ಸಂಗ್ರಹ ಚಿತ್ರ 
ರಾಜ್ಯ

ಸಮಾಜ ಶಾಂತಿಗೆ ಭಂಗ ಆರೋಪ: BJP, ಬಜರಂಗ ದಳ ಕಾರ್ಯಕರ್ತರೂ ಸೇರಿ 10 ಮಂದಿ ವಿರುದ್ಧ ಪೊಲೀಸ್ ಕ್ರಮ, ಗಡಿಪಾರು ನೋಟಿಸ್

ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಹಾಗೂ ಭಜರಂಗದಳದ ಪ್ರಮುಖ ಮುಖಂಡ ಸೇರಿದಂತೆ ಒಟ್ಟು 10 ಜನರನ್ನು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಪೊಲೀಸ್ ಇಲಾಖೆ ಉಪ ವಿಭಾಗಾಧಿಕಾರಿಗಳಿಗೆ (AC) ಶಿಫಾರಸ್ಸು ಪತ್ರ ರವಾನಿಸಿದೆ.

ಬೆಂಗಳೂರು: ಚಿಕ್ಕಮಗಳೂರಿನಲ್ಲಿ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ದೊಡ್ಡ ಸಂಚಲನವೊಂದು ಸೃಷ್ಟಿಯಾಗಿದೆ. ಜಿಲ್ಲೆಯ ಪ್ರಭಾವಿ ಹಿಂದೂ ಮುಖಂಡರು ಮತ್ತು ಬಿಜೆಪಿ ಪದಾಧಿಕಾರಿಗಳ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ ಗಡಿಪಾರಿನ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ.

ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಹಾಗೂ ಭಜರಂಗದಳದ ಪ್ರಮುಖ ಮುಖಂಡ ಸೇರಿದಂತೆ ಒಟ್ಟು 10 ಜನರನ್ನು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಪೊಲೀಸ್ ಇಲಾಖೆ ಉಪ ವಿಭಾಗಾಧಿಕಾರಿಗಳಿಗೆ (AC) ಶಿಫಾರಸ್ಸು ಪತ್ರ ರವಾನಿಸಿದೆ.

ಪಟ್ಟಿಯಲ್ಲಿ ಪ್ರಮುಖವಾಗಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಹಾಗೂ ಭಜರಂಗದಳದ ಹಾಸನ ವಿಭಾಗದ ಸಂಯೋಜಕ ಶ್ಯಾಮ್ ವಿ ಗೌಡ ಅವರ ಹೆಸರುಗಳಿವೆ.

ಇವರೊಂದಿಗೆ ವಿವಿಧ ಕೋಮು ಸಂಘರ್ಷ ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ಮುಸ್ಲಿಂ ಮುಖಂಡರ ಹೆಸರನ್ನೂ ಶಿಫಾರಸ್ಸು ಮಾಡಲಾಗಿದೆ.

ಈ ಸಂಬಂಧ ಪೊಲೀಸ್ ಇಲಾಖೆ ಉಪ ವಿಭಾಗಾಧಿಕಾರಿಗಳಿಗೆ ಪತ್ರ ರವಾನಿಸಲಾಗಿದ್ದು, ಸಂಬಂಧಿಸಿದ ಎಲ್ಲರನ್ನು ಮಾರ್ಚ್ 25ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಆರೋಪಿಗಳು ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟುಮಾಡಿದ ಆರೋಪಗಳು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಗಡಿುಪಾರು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕ್ರಮಕ್ಕೆ ತೀವ್ರ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಎಂಎಲ್ಸಿ ಸಿಟಿ.ರವಿ ಅವರು, ಪಕ್ಷವು ಈ ನಾಯಕರ ಬೆಂಬಲಕ್ಕೆ ದೃಢವಾಗಿ ನಿಲ್ಲಲಿದೆ ಎಂದು ಹೇಳಿದ್ದಾರೆ.

ಪೊಲೀಸರು ನಮ್ಮ ಪಕ್ಷಕ್ಕೆ ಸವಾಲು ಹಾಕಿದ್ದಾರೆ. ನಾವು ಇದನ್ನು ಕಾನೂನು ಹೋರಾಟದಲ್ಲಿಯೂ ಹಾಗೂ ಸಾರ್ವಜನಿಕ ಅಭಿಪ್ರಾಯದಲ್ಲಿಯೂ ಎದುರಿಸುತ್ತೇವೆ. ಕಾರ್ಯಕರ್ತರನ್ನು ಭಯಭೀತರನ್ನಾಗಿಸಲು ಪೊಲೀಸ್ ಅಧಿಕಾರದ ದುರುಪಯೋಗ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇದೇ ವೇಳೆ, ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆಗಳ ಕುರಿತು ಮಾತನಾಡಿದ ಅವರು, ಬಾಗಲಕೋಟೆಗೆ ವೀರಭದ್ರಯ್ಯ ಚರಂತಿಮಠ ಹಾಗೂ ದಾವಣಗೆರೆಗೆ ಶ್ರೀನಿವಾಸ್ ದಾಸ್ಕರಿಯಪ್ಪ ಅವರನ್ನು ಅಭ್ಯರ್ಥಿಗಳಾಗಿ ಆಯ್ಕೆ ಮಾಡಲಾಗಿದೆ. ಪಕ್ಷದ ಕಾರ್ಯಕರ್ತರಿಗೆ ಅವಕಾಶ ನೀಡುವ ಮೂಲಕ ವಿಶ್ವಾಸ ಹೆಚ್ಚಿಸುವುದು ನಮ್ಮ ಉದ್ದೇಶ ಎಂದು ಹೇಳಿದ್ದಾರೆ.

ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ಧ ಜನರಲ್ಲಿ ಅಸಮಾಧಾನ ಹೆಚ್ಚುತ್ತಿದೆ ಎಂದು ಆರೋಪಿಸಿದ ಅವರು, ಜೆಡಿಎಸ್ ಕೂಡ ಬಿಜೆಪಿ ಜೊತೆ ನಿಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಜೊತೆಗೆ, ಪಕ್ಷದ ಸೂಚನೆಯಂತೆ ಪಶ್ಚಿಮ ಬಂಗಾಳ ಚುನಾವಣೆಯಲ್ಲೂ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!