ಬೆಳಗಾವಿ: ಕ್ಷುಲ್ಲಕ ದಾರಿ ವಿಚಾರವಾಗಿ ನಡೆದ ಸಣ್ಣ ಗಲಾಟೆಯಲ್ಲಿ ಸಂಬಂಧಿಯನ್ನು ಕೊಂದ ಆರೋಪದ ಮೇಲೆ 36 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಮೃತರನ್ನು ದೊಡವಾಡದ ಕೊಪ್ಪ ಅಗಸಿ ನಿವಾಸಿ ಮಹೇಶ ಬಸಯ್ಯ ಉಪ್ಪಿನಮಠ ಎಂದು ಗುರುತಿಸಲಾಗಿದ್ದು, ಆರೋಪಿ ರುದ್ರಯ್ಯ ಬಸಯ್ಯ ಉಪ್ಪಿನಮಠ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದಲ್ಲಿ ಕೊಲೆ ನಡೆದಿದೆ. ಆರೋಪಿ ಮೊದಲಿನಿಂದಲೂ ದಾರಿ ವಿಚಾರವಾಗಿ ಮೃತನೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ.
ಮಾರ್ಚ್ 17 ರಂದು ಸಂಜೆ ಕೋಳಿ ಅಂಗಡಿಯೊಂದರ ಬಳಿ ನಡೆದ ಗಲಾಟೆ ವೇಳೆ ಕುಡುಗೋಲಿನಿಂದ ಮಹೇಶನ ಕುತ್ತಿಗೆಗೆ ಆರೋಪಿ ಇರಿದು ಸ್ಥಳದಿಂದ ಪರಾರಿಯಾಗಿದ್ದಾನೆ.
ಬಳಿಕ ಕ್ಷಿಪ್ರಗತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.