ಯುಟಿ ಖಾದರ್ online desk
ರಾಜ್ಯ

ವಿಧಾನಸಭೆ ಕಲಾಪ: ಸ್ಪೀಕರ್ ಯುಟಿ ಖಾದರ್ ಸಿಟ್ಟಿಗೆ ಮೂವರು ಅಧಿಕಾರಗಳ ತಲೆದಂಡ!

ಸಿಎಂ ಸಿದ್ದರಾಮಯ್ಯ ಜೊತೆ ನಡೆದ ಸಂಧಾನದ ಬಳಿಕ ಸದನ ನಡೆಸಲು ಒಪ್ಪಿದ ಸ್ಪೀಕರ್ ಖಾದರ್ ಕಲಾಪಕ್ಕೆ ಬಂದು ಕುರ್ಚಿಯಲ್ಲಿ ಕುಳಿತುಕೊಂಡರು.

ಬೆಂಗಳೂರು: ಅಧಿವೇಶನದಲ್ಲಿ ಶಾಸಕರ ಪ್ರಶ್ನೆಗಳಿಗೆ ಉತ್ತರಿಸುವವರೇ ಇಲ್ಲ, ಸಚಿವರು, ಅಧಿಕಾರಿಗಳು ಗೈರಾಗಿದ್ದಾರೆ, ಹೀಗಾದರೆ ಸದನ ನಡೆಸುವುದು ಹೇಗೆ ಎಂದು ಹೊರನಡೆದ ಸ್ಪೀಕರ್ ಯುಟಿ ಖಾದರ್ ಆಕ್ರೋಶಕ್ಕೆ 3 ಅಧಿಕಾರಿಗಳ ತಲೆದಂಡವಾಗಿದೆ.

ವಿಧಾನಸಭೆ ಅಧಿವೇಶನಕ್ಕೆ ಸಚಿವರು ಗೈರಾಗಿದ್ದಾರೆ. ಅಲ್ಲದೇ ಶಾಸಕರ ಪ್ರಶ್ನೆಗಳಿಗೆ ಉತ್ತರ ನೀಡಲು ಸಚಿವರು ಇಲ್ಲ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇಲ್ಲ ಎಂದು ಸ್ಪೀಕರ್​​ ಯುಟಿ ಖಾದರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಬಳಿಕ ಸಿಎಂ ಸಿದ್ದರಾಮಯ್ಯ ಸ್ಪೀಕರ್ ಖಾದರ್ ಜೊತೆ ಮಾತುಕತೆ ನಡೆಸಿ ಮನವೊಲಿಕೆ ಮಾಡಿದ್ದಾರೆ. ಸ್ಪೀಕರ್ ಜೊತೆ ಮಾತನಾಡಿದ ಬಳಿಕ ಮೂವರು ಅಧಿಕಾರಿಗಳ ಸಸ್ಪೆಂಡ್‌ಗೆ ಸೂಚನೆ ನೀಡಿದ್ದಾರೆ.

ಸದನದಲ್ಲಿ ಅತಿ ಹೆಚ್ಚು ಉತ್ತರ ಬಾಕಿ ಉಳಿಸಿಕೊಂಡಿರೋ ಇಲಾಖೆ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸಿದ್ದರಾಮಯ್ಯ ಖಡಕ್ ಸೂಚನೆ ಕೊಟ್ಟಿದ್ದಾರೆ. ಖಾದರ್ ಸಿಟ್ಟಿಗೆ ಮೂವರು ಅಧಿಕಾರ ತಲೆದಂಡವಾಗಿದೆ.

ಮತ್ತೆ ಸದನಕ್ಕೆ ಬಂದ ಸ್ಪೀಕರ್​

ಸಿಎಂ ಸಿದ್ದರಾಮಯ್ಯ ಜೊತೆ ನಡೆದ ಸಂಧಾನದ ಬಳಿಕ ಸದನ ನಡೆಸಲು ಒಪ್ಪಿದ ಸ್ಪೀಕರ್ ಖಾದರ್ ಕಲಾಪಕ್ಕೆ ಬಂದು ಕುರ್ಚಿಯಲ್ಲಿ ಕುಳಿತುಕೊಂಡರು.ಸರ್ಕಾರದ ವಿರುದ್ಧವೇ ಸಿಟ್ಟಾದ ಸ್ಪೀಕರ್​ ಖಾದರ್ ಅವರ ಮನವೊಲಿಕೆ ಮಾಡುವಲ್ಲಿ ಸಿಎಂ ಯಶಸ್ವಿಯಾಗಿದ್ದಾರೆ.

ಶಾಸಕರ ಪ್ರಶ್ನೆಗಳಿಗೆ ಸಿಗಲಿದೆ ಸೂಕ್ತ ಉತ್ತರ

ಲಿಖಿತ ಪ್ರಶ್ನೆಗಳಿಗೆ ಉತ್ತರ ಸಂಬಂಧ ಸಿಎಂ ಹಾಗೂ ಸಚಿವರು ಮತ್ತೆ ಪ್ರತಿಪಕ್ಷ ನಾಯಕರ ಜೊತೆ ಚರ್ಚಿಸಿ ತೀರ್ಮಾನ ಮಾಡಲಾಗಿದೆ. ಭೋಜನ ಸಮಯದ ಬಳಿಕ ಸರ್ಕಾರ ಅದಕ್ಕೆ ಉತ್ತರ ಕೊಡಲಿದೆ ಎಂದು ಸ್ಪೀಕರ್​ ತಿಳಿಸಿದ್ದಾರೆ.

West Asia conflict: ದುಬೈ ಏರ್‌ಪೋರ್ಟ್‌ ಬಳಿ ಡ್ರೋನ್‌ ದಾಳಿ; ವಿಮಾನ ಸಂಚಾರ ತಾತ್ಕಾಲಿಕ ಸ್ಥಗಿತ, 'Hormuz' ರಕ್ಷಣೆಗೆ NATO ನೆರವು ಕೋರಿದ ಟ್ರಂಪ್

ಹಾರ್ಮುಜ್ ನಿಂದ ದೇಶಕ್ಕೆ ತೈಲ ಹಡಗುಗಳ ಸುಗಮ ಸಂಚಾರ: ಇರಾನ್ ನ ಭಾರತ ಒಪ್ಪಿಸಿದ್ದು ಹೇಗೆ?: ಜೈಶಂಕರ್ ಬಿಚ್ಚಿಟ್ಟ ಮಾಹಿತಿ ಇದು...

ಅಡೆತಡೆಗಳು ದೂರ, ಸರ್ಕಾರ ಗ್ರೀನ್ ಸಿಗ್ನಲ್; RCB Unboxing ಕಾರ್ಯಕ್ರಮ ಸೇರಿ ಚಿನ್ನಸ್ವಾಮಿಯಲ್ಲೇ ನಡೆಯಲಿವೆ IPL ಪಂದ್ಯಗಳು!

"Hormuz ಜಲಸಂಧಿಗೆ ಯುದ್ಧ ನೌಕೆ ಕಳಿಸಿ": ಅಮೆರಿಕ ನೆರವಿನ ಕರೆಗೆ No ಎಂದ ಮಿತ್ರ ರಾಷ್ಟ್ರಗಳು- ಟ್ರಂಪ್ ಗೆ ಭಾರಿ ಮುಖಭಂಗ!

ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಮಣಿಶಂಕರ್ ಅಯ್ಯರ್ ವಿರುದ್ಧ ಜೈಪುರದಲ್ಲಿ FIR ದಾಖಲು

SCROLL FOR NEXT