ನಂಜುಂಡಸ್ವಾಮಿ ಹತ್ಯೆ 
ರಾಜ್ಯ

ಚಾಮರಾಜನಗರ: ತನ್ನ ಸಹೋದರಿಯೊಂದಿಗೆ ನಗ್ನವಾಗಿ ಸಿಕ್ಕಿಬಿದ್ದ ಗೆಳೆಯನ ಕತ್ತು ಸೀಳಿದ ಪ್ರಾಣ ಸ್ನೇಹಿತ!

ಸ್ನೇಹಿತನ ಸಹೋದರಿಯ ಜೊತೆಗಿನ ಅಕ್ರಮ ಸಂಬಂಧದಿಂದಾಗಿ ಪ್ರಾಣ ಸ್ನೇಹಿತನನ್ನೇ ಯುವಕನೋರ್ವ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುಂಡ್ಲುಪೇಟೆಯ ದೊಡ್ಡಕೆರೆ ಏರಿ ಬಳಿ ನಡೆದಿದೆ. ಮೃತನನ್ನು ಮೂಖಹಳ್ಳಿ ಗ್ರಾಮದ 23 ವರ್ಷದ ನಂಜುಂಡಸ್ವಾಮಿ ಎಂದು ತಿಳಿದುಬಂದಿದೆ.

ಚಾಮರಾಜನಗರ: ಸ್ನೇಹಿತನ ಸಹೋದರಿಯ ಜೊತೆಗಿನ ಅಕ್ರಮ ಸಂಬಂಧದಿಂದಾಗಿ ಪ್ರಾಣ ಸ್ನೇಹಿತನನ್ನೇ ಯುವಕನೋರ್ವ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುಂಡ್ಲುಪೇಟೆಯ ದೊಡ್ಡಕೆರೆ ಏರಿ ಬಳಿ ನಡೆದಿದೆ. ಮೃತನನ್ನು ಮೂಖಹಳ್ಳಿ ಗ್ರಾಮದ 23 ವರ್ಷದ ನಂಜುಂಡಸ್ವಾಮಿ ಎಂದು ತಿಳಿದುಬಂದಿದೆ. ಪಾರ್ಟಿಗೆಂದು ಗೆಳೆಯ ಅಜಯ್​ ಜೊತೆಗೆ ಹೋಗಿದ್ದ ನಂಜುಂಡಸ್ವಾಮಿಯ ಶವ ಕತ್ತು ಸೀಳಿ ಕೊಲೆ ಮಾಡಿರುವ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದೀಗ ನಂಜುಂಡಸ್ವಾಮಿಯನ್ನು ಅಜಯ್ ಕೊಲೆ ಮಾಡಿರುವ ವಿಷಯ ಬಹಿರಂಗಗೊಂಡಿದೆ.

ನಂಜುಂಡಸ್ವಾಮಿ ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಅಜಯನ್ ನನ್ನು ಪೊಲೀಸರು ಬಂಧಿಸಿದ್ದರು. ತೀವ್ರ ವಿಚಾರಣೆ ನಡೆಸಿದಾಗ ಆರೋಪಿ ಸತ್ಯ ಬಾಯ್ಬಿಟ್ಟಿದ್ದಾನೆ. ನನ್ನ ಸಹೋದರಿಯ ಜೊತೆಗೆ ನಂಜುಂಡಸ್ವಾಮಿ ಅಕ್ರಮ ಸಂಬಂಧ ಹೊಂದಿರುವ ವಿಚಾರ ತಿಳಿದು ಆತನನ್ನು ಹತ್ಯೆ ಮಾಡಿದ್ದಾಗಿ ಅಜಯ್​​ ಹೇಳಿದ್ದಾರೆ. ಅಜಯ್​​ ಸಹೋದರಿಗೆ ಅದಾಗಲೇ ಮದುವಾಗಿದ್ದರೂ ನಂಜುಂಡಸ್ವಾಮಿ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು. ಆಕೆಯ ಜೊತೆ ಏಕಾಂತದಲ್ಲಿದ್ದಾಗಲೇ ಪತಿ ಕೈಗೆ ಇಬ್ಬರೂ ಸಿಕ್ಕಿಬಿದ್ದಿದ್ದರು. ಈ ವಿಚಾರವಾಗಿ ದೊಡ್ಡ ಜಗಳವಾಗಿತ್ತು. ಅಲ್ಲದೆ ಈ ವಿಚಾರ ತಿಳಿದು ಅಜಯ್ ತೀವ್ರವಾಗಿ ಕೋಪಗೊಂಡಿದ್ದನು.

ನಂಜುಂಡಸ್ವಾಮಿಯನ್ನು ಮುಗಿಸಲೇಬೇಕೆಂದು ಹಠಕ್ಕೆ ಬಿದ್ದಿದ್ದ ಅಜಯ್, ನಂಜುಂಡನನ್ನ ಕರೆದುಕೊಂಡು ಹೋಗಿ ಕಂಠಪೂರ್ತಿ ಕುಡಿಸಿ ಬಳಿಕ ಚಾಕುವಿನಿಂದ ಕತ್ತು ಸೀಳಿ ಕೊಲೆ ಮಾಡಿದ್ದನು. ಸದ್ಯ ಪೊಲೀಸರು ಆರೋಪಿ ಅಜಯ್ ನನ್ನ ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹತ್ವದ ಆದೇಶ: ಅಗತ್ಯವಿದ್ದರೆ ಆಕ್ರಮಣಕಾರಿ ಬೀದಿ ನಾಯಿಗಳನ್ನು ಕೊಲ್ಲಲು ಸುಪ್ರೀಂ ಕೋರ್ಟ್ ಅನುಮತಿ!

Ebola outbreak: ಮಾರಣಾಂತಿಕ ಎಬೋಲಾಗೆ 131 ಸಾವು, 500ಕ್ಕೂ ಹೆಚ್ಚು ಶಂಕಿತ ಕೇಸ್; ವಿಶ್ವಸಂಸ್ಥೆಯಿಂದ ತುರ್ತು ಪರಿಸ್ಥಿತಿ ಘೋಷಣೆ!

ದೇವಾಲಯಗಳ ಚಿನ್ನದ ಮೇಲೆ ಪ್ರಧಾನಿ ಮೋದಿ ಕಣ್ಣು?: ಕೇಂದ್ರ ಸರ್ಕಾರ ಹೇಳಿದ್ದೇನು?

ಮುಂದೆ ತುಂಬಾ ಕಠಿಣಾತಿಕಠಿಣ ದಿನಗಳು ಬರಲಿವೆ: ರಾಹುಲ್ ಗಾಂಧಿ ಎಚ್ಚರಿಕೆ

ಸಾರಿಗೆ ಸಂಘಟನೆಗಳಿಗೆ ಹೈಕೋರ್ಟ್ ಬ್ರೇಕ್: ಮೇ 20 ರಿಂದ ಮುಷ್ಕರ ನಡೆಸದಂತೆ ನಿರ್ಬಂಧ

SCROLL FOR NEXT