ಮದ್ಯ (ಸಂಗ್ರಹ ಚಿತ್ರ) 
ರಾಜ್ಯ

ಅಕ್ರಮ ಮದ್ಯ ಮಾರಾಟ ವಿರುದ್ಧ ಸರ್ಕಾರ ಕ್ರಮ: ಕಾನೂನು ಬಿಗಿಗೊಳಿಸಲು ಮುಂದು, NDPS ಕಾಯ್ದೆಯಡಿ ಸೇರ್ಪಡೆಗೆ ಚಿಂತನೆ..!

ಕರ್ನಾಟಕ ಅಬಕಾರಿ ಕಾಯ್ದೆ 1965ಕ್ಕೆ ಹೊಸ ಸ್ವರೂಪ ನೀಡಿ, ಕಾಯ್ದೆಯನ್ನು ಜಾರಿಗೆ ತರುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಅಲ್ಲದೆ, ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತು ನಿಯಂತ್ರಣ ಕಾಯ್ದೆಯಡಿಗೆ ತರುವ ಮೂಲಕ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕುರಿತಂತೆಯೂ ಚಿಂತನೆ ನಡೆಸುತ್ತಿದೆ.

ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ತಯಾರಿಕೆಯನ್ನು ಸಂಪೂರ್ಣವಾಗಿ ಹತ್ತಿಕ್ಕಲು ರಾಜ್ಯ ಸರ್ಕಾರ ಕಠಿಣ ಹೆಜ್ಜೆ ಇರಿಸಲು ಮುಂದಾಗಿದೆ.

ಕರ್ನಾಟಕ ಅಬಕಾರಿ ಕಾಯ್ದೆ 1965ಕ್ಕೆ ಹೊಸ ಸ್ವರೂಪ ನೀಡಿ, ಕಾಯ್ದೆಯನ್ನು ಜಾರಿಗೆ ತರುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಅಲ್ಲದೆ, ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತು ನಿಯಂತ್ರಣ ಕಾಯ್ದೆಯಡಿಗೆ ತರುವ ಮೂಲಕ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕುರಿತಂತೆಯೂ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ,

ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅಕ್ರಮ ಮದ್ಯದ ದಂಧೆಯ ಕುರಿತು ಕೇಳಿದ ಪ್ರಶ್ನೆಗೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಉತ್ತರಿಸಿದರು.

ಈ ವಿಷಯ ಪ್ರಸ್ತಾಪವಾಗುತ್ತಿದ್ದಂತೆ, ರಾಜ್ಯದಲ್ಲಿ ಅಕ್ರಮ ಮದ್ಯ ಉತ್ಪಾದನೆ ಮತ್ತು ಮಾರಾಟ ಹೆಚ್ಚುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಕೆ.ಪಿ. ಕೃಷ್ಣನ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಹೊಸ ಕಾನೂನು ರೂಪಿಸುವ ಕುರಿತು ಶಿಫಾರಸುಗಳನ್ನು ಸಲ್ಲಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಬಸನಗೌಡ ದದ್ದಲ್ ಅವರು ವಿಷಯ ಪ್ರಸ್ತಾಪಿಸಿ, ಗಡಿ ಪ್ರದೇಶಗಳಲ್ಲಿ ವಿಶೇಷವಾಗಿ ತೆಲಂಗಾಣ ಗಡಿಯಲ್ಲಿರುವ ಗ್ರಾಮಗಳಲ್ಲಿ—ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದೆ. ಕಿರಾಣಿ ಅಂಗಡಿಗಳ ಮೂಲಕವೇ ಮದ್ಯ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿದರು.

ತೆಲಂಗಾಣದಿಂದ ಪೌಡರ್ ತರಿಸಿಕೊಂಡು ಇಲ್ಲಿ ಮದ್ಯ ತಯಾರಿಸಿ ಮಾರಾಟ ಮಾಡಲಾಗುತ್ತಿದೆ. ಇದರಿಂದ ಯುವಕರು ವ್ಯಸನಕ್ಕೆ ಒಳಗಾಗಿ ಅಪರಾಧಗಳಲ್ಲಿ ತೊಡಗುತ್ತಿದ್ದಾರೆ. ಇದನ್ನು ತಡೆಯಲು ಕಠಿಣ ಕ್ರಮ ಅಗತ್ಯ ಎಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ತಿಮ್ಮಾಪುರ, ಕೆಲವು ಮಂದಿ ಸೈನಿಕ ಕ್ಯಾಂಟೀನ್‌ಗಳಿಂದ ಮದ್ಯ ತರಿಸಿಕೊಂಡು ಗ್ರಾಮಗಳಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ. ಬೇಡಿಕೆ ಹೆಚ್ಚಿರುವ ಹಿನ್ನೆಲೆಯಲ್ಲಿ ಒಂದು ಕಡೆ ಹೊಸ ಅಂಗಡಿಗಳನ್ನು ತೆರೆಯಲು ಒತ್ತಡವಿದ್ದು, ಇನ್ನೊಂದು ಕಡೆ ಅಕ್ರಮ ಮಾರಾಟವೂ ಹೆಚ್ಚುತ್ತಿದೆ ಎಂದು ಹೇಳಿದರು.

ಇದೇ ವೇಳೆ ‘ಸಿಎಚ್ ಪೌಡರ್’ ಎಂಬ ಅಪಾಯಕಾರಿ ಪದಾರ್ಥದ ಬಳಕೆಯ ಕುರಿತಂತೆ ಸಚಿವರು ಕಳವಳ ವ್ಯಕ್ತಪಡಿಸಿದರು.

ಇದು ಅಲ್ಪ ಪ್ರಮಾಣದಲ್ಲೇ ದೊಡ್ಡ ಪ್ರಮಾಣದ ಅಕ್ರಮ ಮದ್ಯ ತಯಾರಿಸಲು ಬಳಸಲಾಗುತ್ತದೆ. ಈ ಪದಾರ್ಥದ ಮಾರಾಟವನ್ನು ಆಂಧ್ರಪ್ರದೇಶದಲ್ಲಿ ಕಾನೂನುಬದ್ಧವಾಗಿ ನಡೆಯುತ್ತಿದೆ ಎಂಬುದನ್ನೂ ಅವರು ಉಲ್ಲೇಖಿಸಿದರು.

ಈ ಹಿನ್ನೆಲೆಯಲ್ಲಿ ಇಂತಹ ಪದಾರ್ಥಗಳನ್ನು ಸಹ NDPS ಕಾಯ್ದೆಯಡಿ ತರಲು ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಲಿದೆ. ಅಗತ್ಯವಿದ್ದರೆ ರಾಜ್ಯ ಮಟ್ಟದಲ್ಲೇ ಹೊಸ ಕಾನೂನು ತರಲಾಗುವುದು ಎಂದು ತಿಳಿಸಿದರು.

ಇದೇ ವೇಳೆ, ಅಬಕಾರಿ ಇಲಾಖೆ ಮತ್ತು ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ. ಕೃಷ್ಣನ್ ಸಮಿತಿಯ ವರದಿ ಬಂದ ನಂತರ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಐತಿಹಾಸಿಕ: ಪ.ಬಂಗಾಳದ ನೂತನ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ, ಹೊಸ ರಾಜಕೀಯ ಯುಗಕ್ಕೆ ಚಾಲನೆ

ಎಡಪಕ್ಷಗಳ ಬೆಂಬಲ ಸಿಕ್ಕರೂ ಟಿವಿಕೆಗೆ ಸಿಕ್ಕಿಲ್ಲ ಸರ್ಕಾರ ರಚನೆ ಭಾಗ್ಯ, ಮ್ಯಾಜಿಕ್ ಸಂಖ್ಯೆಗೆ 2 ಸ್ಥಾನ ಕೊರತೆ; ಇಂದು ಇಲ್ಲ ವಿಜಯ್ ಪ್ರಮಾಣ ವಚನ-Video

ನೂತನ CDS ಆಗಿ ಲೆ. ಜನರಲ್ ಎನ್ ಎಸ್ ರಾಜಾ ಸುಬ್ರಮಣಿ ನೇಮಕ

ಶಾಸಕರ ನಕಲಿ ಬೆಂಬಲ ಪತ್ರ: ಟಿವಿಕೆ ಪಕ್ಷದ ವಿರುದ್ಧ TTV ದಿನಕರನ್ ಪೊಲೀಸರಿಗೆ ದೂರು!

ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ: ಇಂದು ಪ್ರಮಾಣ ವಚನ

SCROLL FOR NEXT