ಸಚಿವ ರಾಮಲಿಂಗಾರೆಡ್ಡಿ ಸಾಂದರ್ಭಿಕ ಚಿತ್ರ 
ರಾಜ್ಯ

ಪೆಟ್ರೋಲ್ - ಡೀಸೆಲ್ ಬೆಲೆಯಲ್ಲಿ ಏರಿಕೆಯ ವದಂತಿ, ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ? ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು

ರಾಜ್ಯ ಸರ್ಕಾರ ಪ್ರಯಾಣ ದರ ಹೆಚ್ಚಿಸುವ ಮೂಲಕ ಜನರಿಗೆ ಹೊರೆಯಾಗಲ್ಲ. ದರ ಪರಿಷ್ಕರಣೆಯಂತಹ ಯಾವುದೇ ಪ್ರಕ್ರಿಯೆಯನ್ನು ಕೈಗೊಂಡಿಲ್ಲ ಎಂದು ಅವರು ಸ್ಪಷ್ಪಪಡಿಸಿದ್ದಾರೆ.

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗುವ ವದಂತಿ ಕೇಳಿಬರುತ್ತಿರುತ್ತದೆ. ಈ ನಡುವೆ ರಾಜ್ಯದಲ್ಲಿ ಬಸ್ ಟಿಕೆಟ್‌ ದರವನ್ನು ಹೆಚ್ಚಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ರಾಜ್ಯ ಸರ್ಕಾರ ಪ್ರಯಾಣ ದರ ಹೆಚ್ಚಿಸುವ ಮೂಲಕ ಜನರಿಗೆ ಹೊರೆಯಾಗಲ್ಲ. ದರ ಪರಿಷ್ಕರಣೆಯಂತಹ ಯಾವುದೇ ಪ್ರಕ್ರಿಯೆಯನ್ನು ಕೈಗೊಂಡಿಲ್ಲ ಎಂದು ಅವರು ಸ್ಪಷ್ಪಪಡಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಡೀಸೆಲ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ನಾವು ಟಿಕೆಟ್ ದರವನ್ನು ಹೆಚ್ಚಿಸುವುದಿಲ್ಲ. ಈಗ ದರ ಹೆಚ್ಚಳ ಮಾಡುವ ಅಧಿಕಾರ ನಮಗಿಲ್ಲ, ನಾವು ಹೆಚ್ಚಿಸುತ್ತಿಲ್ಲ ಎಂದು ತಿಳಿಸಿದರು.

ಪ್ರಯಾಣ ದರ ಪರಿಷ್ಕರಣೆಗಾಗಿ ಸಮಿತಿ ರಚಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಸ್ತುತ ಅಂತಹ ಯಾವುದೇ ಕ್ರಮವನ್ನು ಸರ್ಕಾರ ಪರಿಗಣಿಸುತ್ತಿಲ್ಲ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾಮಲಿಂಗಾರೆಡ್ಡಿ, ಹಿಂದಿನ ದಿನಗಳಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಾಗಿದ್ದಾಗಲೂ ಕೇಂದ್ರ ಸರ್ಕಾರ ಜನರಿಗೆ ಯಾವುದೇ ಪ್ರಯೋಜನವನ್ನು ತಲುಪಿಸಲಿಲ್ಲ ಎಂದು ಆರೋಪಿಸಿದರು.

ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ 100-130 ಡಾಲರ್ ಇದ್ದ ಕಚ್ಚಾ ತೈಲಕ್ಕೆ ಸಬ್ಸಿಡಿ ನೀಡಲಾಗಿತ್ತು. ಆದರೆ, ಆ ನಂತರದ 10-12 ವರ್ಷಗಳ ಕಾಲ ಕಚ್ಚಾ ತೈಲ ಬೆಲೆ ಕಡಿಮೆಯಾಗಿದ್ದಾಗಲೂ ಕೇಂದ್ರ ಸರ್ಕಾರ ಲಾಭ ಮಾಡಿಕೊಂಡಿತೇ ಹೊರತು ಜನರಿಗೆ ಇದರ ಲಾಭ ಸಿಗಲಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೋಟೆಲ್, ರೆಸ್ಟೋರೆಂಟ್​​ಗಳಿಗೆ ಗುಡ್​​ ನ್ಯೂಸ್: ವಾಣಿಜ್ಯ ಬಳಕೆ LPG ಹಂಚಿಕೆ ಶೇ. 50ಕ್ಕೆ ಹೆಚ್ಚಿಸಿದ ಕೇಂದ್ರ

ರಾಜ್ಯಸಭೆಯಲ್ಲಿ NDA ಬಲ 141ಕ್ಕೆ ಹೆಚ್ಚಳ: ಅಡ್ಡ ಮತದಾನ ಮಾಡಿದ್ದ 6 BJD ಶಾಸಕರ ಅಮಾನತು!

ಈದ್ ಅಲ್-ಫಿತರ್‌ ದಿನವೇ ಜಿರುಸಲೇಂ ಮೇಲೆ ಇರಾನ್ ಕ್ಷಿಪಣಿ ದಾಳಿ: ಅಲ್-ಅಕ್ಸಾ ಮಸೀದಿ ಬಳಿ ಸ್ಫೋಟ! Video

2027ರ ಚುನಾವಣೆ ಹಿನ್ನೆಲೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡದಂತೆ ಉತ್ತರಪ್ರದೇಶದ BJP ನಾಯಕರಿಗೆ RSS ಸಲಹೆ!

Pakistan: ಮುರಿಡ್ಕೆಯಲ್ಲಿ ರಕ್ತಪಾತ; ನಮಾಜ್ ಮುಗಿಸಿ ಹೊರಬಂದ LeT ಕಮಾಂಡರ್ ಸಲಾಫಿಗೆ ಗುಂಡಿಕ್ಕಿದ 'ಧುರಂಧರ್'; Video!

SCROLL FOR NEXT