ಸಿಎಂ ಸಿದ್ದರಾಮಯ್ಯ 
ರಾಜ್ಯ

ಯಾವುದೇ ಧರ್ಮವೂ ದ್ವೇಷ ಬೋಧಿಸುವುದಿಲ್ಲ. ಪ್ರೀತಿಯನ್ನು ಬೋಧಿಸುತ್ತವೆ: ಸಿಎಂ ಸಿದ್ದರಾಮಯ್ಯ

ಮಾನವಕುಲದ ಒಳಿತಿಗಾಗಿ ಸರ್ವರೂ ಪ್ರಾರ್ಥಿಸುವುದು ಅತ್ಯಂತ ಅವಶ್ಯ. ಮಾನವೀಯತೆಯಿಂದ ಪರಸ್ಪರ ಪ್ರೀತಿ - ವಿಶ್ವಾಸದಿಂದ ಬಾಳುವುದು ಮುಖ್ಯ. ಭಾರತ ದೇಶ ವಿವಿಧ ಜಾತಿ ಸಂಸ್ಕೃತಿಗಳಿಂದ ಕೂಡಿದೆ. ವಿವಿಧತೆಯಲ್ಲಿ ಏಕತೆಯಿರುವ ನಮ್ಮ ದೇಶದಲ್ಲಿ ಎಲ್ಲರೂ ಒಟ್ಟಾಗಿ ಬಾಳಬೇಕು.

ಬೆಂಗಳೂರು: ಯಾವುದೇ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಎಲ್ಲ ಧರ್ಮಗಳೂ ಪ್ರೀತಿಯನ್ನು ಬೋಧಿಸುತ್ತವೆ. ಇದನ್ನು ಅರಿತು ಬಾಳಿದರೆ ಸಮಾಜದಲ್ಲಿ ಶಾಂತಿ-ಸೌಹಾರ್ದತೆ ನೆಲೆಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಬೆಂಗಳೂರಿನ ಮಿಲ್ಲರ್ಸ್ ರಸ್ತೆಯ ಮಸ್ಜಿದ್-ಈ-ಖಾದ್ರಿಯಾದಲ್ಲಿ‌ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿಗಳು, ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಗಳನ್ನು ತಿಳಿಸಿದರು.

ಬಳಿಕ ಮತನಾಡಿದ ಅವರು, ಮಾನವಕುಲದ ಒಳಿತಿಗಾಗಿ ಸರ್ವರೂ ಪ್ರಾರ್ಥಿಸುವುದು ಅತ್ಯಂತ ಅವಶ್ಯ. ಮಾನವೀಯತೆಯಿಂದ ಪರಸ್ಪರ ಪ್ರೀತಿ - ವಿಶ್ವಾಸದಿಂದ ಬಾಳುವುದು ಮುಖ್ಯ. ಭಾರತ ದೇಶ ವಿವಿಧ ಜಾತಿ ಸಂಸ್ಕೃತಿಗಳಿಂದ ಕೂಡಿದೆ. ವಿವಿಧತೆಯಲ್ಲಿ ಏಕತೆಯಿರುವ ನಮ್ಮ ದೇಶದಲ್ಲಿ ಎಲ್ಲರೂ ಒಟ್ಟಾಗಿ ಬಾಳಬೇಕು.

ಯಾವುದೇ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಎಲ್ಲ ಧರ್ಮಗಳೂ ಪ್ರೀತಿಯನ್ನು ಬೋಧಿಸುತ್ತವೆ. ಇದನ್ನು ಅರಿತು ಬಾಳಿದರೆ ಸಮಾಜದಲ್ಲಿ ಶಾಂತಿ - ಸೌಹಾರ್ದತೆ ನೆಲೆಸಲು ಸಾಧ್ಯ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ನಮ್ಮಲ್ಲಿ ಹೆಚ್ಚುವರಿ ಕಚ್ಚಾ ತೈಲ ಲಭ್ಯವಿಲ್ಲ’: ಅಮೆರಿಕ ನಿರ್ಬಂಧ ಸಡಿಲಿಕೆ ಬೆನ್ನಲ್ಲೇ ಇರಾನ್ ಮಹತ್ವದ ಘೋಷಣೆ

West Asia war: ಶಾಂತಿ ಒಪ್ಪಂದಕ್ಕೆ 'NO' ಎಂದ ಟ್ರಂಪ್; ಖಾರ್ಗ್ ದ್ವೀಪದ ಮೇಲೆ ಅಮೆರಿಕಾ ಕಣ್ಣು; ದಾಳಿ ಭೀತಿ ಮತ್ತಷ್ಟು ಹೆಚ್ಚಳ..!

'ಕಾಂಗ್ರೆಸ್ ಒಂದು ಸಮದಾಯ ನೆಚ್ಚಿಕೊಂಡಿಲ್ಲ..' 'ಟಿಕೆಟ್ ಹಂಚಿಕೆ ಹೈಕಮಾಂಡ್ ನಿರ್ಧರಿಸುತ್ತೆ': Randeep Surjewala

'ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ: ಅಗತ್ಯಬಿದ್ರೆ ಸಮರ್ಥ್ ನಾಮಪತ್ರ ವಾಪಸ್'

IPL 2026: ಆರಂಭಕ್ಕೂ ಮೊದಲೇ KKRಗೆ ಆಘಾತ, ಪ್ರಮುಖ ವೇಗಿ ಟೂರ್ನಿಯಿಂದಲೇ ಔಟ್!

SCROLL FOR NEXT