ಸಚಿವ ಶಿವರಾಜ್ ತಂಗಡಗಿ 
ರಾಜ್ಯ

'ನಾನು ಆರೋಗ್ಯವಾಗಿದ್ದು, ಯಾರು ಆತಂಕಪಡುವ ಅಗತ್ಯವಿಲ್ಲ': ಸಚಿವ ಶಿವರಾಜ್ ತಂಗಡಗಿ

ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮವಿದ್ದ ಕಾರಣ ನಾಲ್ಕು ದಿನಗಳ ಹಿಂದೆ ನನ್ನ ಕನಕಗಿರಿ ಮತಕ್ಷೇತ್ರಕ್ಕೆ ಹೋಗಿದ್ದೆ ಎಂದಿದ್ದಾರೆ.

ತುಮಕೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿತ್ತು. ಇದಕ್ಕೆ ಈಗ ಸ್ವತಃ ಸಚಿವರೇ ಪ್ರತಿಕ್ರಿಯೆ ನೀಡಿದ್ದಾರೆ.ತಾವು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.

ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮವಿದ್ದ ಕಾರಣ ನಾಲ್ಕು ದಿನಗಳ ಹಿಂದೆ ನನ್ನ ಕನಕಗಿರಿ ಮತಕ್ಷೇತ್ರಕ್ಕೆ ಹೋಗಿದ್ದೆ. ಕಾರ್ಯಕ್ರಮ ಮುಗಿಸಿಕೊಂಡು ಕೊಪ್ಪಳದಿಂದ ಬೆಂಗಳೂರಿಗೆ ಹೊರಟು ಬರುವಾಗ ನಿನ್ನೆ ಭಾನುವಾರ ರಾತ್ರಿ ಮಾರ್ಗ ಮಧ್ಯೆ ಎದೆ ಚುಚ್ಚಿದ ಅನುಭವ ಆಯಿತು. ಈ ಹಿನ್ನೆಲೆಯಲ್ಲಿ ನನ್ನ ಕುಟುಂಬದ ವೈದ್ಯರೊಂದಿಗೆ ಕರೆ ಮಾಡಿ ಮಾತನಾಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಒಮ್ಮೆ ತಪಾಸಣೆ ಮಾಡಿಸುವಂತೆ ಸೂಚಿಸಿದರು ಎಂದಿದ್ದಾರೆ.

ಆಸ್ಪತ್ರೆಯಲ್ಲಿ ಇಸಿಜಿ ಮಾಡಿಸಿದಾಗ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಈ ರೀತಿ ಆಗಿದೆ. ಯಾರು ಆತಂಕಪಡುವ ಅಗತ್ಯವಿಲ್ಲ. ನಾನು ಇಂದು ಎಂದಿನಂತೆ ವಿಧಾನಸಭೆ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

ಮೊದಲ ಮಹಿಳಾ ಟೆಸ್ಟ್ ಪಂದ್ಯ: ಲಾರ್ಡ್ಸ್ ನಲ್ಲಿ ಅಪರೂಪದ ದಾಖಲೆ ಬರೆದ ಸ್ಮೃತಿ ಮಂಧಾನಾ! ಆಕರ್ಷಕ ಅರ್ಧಶತಕ