ಸಂಗ್ರಹ ಚಿತ್ರ 
ರಾಜ್ಯ

ಸಮಾಜ ಶಾಂತಿಗೆ ಭಂಗ ಆರೋಪ: BJP, ಬಜರಂಗ ದಳ ಕಾರ್ಯಕರ್ತರೂ ಸೇರಿ 10 ಮಂದಿ ವಿರುದ್ಧ ಪೊಲೀಸ್ ಕ್ರಮ, ಗಡಿಪಾರು ನೋಟಿಸ್

ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಹಾಗೂ ಭಜರಂಗದಳದ ಪ್ರಮುಖ ಮುಖಂಡ ಸೇರಿದಂತೆ ಒಟ್ಟು 10 ಜನರನ್ನು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಪೊಲೀಸ್ ಇಲಾಖೆ ಉಪ ವಿಭಾಗಾಧಿಕಾರಿಗಳಿಗೆ (AC) ಶಿಫಾರಸ್ಸು ಪತ್ರ ರವಾನಿಸಿದೆ.

ಬೆಂಗಳೂರು: ಚಿಕ್ಕಮಗಳೂರಿನಲ್ಲಿ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ದೊಡ್ಡ ಸಂಚಲನವೊಂದು ಸೃಷ್ಟಿಯಾಗಿದೆ. ಜಿಲ್ಲೆಯ ಪ್ರಭಾವಿ ಹಿಂದೂ ಮುಖಂಡರು ಮತ್ತು ಬಿಜೆಪಿ ಪದಾಧಿಕಾರಿಗಳ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ ಗಡಿಪಾರಿನ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ.

ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಹಾಗೂ ಭಜರಂಗದಳದ ಪ್ರಮುಖ ಮುಖಂಡ ಸೇರಿದಂತೆ ಒಟ್ಟು 10 ಜನರನ್ನು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಪೊಲೀಸ್ ಇಲಾಖೆ ಉಪ ವಿಭಾಗಾಧಿಕಾರಿಗಳಿಗೆ (AC) ಶಿಫಾರಸ್ಸು ಪತ್ರ ರವಾನಿಸಿದೆ.

ಪಟ್ಟಿಯಲ್ಲಿ ಪ್ರಮುಖವಾಗಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಹಾಗೂ ಭಜರಂಗದಳದ ಹಾಸನ ವಿಭಾಗದ ಸಂಯೋಜಕ ಶ್ಯಾಮ್ ವಿ ಗೌಡ ಅವರ ಹೆಸರುಗಳಿವೆ.

ಇವರೊಂದಿಗೆ ವಿವಿಧ ಕೋಮು ಸಂಘರ್ಷ ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ಮುಸ್ಲಿಂ ಮುಖಂಡರ ಹೆಸರನ್ನೂ ಶಿಫಾರಸ್ಸು ಮಾಡಲಾಗಿದೆ.

ಈ ಸಂಬಂಧ ಪೊಲೀಸ್ ಇಲಾಖೆ ಉಪ ವಿಭಾಗಾಧಿಕಾರಿಗಳಿಗೆ ಪತ್ರ ರವಾನಿಸಲಾಗಿದ್ದು, ಸಂಬಂಧಿಸಿದ ಎಲ್ಲರನ್ನು ಮಾರ್ಚ್ 25ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಆರೋಪಿಗಳು ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟುಮಾಡಿದ ಆರೋಪಗಳು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಗಡಿುಪಾರು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕ್ರಮಕ್ಕೆ ತೀವ್ರ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಎಂಎಲ್ಸಿ ಸಿಟಿ.ರವಿ ಅವರು, ಪಕ್ಷವು ಈ ನಾಯಕರ ಬೆಂಬಲಕ್ಕೆ ದೃಢವಾಗಿ ನಿಲ್ಲಲಿದೆ ಎಂದು ಹೇಳಿದ್ದಾರೆ.

ಪೊಲೀಸರು ನಮ್ಮ ಪಕ್ಷಕ್ಕೆ ಸವಾಲು ಹಾಕಿದ್ದಾರೆ. ನಾವು ಇದನ್ನು ಕಾನೂನು ಹೋರಾಟದಲ್ಲಿಯೂ ಹಾಗೂ ಸಾರ್ವಜನಿಕ ಅಭಿಪ್ರಾಯದಲ್ಲಿಯೂ ಎದುರಿಸುತ್ತೇವೆ. ಕಾರ್ಯಕರ್ತರನ್ನು ಭಯಭೀತರನ್ನಾಗಿಸಲು ಪೊಲೀಸ್ ಅಧಿಕಾರದ ದುರುಪಯೋಗ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇದೇ ವೇಳೆ, ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆಗಳ ಕುರಿತು ಮಾತನಾಡಿದ ಅವರು, ಬಾಗಲಕೋಟೆಗೆ ವೀರಭದ್ರಯ್ಯ ಚರಂತಿಮಠ ಹಾಗೂ ದಾವಣಗೆರೆಗೆ ಶ್ರೀನಿವಾಸ್ ದಾಸ್ಕರಿಯಪ್ಪ ಅವರನ್ನು ಅಭ್ಯರ್ಥಿಗಳಾಗಿ ಆಯ್ಕೆ ಮಾಡಲಾಗಿದೆ. ಪಕ್ಷದ ಕಾರ್ಯಕರ್ತರಿಗೆ ಅವಕಾಶ ನೀಡುವ ಮೂಲಕ ವಿಶ್ವಾಸ ಹೆಚ್ಚಿಸುವುದು ನಮ್ಮ ಉದ್ದೇಶ ಎಂದು ಹೇಳಿದ್ದಾರೆ.

ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ಧ ಜನರಲ್ಲಿ ಅಸಮಾಧಾನ ಹೆಚ್ಚುತ್ತಿದೆ ಎಂದು ಆರೋಪಿಸಿದ ಅವರು, ಜೆಡಿಎಸ್ ಕೂಡ ಬಿಜೆಪಿ ಜೊತೆ ನಿಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಜೊತೆಗೆ, ಪಕ್ಷದ ಸೂಚನೆಯಂತೆ ಪಶ್ಚಿಮ ಬಂಗಾಳ ಚುನಾವಣೆಯಲ್ಲೂ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಕೊನೆಗೂ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ; ಜುಲೈ 1 ರಿಂದ ಜಾರಿ

ಬಂಗಾಳದಲ್ಲಿ ಶುದ್ಧೀಕರಣ ಶುರು ಮಾಡಿದ ಸಿಎಂ ಸುವೇಂದು: TMC ನೇಮಕ ಮಾಡಿದ್ದ ಗ್ರೂಪ್ ಎ ಶ್ರೇಣಿಯ 232 ಅಧಿಕಾರಿಗಳ ವಜಾ!

ಒಂದೇ ಒಂದು ದಾಳಿ ನಡೆದರೂ ಯುರೇನಿಯಂ ದಾಸ್ತಾನು ಶಸ್ತ್ರಾಸ್ತ್ರ ದರ್ಜೆಗೆ ಸಂವರ್ಧನೆ- ಅಮೆರಿಕಾಗೆ ಇರಾನ್ ಕಠಿಣ ಎಚ್ಚರಿಕೆ!

Gruha Lakshmi | ದಕ್ಷಿಣ ಕನ್ನಡದಲ್ಲಿ ಮೃತ ಫಲಾನುಭವಿಗಳ ಖಾತೆಗೆ 22 ಕೋಟಿ ರೂ ಗೃಹಲಕ್ಷ್ಮಿ ಹಣ ಜಮೆ!

'ಪಾಕ್ ಜೊತೆ ಮಾತುಕತೆ ವಿಂಡೋ ತೆರೆಯಬೇಕು, ನಾವು ಒಂದೇ ರಾಷ್ಟ್ರವಾಗಿದ್ದೇವೆ': RSS ನಾಯಕ ಹೊಸಬಾಳೆ ಸ್ಫೋಟಕ ಹೇಳಿಕೆ

SCROLL FOR NEXT