ದಿನೇಶ್ ಗುಂಡೂರಾವ್ 
ರಾಜ್ಯ

CSR ಸಹಕಾರದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಉಚಿತ ಎಲೆಕ್ಟ್ರಿಕ್ ಬೈಕ್ ವಿತರಣೆ

ಪ್ರಸ್ತುತ ತುಮಕೂರು, ಬೆಂಗಳೂರು ದಕ್ಷಿಣ (ರಾಮನಗರ), GBA ಹಾಗೂ ಬೆಂಗಳೂರು ನಗರ ಜಿಲ್ಲೆಯ ಆಯ್ದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮೊದಲ ಹಂತದಲ್ಲಿ ಒಟ್ಟು 69 ಇ-ಬೈಕ್ (Electric Bike) ಗಳನ್ನು ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಬೆಂಗಳೂರು: ಬೆಂಗಳೂರಿನ ಆರೋಗ್ಯಸೌಧದ ಆವರಣದಲ್ಲಿ ಖಾಸಗಿ ಸಂಸ್ಥೆ ಸಹಭಾಗಿತ್ವದಲ್ಲಿ ಆಶಾ ಕಾರ್ಯಕರ್ತರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉಚಿತವಾಗಿ ಎಲೆಕ್ಟ್ರಿಕ್ ಬೈಕ್ ವಿತರಿಸಿದರು.

ಬಳಿಕ ಮಾತನಾಡಿದ ಸಚಿವರು, ಗ್ರಾಮೀಣ ಭಾಗದಲ್ಲಿ ಮತ್ತು ನಗರದ ಹೊರ ಪ್ರದೇಶದಲ್ಲಿ ಆರೋಗ್ಯ ಸೇವೆಗೆ ಒಂದು ಹೊಸ ಸಾಧನ ಸೇರ್ಪಡೆಯಾಗುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ "ಯುನೈಟೆಡ್ ವೇ ಆಫ್ ಬೆಂಗಳೂರು" (UWBe) ಸಂಸ್ಥೆ ಮತ್ತು "ಹೆಲ್ತಿಯಮ್ ಮೆಡ್‌ಟೆಕ್ ಸಂಸ್ಥೆ"ಯ ಸಹಯೋಗದೊಂದಿಗೆ ಸಿ.ಎಸ್.ಆರ್ (CSR) ಯೋಜನೆಯಡಿ ಇ-ಬೈಕ್‌ಗಳನ್ನು ನೀಡುತ್ತಿರುವುದು ಸಂತಸದ ವಿಷಯ ಎಂದರು.

ಪ್ರಸ್ತುತ ತುಮಕೂರು, ಬೆಂಗಳೂರು ದಕ್ಷಿಣ (ರಾಮನಗರ), GBA ಹಾಗೂ ಬೆಂಗಳೂರು ನಗರ ಜಿಲ್ಲೆಯ ಆಯ್ದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮೊದಲ ಹಂತದಲ್ಲಿ ಒಟ್ಟು 69 ಇ-ಬೈಕ್ (Electric Bike) ಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಈ ಸಂಸ್ಥೆಯವರು ಮುಂದಿನ ದಿನಗಳಲ್ಲಿ ಹಂತಹಂತವಾಗಿ ಇನ್ನುಳಿದ ಜಿಲ್ಲೆಗಳಿಗೆ ಇ-ಬೈಕ್ ಗಳನ್ನು ನೀಡಲು ಸಹಕರಿಸುವುದಾಗಿ ತಿಳಿಸಿದ್ದಾರೆ. ಈ ದ್ವಿಚಕ್ರ ವಾಹನಗಳು ನಮ್ಮ ಆರೋಗ್ಯ ಸೇವೆಯನ್ನು ಜನರ ಮನೆಬಾಗಿಲಿಗೆ ತಲುಪಿಸಲು ಸಹಾಯ ಮಾಡಲಿವೆ. ಆರೋಗ್ಯ ಸೇವೆ ಎನ್ನುವುದು ಕೇವಲ ಆಸ್ಪತ್ರೆಗಳಿಗೆ ಸೀಮಿತವಾಗದೆ, ಜನರ ಮನೆ ಬಾಗಿಲಿಗೆ ತೆಗೆದುಕೊಂಡು ಹೋಗಬೇಕು ಎನ್ನುವ ನಮ್ಮ ಆಶಯಕ್ಕೆ ಪೂರಕವಾಗಿದೆ ಎಂದು ತಿಳಿಸಿದರು.

ನಮ್ಮ ಆಶಾ ಕಾರ್ಯಕರ್ತೆಯರು ಮತ್ತು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಹಗಲಿರುಳು ಎನ್ನದೆ ಜನರಿಗೆ ಆರೋಗ್ಯ ಸೇವೆ ನೀಡಲು ಶ್ರಮಿಸುತ್ತಿದ್ದಾರೆ. ದೂರದ ಊರುಗಳಿಗೆ, ಕುಗ್ರಾಮಗಳಿಗೆ ಹೋಗಲು ಅವರಿಗೆ ಸಾರಿಗೆಯ ಸಮಸ್ಯೆ ಆಗುತ್ತಿತ್ತು. ಈಗ ನೀಡಲಾಗುತ್ತಿರುವ ಈ ಇ-ಬೈಕ್‌ಗಳಿಂದ ಅವರು ಸಕಾಲಕ್ಕೆ ಜನರ ಬಳಿಗೆ ಹೋಗಿ, ಸರಿಯಾದ ಸಮಯಕ್ಕೆ ಚಿಕಿತ್ಸೆ ಮತ್ತು ಸಲಹೆಗಳನ್ನು ನೀಡಲು ಇದು ಸಹಕಾರಿ. ಬೈಕ್ ನೊಂದಿಗೆ, ಹೆಲ್ಮೆಟ್, ನೀರಿನ ಬಾಟಲ್, ರೈನಕೋಟ್ ಸಹ ನೀಡಲಾಗುತ್ತಿದೆ ಎಂದು ತಿಳಿಸಿದರು.

'ಹೌದು, ನಾನು ಜೀವಂತವಾಗಿದ್ದೇನೆ': ಅಮೆರಿಕದ ರಾಯಭಾರಿಯೊಂದಿಗಿರುವ ಹೊಸ ವಿಡಿಯೋ ಹಂಚಿಕೊಂಡ ಇಸ್ರೇಲ್ ಪ್ರಧಾನಿ!

UAE ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಮಾತುಕತೆ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಕುರಿತು ಚರ್ಚೆ!

ಬೆಂಗಳೂರು: ಜೀವಂತ ತಂದೆಯನ್ನೇ ಗೋಣಿ ಚೀಲದಲ್ಲಿ ತುಂಬಿ ಕೊರಿಯರ್ ಗೆ ಯತ್ನಿಸಿದ ಮಹಿಳೆ!ಮುಂದೇನಾಯ್ತು? ಈ Video ನೋಡಿ...

ನಿಮ್ಮ ಉದಾಸೀನ ಪ್ರವೃತಿಯಿಂದ ಸರ್ಕಾರಕ್ಕೆ ಮುಜುಗರ: ಸಚಿವರು-ಅಧಿಕಾರಿಗಳ ವಿರುದ್ಧ ಸಿಎಂ ಗರಂ, ಉತ್ತರಿಸುವಂತೆ ಖಡಕ್ ಸೂಚನೆ

ಕಾಬೂಲ್ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ: 'ಇತಿಹಾಸ ಪುನರಾವರ್ತನೆಯಾದರೆ, ಪಾಕ್‌ಗೆ ತುಂಬಾ ಕೆಟ್ಟದ್ದು' ಎಂದ ಮುಂಬೈ ಇಂಡಿಯನ್ಸ್ ಸ್ಪಿನ್ನರ್!

SCROLL FOR NEXT