ಸಂಗ್ರಹ ಚಿತ್ರ 
ರಾಜ್ಯ

ಉಡುಪಿ: 'ಸಮಾಧಾನ ಮಹೋತ್ಸವ' ವಿರೋಧಿಸಿ ಪ್ರತಿಭಟನೆ; ಹಿಂದು ಜಾಗರಣಾ ವೇದಿಕೆಯ ಮುಖಂಡರು, ಕಾರ್ಯಕರ್ತರು ಸೇರಿ 38 ಮಂದಿ ವಶಕ್ಕೆ

ಮಾರ್ಚ್ 20ರಿಂದ 22ರವರೆಗೆ ಪ್ರತಿದಿನ ಸಂಜೆ 5.30ರಿಂದ 9.30ರವರೆಗೆ ಈ ಧಾರ್ಮಿಕ ಕಾರ್ಯಕ್ರಮ ನಡೆಸಲಾಗುತ್ತಿತ್ತು, ಈ ಕಾರ್ಯಕ್ರಮಕ್ಕೆ ನ್ಯಾಯಾಲಯ ಅನುಮತಿ ನೀಡಿರುವುದಾಗಿ ಪೊಲೀಸ್ ಇಲಾಖೆ ತಿಳಿಸಿತ್ತು.

ಉಡುಪಿ: ಉಡುಪಿಯಲ್ಲಿ ಹಮ್ಮಿಕೊಳ್ಳಲಾದ ಸಮಾಧಾನ ಮಹೋತ್ಸವ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ್ದ 38 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉಡುಪಿ ಕ್ರಿಶ್ಚಿಯನ್ ಪಿಯು ಕಾಲೇಜು ಮೈದಾನದಲ್ಲಿ ಫೇಲೋಶಿಫ್ ಆಫ್ ಉಡುಪಿ ಡಿಸ್ಟ್ರಿಕ್ ಚರ್ಚಸ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಘಟನೆ ನಡೆದಿತ್ತು.

ಮಾರ್ಚ್ 20ರಿಂದ 22ರವರೆಗೆ ಪ್ರತಿದಿನ ಸಂಜೆ 5.30ರಿಂದ 9.30ರವರೆಗೆ ಈ ಧಾರ್ಮಿಕ ಕಾರ್ಯಕ್ರಮ ನಡೆಸಲಾಗುತ್ತಿತ್ತು, ಈ ಕಾರ್ಯಕ್ರಮಕ್ಕೆ ನ್ಯಾಯಾಲಯ ಅನುಮತಿ ನೀಡಿರುವುದಾಗಿ ಪೊಲೀಸ್ ಇಲಾಖೆ ತಿಳಿಸಿತ್ತು.

ಈ ಕಾರ್ಯಕ್ರಮಕ್ಕೆ ತಮಿಳುನಾಡಿನ ಪಾದ್ರಿ ಮೋಹನ್ ಸಿ ಲಾಜರಸ್ ಅವರನ್ನು ವಿಶೇಷ ಭಾಷಣಕಾರರಾಗಿ ಆಹ್ವಾನಿಸಲಾಗಿತ್ತು. ಅವರ ಭಾಗವಹಿಸುವಿಕೆಗೆ ವಿರೋಧ ವ್ಯಕ್ತಪಡಿಸಿದ ಹಿಂದೂ ಜಾಗರಣ ವೇದಿಕೆ ಸೇರಿದಂತೆ ಹಲವು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪಾದ್ರಿ ವಿರುದ್ಧ ಹಿಂದೂ ದೇವತೆಗಳಿಗೆ ಅವಮಾನ ಮಾಡಿದ ಪ್ರಕರಣಗಳಿವೆ ಎಂದು ಆರೋಪಿಸಿದರು.

ಶುಕ್ರವಾರ ಸಂಜೆ ಸುಮಾರು 5 ಗಂಟೆಗೆ, ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಗೋವಿಂದ ಕಲ್ಯಾಣ ಮಂಟಪದ ಬಳಿ ಸೇರಿ ಮಾಧ್ಯಮಗಳ ಮುಂದೆ ಮಾತನಾಡಿದ ಬಳಿಕ, ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದತ್ತ ಮೆರವಣಿಗೆ ನಡೆಸಲು ಯತ್ನಿಸಿದರು. ಆದರೆ ಪೊಲೀಸರು ಮಧ್ಯಪ್ರವೇಶಿಸಿ ಅವರನ್ನು ಮುಂದೆ ಸಾಗದಂತೆ ತಡೆದರು.

ಈ ವೇಳೆ ಒಟ್ಟು 38 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು. ಈ ಸಂಬಂಧ ಉಡುಪಿ ನಗರ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 189(2) ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆಯ ಸೆಕ್ಷನ್ 112 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಘಟನೆ ಉಡುಪಿ ನಗರದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣ ಮಾಡಿತ್ತು, ಇದೀಗ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ಭದ್ರತೆಯನ್ನು ಹೆಚ್ಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!