ಕೇಂದ್ರ ಸಚಿವರನ್ನು ಭೇಟಿ ಮಾಡಿದ ಡಿಸಿಎಂ ನೇತೃತ್ವದ ನಿಯೋಗ 
ರಾಜ್ಯ

3,052 ಕೋಟಿ ರೂ ವೆಚ್ಚದ ನೀರಾವರಿ ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ರಾಜ್ಯ ಸರ್ಕಾರ

"ರಾಜ್ಯ ಸರ್ಕಾರವು ಈಗಾಗಲೇ ಬಜೆಟ್‌ನಲ್ಲಿ ತನ್ನ ಶೇ. 40 ರಷ್ಟು ಹಣವನ್ನು ನೀಡುವ ಬದ್ಧತೆಯನ್ನು ಪ್ರದರ್ಶಿಸಿದೆ. ಆದರೆ ಉಳಿದ ಶೇ. 60 ರಷ್ಟು ಹಣವನ್ನು ಕೇಂದ್ರದಿಂದ ನಿರೀಕ್ಷಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ನವದೆಹಲಿ/ಬೆಂಗಳೂರು: ಕೇಂದ್ರೀಯ ಪ್ರಾಯೋಜಿತ ಯೋಜನೆಗಳ ಅಡಿಯಲ್ಲಿ 3,052 ಕೋಟಿ ರೂ. ಮೌಲ್ಯದ ನೀರಾವರಿ ಯೋಜನೆಗಳಿಗೆ ಕರ್ನಾಟಕ ಸರ್ಕಾರವು ಆರಂಭಿಕ ಅನುಮೋದನೆಯನ್ನು ಕೋರಿದೆ. ಇದಕ್ಕೆ ಕೇಂದ್ರ ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಸಚಿವ ಎನ್.ಎಸ್. ಬೋಸರಾಜು ಅವರು ಬುಧವಾರ ಹೇಳಿದ್ದಾರೆ.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ(ಪಿಎಂಕೆಎಸ್‌ವೈ) ಮತ್ತು ದುರಸ್ತಿ, ನವೀಕರಣ ಹಾಗೂ ಪುನಃಸ್ಥಾಪನೆ (ಆರ್‌ಆರ್‌ಆರ್) ಯೋಜನೆಗಳ ಅಡಿಯಲ್ಲಿ ಸಲ್ಲಿಸಲಾದ ಪ್ರಸ್ತಾವನೆಗಳು ಪ್ರಸ್ತುತ ಕೇಂದ್ರ ಜಲಸಂಪನ್ಮೂಲ ಸಚಿವಾಲಯದಲ್ಲಿ ವಿವಿಧ ಹಂತಗಳಲ್ಲಿ ಬಾಕಿ ಉಳಿದಿವೆ ಎಂದು ಅವರು ಇಂದು ದೆಹಲಿಯಲ್ಲಿ ನಡೆದ ಸಭೆಯ ನಂತರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

"ರಾಜ್ಯ ಸರ್ಕಾರವು ಈಗಾಗಲೇ ಬಜೆಟ್‌ನಲ್ಲಿ ತನ್ನ ಶೇ. 40 ರಷ್ಟು ಹಣವನ್ನು ನೀಡುವ ಬದ್ಧತೆಯನ್ನು ಪ್ರದರ್ಶಿಸಿದೆ. ಆದರೆ ಉಳಿದ ಶೇ. 60 ರಷ್ಟು ಹಣವನ್ನು ಕೇಂದ್ರದಿಂದ ನಿರೀಕ್ಷಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಯೋಜನೆಗಳ ಅನುಷ್ಠಾನವನ್ನು ತ್ವರಿತಗೊಳಿಸಲು ನಾವು ಆರಂಭಿಕ ಅನುಮೋದನೆಗಳನ್ನು ಕೋರಿದ್ದೇವೆ ಮತ್ತು ಕೇಂದ್ರ ಸಚಿವರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ" ಎಂದು ಬೋಸರಾಜು ಹೇಳಿದ್ದಾರೆ.

ತಮ್ಮ ದೆಹಲಿ ಭೇಟಿಯ ಸಮಯದಲ್ಲಿ, ಬೋಸರಾಜು ಅವರು ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ರಾಜ್ಯಾದ್ಯಂತ ನೀರಾವರಿ ಕಾಮಗಾರಿಗಳನ್ನು ಮುಂದುವರಿಸಲು ತ್ವರಿತ ಅನುಮತಿ ಕೋರಿ ಮನವಿ ಪತ್ರ ಸಲ್ಲಿಸಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ ರಾಮ್ ಮೋಹನ್ ನಾಯ್ಡು ಅವರನ್ನು ಭೇಟಿ ಮಾಡಿದ ಬೋಸರಾಜು ಅವರು, ರಾಜ್ಯದ ನಾಗರಿಕ ವಿಮಾನಯಾನ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ಯೋಜನೆಗಳ ಕುರಿತು ಚರ್ಚಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡಲು ರಾಯಚೂರಿನಲ್ಲಿ ವಿಮಾನ ನಿಲ್ದಾಣದ ಪ್ರಸ್ತಾವಿತ ಅಭಿವೃದ್ಧಿ ಮತ್ತು ಉಡಾನ್ ಪ್ರಾದೇಶಿಕ ಸಂಪರ್ಕ ಯೋಜನೆಯಡಿಯಲ್ಲಿ ಕಲಬುರಗಿಗೆ ವಿಮಾನ ಕಾರ್ಯಾಚರಣೆಗಳನ್ನು ಪುನರಾರಂಭಿಸುವ ಬಗ್ಗೆ ಚರ್ಚಿಸಲಾಯಿತು ಎಂದು ಸಚಿವರು ತಿಳಿಸಿದ್ದಾರೆ.

ಕಲಬುರಗಿಗೆ ವಿಮಾನ ಸೇವೆಗಳನ್ನು ಪುನರಾರಂಭಿಸಲು ಅನುಕೂಲವಾಗುವಂತೆ ವಿಮಾನಯಾನ ಸಂಸ್ಥೆಗಳೊಂದಿಗೆ ಚರ್ಚೆ ಪ್ರಾರಂಭಿಸಲಾಗುವುದು ಎಂದು ಕೇಂದ್ರ ಸಚಿವರು ಭರವಸೆ ನೀಡಿರುವುದಾಗಿ ಬೋಸರಾಜು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ