ಮೆಟ್ರೋದಲ್ಲಿ ಹಾಡು ಹಾಡಿದ ಯುವತಿಯರು 
ರಾಜ್ಯ

Video: ನಮ್ಮ ಮೆಟ್ರೋದಲ್ಲಿ ಹಾಡು ಹಾಡಿ ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡಿದ 11 ಯುವತಿಯರ ಬಂಧನ

ಹೊಯ್ಸಳ ಗಸ್ತು ತಂಡದ ಬೆಂಬಲದೊಂದಿಗೆ ಮೆಟ್ರೋ ಭದ್ರತಾ ಸಿಬ್ಬಂದಿ ಮತ್ತು ಗೃಹರಕ್ಷ ಸಿಬ್ಬಂದಿ ಹಾಡು ಹಾಡಿದ ಯುವತಿಯರನ್ನು ಗುರುತಿಸಿ ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೋ ರೈಲಿನೊಳಗೆ ಜೋರಾಗಿ ಹಾಡು ಹಾಡುವ ಮೂಲಕ ಇತರ ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡಿದ ಆರೋಪದ ಮೇಲೆ ಹನ್ನೊಂದು ಯುವತಿಯರ ಗುಂಪಿನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಮಾರ್ಚ್ 15 ರ ರಾತ್ರಿ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಿಂದ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.

ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮರಳುತ್ತಿದ್ದ ಯುವತಿಯರ ಗುಂಪೊಂದು ಮೆಟ್ರೋದಲ್ಲಿ ಜೋರಾಗಿ ಹಾಡು ಹಾಡಿ ನೃತ್ಯ ಮಾಡಿದೆ. ಇದರಿಂದ ಮೆಟ್ರೋದಲ್ಲಿದ್ದ ಇತರೆ ಪ್ರಯಾಣಿಕರಿಗೆ ತೊಂದರೆ ಉಂಟಾಗಿದೆ. ಕೆಲವು ಯುವತಿಯರು ಮೆಟ್ರೋ ಬೋಗಿಯ ನೆಲದ ಮೇಲೆ ಕುಳಿತು ಹಾಡಿದ್ದು, ಅದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿತ್ತು.

ನಂತರ, ಪೀಣ್ಯ ಕೈಗಾರಿಕಾ ಪ್ರದೇಶ ನಿಲ್ದಾಣದಲ್ಲಿ, ಕೆಲವು ಪ್ರಯಾಣಿಕರು ಇಳಿದು ಪ್ಲಾಟ್‌ಫಾರ್ಮ್‌ನಲ್ಲಿ ವಾಗ್ವಾದ ನಡೆಸಿದರು ಮತ್ತು ರೈಲಿನ ಬಾಗಿಲುಗಳು ಮುಚ್ಚದಂತೆ ಸ್ವಲ್ಪ ಸಮಯ ತಡೆದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯ ನಂತರ, ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು ಎಂದು ಅವರು ಹೇಳಿದ್ದಾರೆ.

ಹಲವಾರು ನಿಲ್ದಾಣಗಳಲ್ಲಿ ಅದೇ ಗುಂಪು ಕಿರಿಕಿರಿ ಉಂಟುಮಾಡಿದೆ ಎಂದು ಆರೋಪಿಸಲಾಗಿದೆ.

ಹೊಯ್ಸಳ ಗಸ್ತು ತಂಡದ ಬೆಂಬಲದೊಂದಿಗೆ ಮೆಟ್ರೋ ಭದ್ರತಾ ಸಿಬ್ಬಂದಿ ಮತ್ತು ಗೃಹರಕ್ಷ ಸಿಬ್ಬಂದಿ ಹಾಡು ಹಾಡಿದ ಯುವತಿಯರನ್ನು ಗುರುತಿಸಿ ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದಾಗ್ಯೂ, ಅವರು ತಮ್ಮ ಕೃತ್ಯಗಳಿಗೆ ಕ್ಷಮೆಯಾಚಿಸಿದ ನಂತರ ಅವರನ್ನು ಬಿಡುಗಡೆ ಮಾಡಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಬಿಎಂಆರ್‌ಸಿಎಲ್ ಭದ್ರತಾ ಅಧಿಕಾರಿ ನೀಡಿದ ದೂರಿನ ಆಧಾರದ ಮೇಲೆ, ಈ 11 ಮಹಿಳಾ ಪ್ರಯಾಣಿಕರ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel