ವಿಧಾನ ಪರಿಷತ್  
ರಾಜ್ಯ

ಪರಿಷತ್ತಿನಲ್ಲೂ ಜಾಹೀರಾತು ಶುಲ್ಕ ವಿಧಿಸುವ, ಪೊಲೀಸ್ ವರ್ಗಾವಣೆಗೆ ಸಂಬಂಧಿಸಿದ ಮಸೂದೆಗಳ ಅಂಗೀಕಾರ

ಈ ಎರಡೂ ಮಸೂದೆಗಳನ್ನು ಮಾರ್ಚ್ 16 ರಂದು ಕರ್ನಾಟಕ ವಿಧಾನಸಭೆ ಅಂಗೀಕರಿಸಲಾಗಿತ್ತು.

ಬೆಂಗಳೂರು: ರಾಜ್ಯಾದ್ಯಂತ ಪುರಸಭೆಗಳು ಹೋರ್ಡಿಂಗ್‌ಗಳು, ಜಾಹೀರಾತು ಫಲಕಗಳ ಶುಲ್ಕದ ಮೇಲೆ ತೆರಿಗೆ ವಿಧಿಸಲು ಅನುವು ಮಾಡಿಕೊಡುವ ತಿದ್ದುಪಡಿ ಮಸೂದೆ ಮತ್ತು ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಎರಡು ತಿದ್ದುಪಡಿ ಮಸೂದೆಗಳನ್ನು ವಿಧಾನ ಪರಿಷತ್ತು ಬುಧವಾರ ಅಂಗೀಕರಿಸಿದೆ.

ಈ ಎರಡೂ ಮಸೂದೆಗಳನ್ನು ಮಾರ್ಚ್ 16 ರಂದು ಕರ್ನಾಟಕ ವಿಧಾನಸಭೆ ಅಂಗೀಕರಿಸಲಾಗಿತ್ತು.

ಮುನ್ಸಿಪಾಲಿಟಿಗಳು ಮತ್ತು ಕೆಲವು ಇತರ ಕಾನೂನು(ತಿದ್ದುಪಡಿ) ವಿಧೇಯಕ-2026 ಅನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ವಿಧಾನ ಪರಿಷತ್ತಿನಲ್ಲಿ ಮಂಡಿಸಿದ್ದರು.

ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರು ಮಸೂದೆ ಬಗ್ಗೆ ವ್ಯಾಪಕವಾಗಿ ಚರ್ಚಿಸಿದ ನಂತರ ಇಂದು ಅದನ್ನು ಅಂಗೀಕರಿಸಲಾಯಿತು.

ಈ ಮೂಸದೆ ಪ್ರಕಾರ ಯಾವುದೇ ಭೂಮಿಯ ಕಟ್ಟಡದ, ಗೋಡೆಯ ಮೇಲೆ ಅಥವಾ ಮೇಲ್ಭಾಗದಲ್ಲಿ ಯಾವುದೇ ಜಾಹೀರಾತನ್ನು ಪ್ರದರ್ಶಿಸುವ, ಅಳವಡಿಸುವ ಅಥವಾ ಉಳಿಸಿಕೊಂಡಿರುವ ಅಥವಾ ಯಾವುದೇ ರೀತಿಯಲ್ಲಾಗಲಿ ಯಾವುದೇ ಸಾರ್ವಜನಿಕ ಇಲ್ಲವೇ ಖಾಸಗಿ ಸ್ಥಳದಲ್ಲಾಗಲಿ ಸಾರ್ವಜನಿಕರ ದೃಷ್ಟಿಗೆ ಬೀಳುವಂತೆ ಯಾವುದೇ ಜಾಹೀರಾತನ್ನು ಪ್ರದರ್ಶಿಸುವ ಪ್ರತಿಯೊಬ್ಬ ವ್ಯಕ್ತಿಯು, ಹಾಗೆ ಪ್ರದರ್ಶಿಸಿರುವ ಪ್ರತಿಯೊಂದು ಜಾಹಿರಾತಿನ ಮೇಲೆ, ಪೌರ ಪಾಲಿಕೆ(municipal council) ನಿರ್ಣಯದ ಮೂಲಕ ನಿರ್ಧರಿಸಿದ ದರಗಳಲ್ಲಿ ಮತ್ತು ಅಂಥ ವಿಧಾನದಲ್ಲಿ ಹಾಗೂ ಅಂಥ ವಿನಾಯಿತಿಗಳಿಗೊಳಪಟ್ಟು ತೆರಿಗೆಯನ್ನು ಪಾವತಿ ಮಾಡಬೇಕು.

ಪೊಲೀಸ್ ವರ್ಗಾವಣೆಗೆ ಸಂಬಂಧಿಸಿದ ಮಸೂದೆ ಅಂಗೀಕಾರ

ಇನ್ನು ಗೃಹ ಸಚಿವ ಜಿ. ಪರಮೇಶ್ವರ ಅವರು ಮಂಡಿಸಿದ ಕರ್ನಾಟಕ ಪೊಲೀಸ್(ತಿದ್ದುಪಡಿ) ಮಸೂದೆ 2026 ಅನ್ನು ಇಂದು ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಲಾಯಿತು.

ಈ ಮಸೂದೆ ಪೊಲೀಸ್ ಅಧಿಕಾರಿಗಳನ್ನು, ಉಪ ಪೊಲೀಸ್ ವರಿಷ್ಠಾಧಿಕಾರಿ(ಡಿವೈಎಸ್ಪಿ) ದರ್ಜೆಯವರೆಗೆ ದುಷ್ಕೃತ್ಯ, ನಿರ್ಲಕ್ಷ್ಯ ಅಥವಾ ಕರ್ತವ್ಯ ಲೋಪಕ್ಕಾಗಿ ತಕ್ಷಣ ವರ್ಗಾಯಿಸಲು ಪೊಲೀಸ್ ಎಸ್ಟಾಬ್ಲಿಷ್​ಮೆಂಟ್ ಮಂಡಳಿಗೆ(ಪಿಇಬಿ) ಅಧಿಕಾರ ನೀಡುತ್ತದೆ.

ಈ ತಿದ್ದುಪಡಿಯು ಕಡ್ಡಾಯ ಎರಡು ವರ್ಷಗಳ ಅಧಿಕಾರಾವಧಿ ಮುಗಿಯುವ ಮೊದಲು ವರ್ಗಾವಣೆ ಮಾಡಲು ಅವಕಾಶ ನೀಡುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಸ್ರೇಲ್ ನಿಂದ ಇರಾನ್ ಗುಪ್ತಚರ ಇಲಾಖೆ ಮುಖ್ಯಸ್ಥರ ಹತ್ಯೆ?; ಇದರಿಂದೆಲ್ಲಾ ನಾಯಕತ್ವಕ್ಕೆ ಮಾರಕ ಹೊಡೆತ ಬೀಳಲ್ಲ- ಇರಾನ್

ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸೀಟ್ ಚಾರ್ಜ್‌ಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ, ಇನ್ನು ಮುಂದೆ ಶೇ.60ರಷ್ಟು ಸೀಟುಗಳು ಉಚಿತ..!

ಅಸ್ಸಾಂನಲ್ಲಿ ಕಾಂಗ್ರೆಸ್ ಗೆ ಭಾರಿ ಹೊಡೆತ: ಹಿರಿಯ ನಾಯಕ ಪ್ರದ್ಯುತ್ ಬೊರ್ಡೊಲೊಯಿ ಬಿಜೆಪಿಗೆ ಸೇರ್ಪಡೆ!

'ರಾಜಕೀಯದಲ್ಲಿ ಪೂರ್ಣವಿರಾಮ ಇಲ್ಲ': 59 ರಾಜ್ಯಸಭಾ ಸದಸ್ಯರಿಗೆ ಬೀಳ್ಕೊಡುಗೆ; ಖರ್ಗೆ, ದೇವೇಗೌಡರನ್ನು ಶ್ಲಾಘಿಸಿದ ಮೋದಿ

ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ: ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಒಂಬತ್ತು ಮಂದಿ ಸಜೀವ ದಹನ!

SCROLL FOR NEXT