ಗೋಣಿ ಚೀಲದಲ್ಲಿ ವೃದ್ಧ ವ್ಯಕ್ತಿ 
ರಾಜ್ಯ

ಬೆಂಗಳೂರು: ಜೀವಂತ ತಂದೆಯನ್ನೇ ಗೋಣಿ ಚೀಲದಲ್ಲಿ ತುಂಬಿ ಕೊರಿಯರ್ ಗೆ ಯತ್ನಿಸಿದ ಮಹಿಳೆ!ಮುಂದೇನಾಯ್ತು? ಈ Video ನೋಡಿ...

ಇಬ್ಬರು ಮಹಿಳೆಯರು ಮತ್ತು ವೃದ್ಧರನ್ನು ಒಳಗೊಂಡ ಐವರ ಗುಂಪು, ವೈಯಾಲಿಕಾವಲ್ ಬಳಿಯ ವಿನಾಯಕ ಸರ್ಕಲ್‌ನಲ್ಲಿರುವ ಕೊರಿಯರ್ ಕಚೇರಿಗೆ ಹೋಗಿ, ಗೋಣಿ ಚೀಲದಲ್ಲಿ ತಂದಿದ್ದನ್ನು ಪಾರ್ಸೆಲ್ ಮಾಡಲು ಹೇಳಿದ್ದಾರೆ.

ಬೆಂಗಳೂರು: ರೀಲ್ಸ್ ಗಾಗಿ ಜನ ಏನೆಲ್ಲಾ ಮಾಡ್ತಾರೆ ನೋಡಿ. ಬೆಂಗಳೂರಿನ ಕುಟುಂಬವೊಂದು ವೃದ್ಧ ವ್ಯಕ್ತಿಯನ್ನು ಗೋಣಿಚೀಲದಲ್ಲಿ ತುಂಬಿ "ಕೊರಿಯರ್" ಗೆ ಯತ್ನಿಸಿರುವ ಘಟನೆ ಮಂಗಳವಾರ ನಡೆದಿದೆ. ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇಬ್ಬರು ಮಹಿಳೆಯರು ಮತ್ತು ವೃದ್ಧರನ್ನು ಒಳಗೊಂಡ ಐವರ ಗುಂಪು, ವೈಯಾಲಿಕಾವಲ್ ಬಳಿಯ ವಿನಾಯಕ ಸರ್ಕಲ್‌ನಲ್ಲಿರುವ ಕೊರಿಯರ್ ಕಚೇರಿಗೆ ಹೋಗಿ, ಗೋಣಿ ಚೀಲದಲ್ಲಿ ತಂದಿದ್ದನ್ನು ಪಾರ್ಸೆಲ್ ಮಾಡಲು ಹೇಳಿದ್ದಾರೆ.

ಒಳಗೆ ಏನಿದೆ ಎಂದು ಸಿಬ್ಬಂದಿ ಕೇಳಿದಾಗ, ಕುಟುಂಬದವರು ಮೌನವಾಗಿಯೇ ಇದ್ದರು. ಇದರಿಂದ ಅಚ್ಚರಿಗೊಂಡ ಸಿಬ್ಬಂದಿ ಪಾರ್ಸೆಲ್ ತೆರೆದು ನೋಡಿದಾಗ ಶಾಕ್ ಆಗಿದ್ದಾರೆ. ವೃದ್ಧನೊಬ್ಬ ಉಸಿರಾಟದ ತೊಂದರೆಯಾಗಿ ಒದ್ದಾಡುತ್ತಿರುವುದು ಕಂಡುಬಂದಿದೆ. ಇಷ್ಟಾದರೂ ತಂಡ ಇವರನ್ನು ಬೇರೆ ರಾಜ್ಯಕ್ಕೆ ಪಾರ್ಸೆಲ್‌ ಮಾಡಿ ಹಣ ಕೊಡುತ್ತೇವೆ ಎಂದು ಹೇಳಿದ್ದಾರೆ.

ಚೀಲದಲ್ಲಿ ವೃದ್ಧ ವ್ಯಕ್ತಿ ಇರುವುದರಿಂದ ಕೋರಿಯರ್‌ ಮಾಡಲು ಸಾಧ್ಯವಿಲ್ಲ ಎಂದು ಸಿಬ್ಬಂದಿ ನಿರಾಕರಿಸಿದ್ದಾರೆ. ಈ ವೇಳೆ ವಾಗ್ವಾದ ನಡೆದಿದೆ. ಇದರಿಂದ ತಲೆಕೆಡಿಸಿಕೊಂಡ ಸಿಬ್ಬಂದಿ ಕೂಡಲೇ ವೈಯಾಲಿಕಾವಲ್‌ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಅಸಲಿ ಕಥೆ ಬೆಳಕಿಗೆ ಬಂದಿದೆ. ಯುಗಾದಿ ಮತ್ತು ರಂಜಾನ್ ಹಬ್ಬದ ಸಮಯದಲ್ಲಿ ಬಸ್ ಟಿಕೆಟ್‌ಗಳು ಹೇಗೆ ಹೆಚ್ಚಾಗಿ ಮಾರಾಟವಾಗುತ್ತವೆ ಎಂಬುದರ ಕುರಿತು ಜನರಿಗೆ ಸಂದೇಶ ಮಾಡಲು ಒಂದು ರೀಲ್ಸ್ ಮಾಡಲಾಯಿತು ಎಂಬುದನ್ನು ಒಪ್ಪಿಕೊಂಡಿದ್ದಾರೆ.

ಗೋಣಿಚೀಲದಲ್ಲಿ ತುಂಬಿದ ವ್ಯಕ್ತಿ ಕುಟುಂಬದ ವಿರುದ್ಧ ಯಾವುದೇ ಆರೋಪ ಮಾಡಿಲ್ಲ. ಈ ಸಂಬಂಧ ಕೊರಿಯರ್ ಏಜೆನ್ಸಿಯ ಮಾಲೀಕರು ಅಥವಾ ವ್ಯವಸ್ಥಾಪಕರು ದೂರು ದಾಖಲಿಸಿದರೆ ಏನಾದರೂ ಕ್ರಮ ಕೈಗೊಳ್ಳಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಹೌದು, ನಾನು ಜೀವಂತವಾಗಿದ್ದೇನೆ': ಅಮೆರಿಕದ ರಾಯಭಾರಿಯೊಂದಿಗಿರುವ ಹೊಸ ವಿಡಿಯೋ ಹಂಚಿಕೊಂಡ ಇಸ್ರೇಲ್ ಪ್ರಧಾನಿ!

ಇರಾನ್ ವಾರ್ನಿಂಗ್ ಬೆನ್ನಲ್ಲೇ 'ಕಚ್ಚಾ ತೈಲ' ಮತ್ತಷ್ಟು ದುಬಾರಿ! ಪ್ರತಿ ಬ್ಯಾರೆಲ್ ಗೆ 103 ಡಾಲರ್ ಏರಿಕೆ!

UAE ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಮಾತುಕತೆ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಕುರಿತು ಚರ್ಚೆ!

ನಿಮ್ಮ ಉದಾಸೀನ ಪ್ರವೃತಿಯಿಂದ ಸರ್ಕಾರಕ್ಕೆ ಮುಜುಗರ: ಸಚಿವರು-ಅಧಿಕಾರಿಗಳ ವಿರುದ್ಧ ಸಿಎಂ ಗರಂ, ಉತ್ತರಿಸುವಂತೆ ಖಡಕ್ ಸೂಚನೆ

ಕಾಬೂಲ್ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ: 'ಇತಿಹಾಸ ಪುನರಾವರ್ತನೆಯಾದರೆ, ಪಾಕ್‌ಗೆ ತುಂಬಾ ಕೆಟ್ಟದ್ದು' ಎಂದ ಮುಂಬೈ ಇಂಡಿಯನ್ಸ್ ಸ್ಪಿನ್ನರ್!

SCROLL FOR NEXT