ಸಂಗ್ರಹ ಚಿತ್ರ 
ರಾಜ್ಯ

SSLC exam 2026: ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ; 8.65 ಲಕ್ಷ ವಿದ್ಯಾರ್ಥಿಗಳು ನೋಂದಣಿ, All the best

ಸರ್ಕಾರ ಹಾಲ್ ಟಿಕೆಟ್ ತೋರಿಸುವ ಮೂಲಕ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನಬೂ ವಿದ್ಯಾರ್ಥಿಗಳಿಗೆ ಕಲ್ಪಿಸಿದೆ.

ಬೆಂಗಳೂರು: ರಾಜ್ಯಾದ್ಯಂತ ಬುಧವಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಏಪ್ರಿಲ್.2ರವರೆಗೆ ನಡೆಯಲಿದೆ. ಒಟ್ಟು 8,65,988 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ.

8,65,988 ವಿದ್ಯಾರ್ಥಿಗಳ ಪೈಕಿ 4,44,172 ಬಾಲಕರು ಮತ್ತು 4,21,816 ಬಾಲಕಿಯರು ಪರೀಕ್ಷೆಗೆ ಹಾಜರಾಗುತ್ತಿದ್ದು., ರಾಜ್ಯದಾದ್ಯಂತ 2,871 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.

ಪರೀಕ್ಷೆಗಳು ಪ್ರಥಮ ಭಾಷಾ ವಿಷಯದಿಂದ ಆರಂಭವಾಗುತ್ತಿದ್ದು, ಕನ್ನಡ, ತೆಲುಗು, ತಮಿಳು, ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳು ಒಳಗೊಂಡಿವೆ.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತೆ ಒದಗಿಸಲಾಗಿದೆ. ವಿದ್ಯಾರ್ಥಿಗಳು ನಿಗದಿತ ಡ್ರೆಸ್ ಕೋಡ್ ಪಾಲಿಸಬೇಕು ಹಾಗೂ ಪರೀಕ್ಷಾ ಸಮಯಕ್ಕಿಂತ ಅರ್ಧ ಗಂಟೆ ಮುಂಚಿತವಾಗಿ ಕೇಂದ್ರಗಳಿಗೆ ಹಾಜರಾಗಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಸೂಚನೆ ನೀಡಿದೆ.

ಸರ್ಕಾರ ಹಾಲ್ ಟಿಕೆಟ್ ತೋರಿಸುವ ಮೂಲಕ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನಬೂ ವಿದ್ಯಾರ್ಥಿಗಳಿಗೆ ಕಲ್ಪಿಸಿದೆ.

ಪರೀಕ್ಷಾ ಪ್ರಕ್ರಿಯೆ ಪಾರದರ್ಶಕವಾಗಿರಲು, ಹಲವು ಜಿಲ್ಲೆಗಳಲ್ಲಿ ವೆಬ್‌ಸ್ಟ್ರೀಮಿಂಗ್ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳು ಮೇಲ್ವಿಚಾರಣೆ ನಡೆಸಲಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಇಯರ್‌ಫೋನ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಸಾಧನಗಳನ್ನು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಬಳಸುವುದು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಪರೀಕ್ಷಾ ಕೇಂದ್ರದ ಮುಖ್ಯಾಧಿಕಾರಿಯೊಬ್ಬರ ಬಳಿ ಮಾತ್ರ ಕ್ಯಾಮೆರಾ ಇಲ್ಲದ ಸರಳ ಮೊಬೈಲ್ ಫೋನ್ ಬಳಸಲು ಅವಕಾಶ ನೀಡಲಾಗಿದೆ.

ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದ್ದು, ಯಾವುದೇ ಭಯವಿಲ್ಲದೆ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲು ಸಲಹೆ ನೀಡಿದ್ದಾರೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಕೂಡ ವಿದ್ಯಾರ್ಥಿಗಳಿಗೆ ಶುಭಹಾರೈಸಿದ್ದು, ಇತ್ತೀಚಿನ ಶಿಕ್ಷಣ ಸುಧಾರಣೆಗಳಿಂದ ಪರೀಕ್ಷಾ ಒತ್ತಡ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ.

'ಹೌದು, ನಾನು ಜೀವಂತವಾಗಿದ್ದೇನೆ': ಅಮೆರಿಕದ ರಾಯಭಾರಿಯೊಂದಿಗಿರುವ ಹೊಸ ವಿಡಿಯೋ ಹಂಚಿಕೊಂಡ ಇಸ್ರೇಲ್ ಪ್ರಧಾನಿ!

UAE ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಮಾತುಕತೆ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಕುರಿತು ಚರ್ಚೆ!

ಬೆಂಗಳೂರು: ಜೀವಂತ ತಂದೆಯನ್ನೇ ಗೋಣಿ ಚೀಲದಲ್ಲಿ ತುಂಬಿ ಕೊರಿಯರ್ ಗೆ ಯತ್ನಿಸಿದ ಮಹಿಳೆ!ಮುಂದೇನಾಯ್ತು? ಈ Video ನೋಡಿ...

ನಿಮ್ಮ ಉದಾಸೀನ ಪ್ರವೃತಿಯಿಂದ ಸರ್ಕಾರಕ್ಕೆ ಮುಜುಗರ: ಸಚಿವರು-ಅಧಿಕಾರಿಗಳ ವಿರುದ್ಧ ಸಿಎಂ ಗರಂ, ಉತ್ತರಿಸುವಂತೆ ಖಡಕ್ ಸೂಚನೆ

ಕಾಬೂಲ್ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ: 'ಇತಿಹಾಸ ಪುನರಾವರ್ತನೆಯಾದರೆ, ಪಾಕ್‌ಗೆ ತುಂಬಾ ಕೆಟ್ಟದ್ದು' ಎಂದ ಮುಂಬೈ ಇಂಡಿಯನ್ಸ್ ಸ್ಪಿನ್ನರ್!

SCROLL FOR NEXT