ಕಮಲಮ್ಮ 
ರಾಜ್ಯ

ಯಾದಗಿರಿ: ಮಗನ ಅನೈತಿಕ ಸಂಬಂಧಕ್ಕೆ ತಾಯಿಗೆ ಶಿಕ್ಷೆ; ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ನದಿಗೆ ಹಾರಿ ಮಹಿಳೆ ಆತ್ಮಹತ್ಯೆ!

ಕಮಲಮ್ಮ ಸಿಳ್ಳೆ ಕ್ಯಾತ ಸಮುದಾಯಕ್ಕೆ ಸೇರಿದವರು. ಈಕೆಯ ಪುತ್ರ ಎರ್ರಿಸ್ವಾಮಿ ವಿರುದ್ಧ ಅನೈತಿಕ ಸಂಬಂಧದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ತಮ್ಮದೇ ಸಮುದಾಯದ ಮುಖಂಡರು ಇಡೀ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ವಿಧಿಸಿದ್ದಾರೆ ಎನ್ನಲಾಗಿದೆ.

ಯಾದಗಿರಿ: ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ಮಹಿಳೆಯೊಬ್ಬರು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ವಡಗೇರ ತಾಲೂಕಿನ ಜೋಳದಡಗಿ ಬ್ರಿಡ್ಜ್–ಕಂ–ಬ್ಯಾರೇಜ್ ಬಳಿ ನಡೆದಿದೆ.

ಯಾದಗಿರಿ ನಗರದ ಹೊರವಲಯದ ಗಿರಿನಗರ ನಿವಾಸಿ ಕಮಲಮ್ಮ (42) ಆತ್ಮಹತ್ಯೆ ಮಾಡಿಕೊಂಡ ಮಹಿಳೆ . ಕಮಲಮ್ಮ ಸಿಳ್ಳೆ ಕ್ಯಾತ ಸಮುದಾಯಕ್ಕೆ ಸೇರಿದವರು. ಈಕೆಯ ಪುತ್ರ ಎರ್ರಿಸ್ವಾಮಿ ವಿರುದ್ಧ ಅನೈತಿಕ ಸಂಬಂಧದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ತಮ್ಮದೇ ಸಮುದಾಯದ ಮುಖಂಡರು ಇಡೀ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ವಿಧಿಸಿದ್ದಾರೆ ಎನ್ನಲಾಗಿದೆ.

ಮೀನುಗಾರಿಕೆ ನಡೆಸುವುದು ಹಾಗೂ ಮೀನು ಮಾರಾಟ ಮಾಡಲು ಕೂಡ ಅವಕಾಶ ನೀಡದೆ ಮುಖಂಡರು ನಿರ್ಬಂಧ ಹೇರಿದ್ದರು. ಇದರಿಂದ ಮನನೊಂದು ಕಮಲಮ್ಮ ಮಗಳ ಊರಾದ ಜೋಳದಡಗಿ ಗ್ರಾಮಕ್ಕೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ಮುನ್ನ ಬ್ಯಾರೇಜ್ ಮೇಲೆಯೇ ತಮ್ಮ ಮಾಂಗಲ್ಯ ಸರ ತೆಗೆದಿಟ್ಟಿರುವುದು ಗಮನಕ್ಕೆ ಬಂದಿದೆ. ಘಟನೆ ಕುರಿತು ಮಾಹಿತಿ ದೊರಕುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ. ಈ ಸಂಬಂಘ ವಡಗೇರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!