ಬಾನು ಮುಷ್ತಾಕ್  
ರಾಜ್ಯ

'ಚಪ್ಪಲಿ ಮನೆ ದೇವರು' ವರದಿಗಾರರೇ ಕಪೋಲಕಲ್ಪಿತವಾಗಿ ಬರೆಯಬೇಡಿ, ಪುರಾವೆ ನೀಡಿ: ಸಾಹಿತಿ ಬಾನು ಮುಷ್ತಾಕ್

ಅಂಬೇಡ್ಕರ್‌ ಭವನದಲ್ಲಿ, ರಾಜ್ಯ ದಲಿತ ಸಂಘರ್ಷ ಸಮಿತಿ, ಎಂ.ಬಿ.ಶ್ರೀನಿವಾಸ್‌ ಪ್ರತಿಷ್ಠಾಪನದ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಜನಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

Banu Mushtaq: ಬೂಕರ್‌ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಬಾನು ಮುಷ್ತಾಕ್ ಅವರು ಕಾರ್ಯಕ್ರಮವೊಂದರಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ ಭಾವಚಿತ್ರಕ್ಕೆ ಚಪ್ಪಲಿ ಧರಿಸಿಕೊಂಡು ಪುಷ್ಪ ನಮನ ಸಲ್ಲಿಸಿದ್ದು ಮಾಧ್ಯಮಗಳಲ್ಲಿ ಸುದ್ದಿಯಾದ ನಂತರ ವಿವಾದಕ್ಕೆ ಕಾರಣವಾಗಿದೆ.

ಮಂಡ್ಯದ ಅಂಬೇಡ್ಕರ್ ಭವನದಲ್ಲಿ, ರಾಜ್ಯ ದಲಿತ ಸಂಘರ್ಷ ಸಮಿತಿ, ಎಂ.ಬಿ.ಶ್ರೀನಿವಾಸ್‌ ಪ್ರತಿಷ್ಠಾಪನದ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಜನಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಈ ವೇಳೆ ಅವರು ಚಪ್ಪಲಿ ಧರಿಸಿಕೊಂಡು ಅಂಬೇಡ್ಕರ್‌ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ್ದಾರೆ. ಭಾನು ಅವರು ಚಪ್ಪಲಿ ಹಾಕಿರುವುದನ್ನು ಗಮನಿಸಿದ ಕಾರ್ಯಕ್ರಮ ಸಂಘಟಕರು, ಚಪ್ಪಲಿಯನ್ನ ತೆಗೆದು ಪುಷ್ಪನಮನ ಮಾಡುವಂತೆ ಹೇಳಿದರು.

ಆದರೆ ಬಾನುಮುಷ್ತಾಕ್‌ ಅದಕ್ಕೆ ಒಪ್ಪದೆ ಹಾಗೆಯೇ ಪುಷ್ಪನಮನ ಸಲ್ಲಿಸಿದ್ದಾರೆ ಎಂದು ವರದಿಯಾಗಿತ್ತು. ಅಲ್ಲದೆ ಚಪ್ಪಲಿ ಹೊಲಿಯುವುದು ನಮ್ಮ ವೃತ್ತಿ. ಅದು ನಮ್ಮ ಮನೆ ದೇವರು. ನಮ್ಮ ಅಸ್ಮಿತೆಯ ಸಂಕೇತ, ನಾವು ಚಪ್ಪಲಿ ಹೊಲಿಯುವವರು. ನಮಗೆ ಅದರ ಬಗ್ಗೆ ಅಪಾರ ಗೌರವ ಇದೆ. ನಾನು ಚಪ್ಪಲಿ ಬಿಚ್ಚುವುದಿಲ್ಲ ಎಂದು ಹೇಳಿದ್ದರು ಎಂದು ಸಹ ಸುದ್ದಿಯಾಗಿದೆ.

ಬಾನು ಮುಷ್ತಾಕ್ ಸ್ಪಷ್ಟನೆ

ಚಪ್ಪಲಿ ಮನೆ ದೇವರು ಎಂದು ನಾನು ಹೇಳಿಲ್ಲ, ಮಾಧ್ಯಮದ ವರದಿಗಾರರು ಕಪೋಲಕಲ್ಪಿತ ವರದಿ ಮಾಡಿದ್ದಾರೆ. ನಾವು ಹಾಗೆ ಹೇಳಿದ್ದರೆ ಪುರಾವೆಗಳನ್ನು ನೀಡಲಿ ಎಂದು ಬಾನು ಮುಷ್ತಾಕ್ ಫೇಸ್ ಬುಕ್ ನಲ್ಲಿ ಸವಾಲು ಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಡಿಶಾದ SCB ವೈದ್ಯಕೀಯ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ: ಕನಿಷ್ಠ 10 ಮಂದಿ ಸಾವು, ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

West Asia conflict: ದುಬೈ ಏರ್‌ಪೋರ್ಟ್‌ ಬಳಿ ಡ್ರೋನ್‌ ದಾಳಿ; ಭಾರೀ ಬೆಂಕಿ, ವಿಮಾನ ಸಂಚಾರ ತಾತ್ಕಾಲಿಕ ಸ್ಥಗಿತ

ರಾಜ್ಯಸಭೆಗೆ 26 ಮಂದಿ ಅವಿರೋಧ ಆಯ್ಕೆ: 3ರಾಜ್ಯಗಳಲ್ಲಿ ಬಿಗ್ ಫೈಟ್; ಮೇಲ್ಮನೆಯಲ್ಲಿ ಬಿಜೆಪಿಗೆ ಮತ್ತಷ್ಟು ಬಲ!

ಒಡಿಶಾ ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ 'ಕೈ'ಶಾಸಕರು, ಬಿಡದಿ ರೆಸಾರ್ಟ್‌ನಿಂದ ಬೆಂಗಳೂರಿಗೆ ಶಿಫ್ಟ್..!

ಬಿಜೆಪಿಯಿಂದ ಆಪರೇಷನ್ ಕಮಲ ಯತ್ನ: ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ: ಡಿ.ಕೆ ಶಿವಕುಮಾರ್

SCROLL FOR NEXT