ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಗಿಳಿಶಾಸ್ತ್ರ ನಂಬಿ 35 ಲಕ್ಷ ರೂ ಕಳೆದುಕೊಂಡ IT ಅಧಿಕಾರಿ; ಜ್ಯೋತಿಷಿ ಬಂಧನ

ನಂತರ ಕರೆ ಮಾಡಿ ಚಿನ್ನಾಭರಣ ಕೇಳಿದಾಗ, ಇದೇ ರೀತಿ ಪದೇ ಪದೇ ಚಿನ್ನಾಭರಣ ಕೇಳಿದರೆ, ನಿಮ್ಮ ಕುಟುಂಬದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೆದರಿಸಿದ್ದಾನೆ. ಬಳಿಕ ಅವರು ಠಾಣೆಗೆ ಬಂದು ದೂರು ನೀಡಿದ್ದಾರೆ.

ಬೆಂಗಳೂರು: ಮುಂಬಡ್ತಿ ಹಾಗೂ ಉತ್ತಮ ಸ್ಥಳಕ್ಕೆ ವರ್ಗಾವಣೆಗಾಗಿ ಗಿಳಿ ಶಾಸ್ತ್ರದ ಜ್ಯೋತಿಷಿ ಹೇಳಿಕೆ ಮಾತು ನಂಬಿ ಆದಾಯ ತೆರಿಗೆ ಇಲಾಖೆ ಅಧಿಕಾರಿಯೊಬ್ಬರು ಲಕ್ಷಾಂತರ ರೂ. ಚಿನ್ನಾಭರಣ ಹಾಗೂ ಬೆಳ್ಳಿಯ ವಸ್ತುಗಳನ್ನು ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಈ ಕುರಿತು ಸಂತ್ರಸ್ತ ಅಧಿಕಾರಿ, ಭಾರತಿನಗರ ನಿವಾಸಿ ವೆಂಕಟ್‌ (ಹೆಸರು ಬದಲಿಸಲಾಗಿದೆ) ಅವರು ಸಹಾಯ ಮಾಡುವ ನೆಪದಲ್ಲಿ ಹಣ ಹಾಗೂ ಆಭರಣ ದೋಚಿ ಪರಾರಿಯಾಗಿರುವ ಗಿಣಿಶಾಸ್ತ್ರ ಹೇಳುವ ಶೇಖರ್‌ ಎಂಬುವವನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿ ಶೇಖರ್‌ ಬಂಧನಕ್ಕೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಂತ್ರಸ್ತ ಅಧಿಕಾರಿ ಭಾರತಿ ನಗರದ ಶ್ರೀ ಸರ್ಕಲ್ ಬಳಿ ಜ್ಯೋತಿಷಿ ಶೇಖರ್ ನನ್ನು ಭೇಟಿಯಾದರು. ಶೇಖರ್ ವಿಧಿವಿಧಾನಗಳನ್ನು ಮಾಡಲು ಪ್ರಾರಂಭಿಸುತ್ತಿದ್ದಂತೆ, ಅಧಿಕಾರಿ ಅವರಿಗೆ 194 ಗ್ರಾಂ ಚಿನ್ನಾಭರಣಗಳು ಮತ್ತು ಸುಮಾರು 1.3 ಕೆಜಿ ಬೆಳ್ಳಿ ಮತ್ತು ಸ್ವಲ್ಪ ಹಣವನ್ನು ನೀಡಿದರು. ಶೇಖರ್ ಫೆಬ್ರವರಿ 20 ರಂದು ಆಚರಣೆಗಳಿಗೆ ಅಗತ್ಯವಾದ ಆಭರಣಗಳನ್ನು ತೆಗೆದುಕೊಂಡು ಹೋಗಿದ್ದರು ಮತ್ತು ಅವುಗಳನ್ನು ಒಂದು ದಿನದ ನಂತರ ಹಿಂತಿರುಗಿಸಲಾಗುತ್ತದೆ ಎಂದು ಹೇಳಿದ್ದಾನೆ.

ಮರುದಿನ ಆಭರಣಗಳನ್ನು ಹಿಂತಿರುಗಿಸದಿದ್ದಾಗ, ಅಧಿಕಾರಿ ಅವರನ್ನು ಪದೇ ಪದೇ ಸಂಪರ್ಕಿಸಲು ಪ್ರಯತ್ನಿಸಿದರು. ಆದರೆ ಶೇಖರ್ ಅಧಿಕಾರಿ ಮತ್ತು ಅವರ ಕುಟುಂಬಕ್ಕೆ ಹಾನಿ ಮಾಡುವುದಾಗಿ ಬೆದರಿಕೆ ಹಾಕಿದರು. ನಂತರ ಅವರು ನಾಪತ್ತೆಯಾದರು.

ಒಂದು ದಿನದಲ್ಲಿ ಚಿನ್ನಾಭರಣಗಳನ್ನು ವಾಪಸ್ ನೀಡುವುದಾಗಿ ಹೇಳಿದ್ದ ಶೇಖರ್, ಇನ್ನೂ ಪೂಜೆ ಮುಗಿದಿಲ್ಲ ನಾಳೆ ನಾಡಿದ್ದು ಎಂದು ಸತಾಯಿಸುತ್ತಾ ಒಂದು ವಾರಗಳ ಕಾಲ ಪೂಜೆ ಮಾಡಬೇಕೆಂದು ಹೇಳಿದ್ದಾನೆ. ಆ ಬಳಿಕ ಆತನಿಗೆ ಕರೆ ಮಾಡಿ ಚಿನ್ನಾಭರಣ ವಾಪಸ್ ಕೊಡುವಂತೆ ಕೇಳಿದಾಗ, ಇಂದು ನಾಳೆ ಎಂದು ಸಬೂಬು ಹೇಳುತ್ತಾ ದಿನದೂಡಿದ್ದಾನೆ.

ನಂತರ ಕರೆ ಮಾಡಿ ಚಿನ್ನಾಭರಣ ಕೇಳಿದಾಗ, ಇದೇ ರೀತಿ ಪದೇ ಪದೇ ಚಿನ್ನಾಭರಣ ಕೇಳಿದರೆ, ನಿಮ್ಮ ಕುಟುಂಬದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೆದರಿಸಿದ್ದಾನೆ. ಬಳಿಕ ಅವರು ಠಾಣೆಗೆ ಬಂದು ದೂರು ನೀಡಿದ್ದಾರೆ.

ಐಟಿ ಅಧಿಕಾರಿ ದೂರು ನೀಡಿದ ನಂತರ, ಪೊಲೀಸರು ಶೇಖರ್ ನನ್ನು ತಮಿಳುನಾಡಿನಲ್ಲಿ ಪತ್ತೆಹಚ್ಚಿದರು. ಪೊಲೀಸರು ಈಗ ಅವರಿಂದ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಳ್ಳುವ ಪ್ರಕ್ರಿಯೆಯಲ್ಲಿದ್ದಾರೆ. ಶೇಖರ್ ವಿರುದ್ಧ ಕ್ರಿಮಿನಲ್ ನಂಬಿಕೆ ದ್ರೋಹ, ವಂಚನೆ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?