗಳು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವುದರ ಜೊತೆಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದರು.

ಪೊಲೀಸ್ ಇಲಾಖೆಯವರು ವೈರಮುಡಿ ಬ್ರಹ್ಮೋತ್ಸವದಲ್ಲಿ ಕಿರೀಟಧಾರಣಾ ಮೆರವಣಿಗೆಯ ಸಂದರ್ಭದಲ್ಲಿ ಶಾಂತಿಯುತವಾಗಿ ಹಾಗೂ ಸಮಾಧಾನವಾಗಿ ಜನರು ದೇವರು ನೋಡವಂತೆ ಅಗತ್ಯ ವ್ಯವಸ್ಥೆ ಮಾಡಬೇಕು. ಈ ಸಂಬಂಧ ದೇವಸ್ಥಾನದ ಅರ್ಚಕರೊಂದಿಗೆ ಸಭೆ ನಡೆಸಿ ಶಾಂತಿಯುತವಾಗಿ ನಡೆಯಲು ಅಗತ್ಯ ಸಿದ್ಥತೆ ಮಾಡಿಕೊಳ್ಳಿ ಎಂದು ಸಚಿವರು ತಿಳಿಸಿದರು.

ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣಯ್ಯ ಮಾತನಾಡಿ, ಕುಡಿಯುವ ನೀರಿನ ಭಕ್ತರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ. ವೈರಮುಡಿ ಉತ್ಸವದಲ್ಲಿ ಜನಸಂದಣಿಯಾಗದಂತೆ ಬ್ಯಾರಿಕೇಡಿಂಗ್ ಆಗಬೇಕು ಎಂದು ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್, ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಭಕ್ತಾದಿಗಳಿಗೆ ಅಗತ್ಯವಿರುವ ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್ ಮತ್ತು ಸಂಚಾರ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ ಆರೋಗ್ಯ ಸೇವೆಗಳು, ಸಾರಿಗೆ ವ್ಯವಸ್ಥೆ (ಕೆ.ಎಸ್.ಆರ್.ಟಿ.ಸಿ ಬಸ್‌ಗಳು) ಮತ್ತು ಬಿಗಿ ಪೊಲೀಸ್ ಬಂದೋಬಸ್ತ್‌ಗೆ ಸಭೆಯಲ್ಲಿ ಆದ್ಯತೆ ನೀಡಲಾಗಿದೆ ಎಂದು ಸಭೆಯಲ್ಲಿ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ವಿ.ಜೆ. ಶೋಭಾರಾಣಿ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!