ಗೃಹ ಸಚಿವ ಜಿ ಪರಮೇಶ್ವರ 
ರಾಜ್ಯ

ತುಮಕೂರಿನಲ್ಲಿ ಲಾಕಪ್‌ ಡೆತ್‌ ಪ್ರಕರಣ: ಸಿಐಡಿ ತನಿಖೆಗೆ ಗೃಹ ಸಚಿವ ಪರಮೇಶ್ವರ ಆದೇಶ

ಯಳನಾಡು ಗ್ರಾಮದ ಕಾಂತರಾಜು ಎಂದು ಗುರುತಿಸಲಾದ ಮೃತ ವ್ಯಕ್ತಿಯನ್ನು ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ ಠಾಣೆಗೆ ಕರೆತಂದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾಗ ಬೆಳಗಿನ ಜಾವ 1:30 ರ ಸುಮಾರಿಗೆ ಸಾವನ್ನಪ್ಪಿದ್ದಾರೆ.

ತುಮಕೂರು: ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯಲ್ಲಿ 50 ವರ್ಷದ ವ್ಯಕ್ತಿಯ ಸಾವಿನ ಬಗ್ಗೆ ಸಿಐಡಿ ತನಿಖೆಗೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಶುಕ್ರವಾರ ಆದೇಶಿಸಿದ್ದಾರೆ.

ಯಳನಾಡು ಗ್ರಾಮದ ಕಾಂತರಾಜು ಎಂದು ಗುರುತಿಸಲಾದ ಮೃತ ವ್ಯಕ್ತಿಯನ್ನು ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ ಠಾಣೆಗೆ ಕರೆತಂದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾಗ ಬೆಳಗಿನ ಜಾವ 1:30 ರ ಸುಮಾರಿಗೆ ಸಾವನ್ನಪ್ಪಿದ್ದಾರೆ. ಅವರ ಶವವನ್ನು ತುಮಕೂರು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದ್ದು, ಅಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ. ಅಧಿಕಾರಿಗಳು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ.

"ನಿನ್ನೆ ವಿಚಾರಣೆಯ ಸಮಯದಲ್ಲಿ ಸಾವು ಸಂಭವಿಸಿದ್ದು, ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ನಾನು ತನಿಖೆಗೆ, ವಿಶೇಷವಾಗಿ ಸಿಐಡಿ ತನಿಖೆಗೆ ಆದೇಶಿಸಿದ್ದೇನೆ. ಸಿಐಡಿ ತನಿಖೆಯು ಯಾವುದೇ ದೈಹಿಕ ಹಲ್ಲೆ ನಡೆದಿದೆಯೇ ಎಂಬುದನ್ನು ನಿರ್ಧರಿಸುತ್ತದೆ. ಮರಣೋತ್ತರ ಪರೀಕ್ಷೆಯ ವರದಿಯು ಕಾರಣವನ್ನು ಸ್ಪಷ್ಟಪಡಿಸುತ್ತದೆ. ಸಿಐಡಿ ತನಿಖೆ ನಡೆಸಿ ವರದಿ ಸಲ್ಲಿಸುತ್ತದೆ. ಹಲ್ಲೆ ನಡೆದಿದೆ ಎಂದು ಸಾಬೀತಾದರೆ, ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು" ಎಂದು ಪರಮೇಶ್ವರ ಅವರು ತಿಳಿಸಿದ್ದಾರೆ.

ವ್ಯಕ್ತಿ ಸಾವಿನ ನಂತರ, ಗ್ರಾಮಸ್ಥರು ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು ಮತ್ತು ಇದು ಲಾಕಪ್ ಡೆತ್ ಪ್ರಕರಣ ಎಂದು ಆರೋಪಿಸಿದರು. ಸಾವಿಗೆ ಕಾರಣವಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಶವವನ್ನು ಠಾಣೆಯ ಆವರಣದೊಳಗೆ ಇರಿಸಿ ಪ್ರತಿಭಟನೆ ನಡೆಸಲಾಯಿತು.

ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಗ್ರಾಮಸ್ಥರಿಗೆ ತುಮಕೂರು ಎಸ್‌ಪಿ ಭರವಸೆ ನೀಡಿದ ಬಳಿಕ ಗ್ರಾಮಸ್ಥರು ಪ್ರತಿಭಟನೆ ಕೈಬಿಟ್ಟಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಾಣಿಜ್ಯ ಸಿಲಿಂಡರ್‌ಗಳ ಕೊರತೆ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿಗೆ ಪತ್ರ ಬರೆದ CM ಸಿದ್ದರಾಮಯ್ಯ

ಕೋರ್ಟ್‌ನಲ್ಲಿ ರಾಜಕೀಯ ಹೋರಾಟಬೇಡ: CM ಸಿದ್ದರಾಮಯ್ಯ ವಿರುದ್ಧ ಬೆದರಿಕೆ ಆರೋಪ, ಅರ್ಜಿ ವಿಚಾರಣೆಗೆ 'ಸುಪ್ರೀಂ' ನಕಾರ!

West Asia war: ಕುವೈತ್‌ ಪ್ರಮುಖ ತೈಲ ಶುದ್ಧೀಕರಣ ಘಟಕದ ಮೇಲೆ ಇರಾನ್ ಡ್ರೋನ್ ದಾಳಿ, ಭಾರೀ ಬೆಂಕಿ

ಗಂಗಾ ನದಿಯಲ್ಲಿ ಚಿಕನ್ ಬಿರಿಯಾನಿ ತಿಂದ 14 ಜನ ಜೈಲು ಪಾಲು!

ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ಬೇಡ: ಟ್ರಂಪ್ ಸೂಚನೆ ಬೆನ್ನಲ್ಲೇ ಹಿಂದೆ ಸರಿದ ಇಸ್ರೇಲ್; ಇರಾನ್ 'ನಾಶವಾಗಿದೆ' ಎಂದ ನೆತನ್ಯಾಹು

SCROLL FOR NEXT