ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿಜಿ ಕಾಮಕಾಂಡ 
ರಾಜ್ಯ

ಲೈಂಗಿಕ ಕಿರುಕುಳ ಪ್ರಕರಣ: ಇಲಾಖೆಯಿಂದಲೇ ಅಧಿಕಾರಿ ರಕ್ಷಿಸುವ ಯತ್ನ; ಸಂದೇಶ್ ವಿರುದ್ಧ suo motu ಪ್ರಕರಣಕ್ಕೆ ಮಹಿಳೆ ಆಗ್ರಹ..!

ತನಿಖೆಯ ಭಾಗವಾಗಿ ಅವರ ಮೊಬೈಲ್ ಫೋನ್ ಮತ್ತು ಬ್ಯಾಂಕ್ ಸ್ಟೇಟ್‌ಮೆಂಟ್‌ಗಳನ್ನು ಪರಿಶೀಲಿಸುವಂತೆಯೂ ಅವರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಮಂಗಳೂರು: ಲೈಂಗಿಕ ಕಿರುಕುಳ ಪ್ರಕರಣದ ಆರೋಪದ ಮೇಲೆ ಕರ್ತವ್ಯದಿಂದ ಅಮಾನತುಗೊಂಡಿರುವ ಮೂಡಬಿದ್ರಿ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕೆಂದು ಕಾರ್ಕಳದ ನಿವಾಸಿ ಸುಮತಿ ನಾಯಕ್ ಒತ್ತಾಯಿಸಿದ್ದಾರೆ.

ಅಲ್ಲದೆ, ತನಿಖೆಯ ಭಾಗವಾಗಿ ಅವರ ಮೊಬೈಲ್ ಫೋನ್ ಮತ್ತು ಬ್ಯಾಂಕ್ ಸ್ಟೇಟ್‌ಮೆಂಟ್‌ಗಳನ್ನು ಪರಿಶೀಲಿಸುವಂತೆಯೂ ಅವರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಡಿಯೋ ಮತ್ತು ವೀಡಿಯೋ ಕ್ಲಿಪ್‌ಗಳಲ್ಲಿ ಸಂದೇಶ್ ಅವರು ಅಶ್ಲೀಲವಾಗಿ ಮಾತನಾಡಿರುವುದು ಹಾಗೂ ಪೊಲೀಸ್ ಉಡುಪಿನಲ್ಲಿ ನೃತ್ಯ ಮಾಡಿರುವುದು ಕಂಡು ಬಂದಿದೆ.

ಈ ದೃಶ್ಯಾವಳಿ ಮತ್ತು ಧ್ವನಿ ಪ್ರಕರಣಕ್ಕೆ ಸಾಕ್ಷ್ಯವಾಗಿದ್ದು, ತಕ್ಷಣವೇ ಪ್ರಕರಣ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇದೇ ವೇಳೆ ಹಿರಿಯ ಅಧಿಕಾರಿಗಳು ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ.

ಪ್ರಫುಲ್ಲ ನಾಯಕ್ ಅವರ ಪುತ್ರ ಜಿಲ್ಲಾ ಕಾನೂನು ಪ್ರಾಧಿಕಾರಕ್ಕೆ ದೂರು ಸಲ್ಲಿಸಿದ್ದರೂ ಹಾಗೂ ನ್ಯಾಯಾಧೀಶರು FIR ದಾಖಲಿಸಲು ಸೂಚನೆ ನೀಡಿದ್ದರೂ, ಇನ್ನೂ ಯಾವುದೇ ಕ್ರಮ ಕೈಗೊಳ್ಳದಿರುವುದು ಅನುಮಾನಗಳನ್ನು ಹೆಚ್ಚು ಮಾಡಿದೆ ಎಂದು ಸುಮತಿ ಹೇಳಿದ್ದಾರೆ.

ಇದೇ ವೇಳೆ ತಮ್ಮ ವಿರುದ್ಧದ ಆರೋಪಗಳಿಗೆ ಪ್ರತಿಕ್ರಿಯಿಸಿದ ಸುಮತಿ ನಾಯಕ್, ತಮ್ಮಸಹೋದರಿ ಕುಟುಂಬಕ್ಕೆ ಮಸಿ ಬಳಿಯಲು ಆಧಾರರಹಿತ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮಡಿವಾಳ ಪೊಲೀಸ್ ಠಾಣೆಯಲ್ಲಿದ್ದ ವೇಶ್ಯಾವಾಟಿಕೆ ಪ್ರಕರಣದಲ್ಲಿ ತಮಗೆ ಕ್ಲೀನ್ ಚಿಟ್ ದೊರೆತಿದ್ದು, ಅದರ ದಾಖಲೆಗಳು ತಮ್ಮ ಬಳಿ ಇವೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ಕರ್ನಾಟಕದ ಇತಿಹಾಸದಲ್ಲೇ ಮೊದಲು; ಪ್ರತಿಭಟಿಸುವುದಾದರೇ ಸದನದ ಬಾವಿಗೆ ಬನ್ನಿ: ವಿಪಕ್ಷ ಶಾಸಕರಿಗೆ ಸ್ಪೀಕರ್ ಆಹ್ವಾನ, BJP ಕಿಡಿ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ, ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ Video

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!