ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆ: ವದಂತಿಗಳಿಗೆ ಕಿವಿಗೊಡಬೇಡಿ; ಜನರಿಗೆ ರಾಜ್ಯ ಸರ್ಕಾರ ಮನವಿ!

ದೇಶಾದ್ಯಂತ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಸಾಕಷ್ಟು ಇಂಧನ ಸಂಗ್ರಹವಿದೆ ಎಂದು ಕೇಂದ್ರ ಸ್ಪಷ್ಟಪಡಿಸಿದೆ ಎಂದು ರಾಜ್ಯ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆಯಾಗಿದೆ ಎಂಬ ವದಂತಿಗಳು ಹರಿದಾಡುತ್ತಿದೆ. ಈ ಕುರಿತು ರಾಜ್ಯ ಸರ್ಕಾರ ಬುಧವಾರ ಸ್ಪಷ್ಪನೆ ನೀಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ ಅಥವಾ ರಾಜ್ಯದ ಕೆಲವು ಭಾಗಗಳಲ್ಲಿ ಜನರು ಪೆಟ್ರೋಲ್ ಬಂಕ್ ಗಳ ಮುಂದೆ ಕ್ಯೂನಲ್ಲಿ ನಿಂತಿದ್ದಾರೆ ಎಂಬ ವರದಿಗಳಿಂದ ಭಯಭೀತರಾಗಿ ಖರೀದಿಗೆ ಮುಂದಾಗಬೇಡಿ ಮನವಿ ಮಾಡಿದೆ.

ದೇಶಾದ್ಯಂತ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಸಾಕಷ್ಟು ಇಂಧನ ಸಂಗ್ರಹವಿದೆ ಎಂದು ಕೇಂದ್ರ ಸ್ಪಷ್ಟಪಡಿಸಿದೆ ಎಂದು ರಾಜ್ಯ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ರಾಜ್ಯದ ಕೆಲವು ಭಾಗಗಳಲ್ಲಿ ಜನರು ಬಾಟಲಿಗಳು ಮತ್ತು ಕ್ಯಾನ್‌ಗಳಂತಹ ಕಂಟೈನರ್‌ಗಳೊಂದಿಗೆ ಪೆಟ್ರೋಲ್ ಪಂಪ್‌ಗಳಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದಾರೆ ಎಂದು ವಿವಿಧ ಮಾಧ್ಯಮಗಳ ವರದಿಗಳು ಸರ್ಕಾರದ ಗಮನಕ್ಕೆ ಬಂದಿದೆ. ಇದು ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯನ್ನು ಸೂಚಿಸುವ ಸುಳ್ಳು ವದಂತಿಗಳಾಗಿವೆ ಎಂದು ಹೇಳಿದೆ.

ಗಂಭೀರ ಸುರಕ್ಷತಾ ಅಪಾಯಗಳು ಮತ್ತು ಬೆಂಕಿಯ ಅಪಾಯಗಳನ್ನು ಉಲ್ಲೇಖಿಸಿ, ಸಡಿಲವಾದ ಅಥವಾ ಸೂಕ್ತವಲ್ಲದ ಪಾತ್ರೆಗಳಲ್ಲಿ ಪೆಟ್ರೋಲ್ ಸಾಗಿಸುವುದು ಅಥವಾ ಸಂಗ್ರಹಿಸುವುದರ ವಿರುದ್ಧ ಜನರಿಗೆ ಸಲಹೆ ನೀಡಿದೆ. ವಾಹನದ ಟ್ಯಾಂಕ್‌ಗಳಿಗೆ ಮಾತ್ರ ಇಂಧನವನ್ನು ನೇರವಾಗಿ ಪೂರೈಸಲು ಚಿಲ್ಲರೆ ಮಾರಾಟ ಮಳಿಗೆಗಳಿಗೆ ಸೂಚನೆ ನೀಡಿದೆ.

ಬಾಟಲಿಗಳು, ಕ್ಯಾನ್‌ಗಳು ಅಥವಾ ಯಾವುದೇ ಬಾಹ್ಯ ಪಾತ್ರೆಗಳಲ್ಲಿ ಇಂಧನ ವಿತರಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಜಾರಿಯಲ್ಲಿರುವ ಕಾನೂನುಗಳ ಪ್ರಕಾರ, ದೊಡ್ಡ ಪ್ರಮಾಣದಲ್ಲಿ ಅಥವಾ ಅನಧಿಕೃತ ಕಂಟೈನರ್‌ಗಳಲ್ಲಿ ಇಂಧನ ಸಂಗ್ರಹಿಸುವುದು ಕಾನೂನುಬಾಹಿರವಾಗಿದೆ ಎಂದು ಎಚ್ಚರಿಕೆ ನೀಡಿದೆ.

ಇಂಧನ ಪೂರೈಕೆ ಸಮರ್ಪಕವಾಗಿದ್ದು, ಆತಂಕಕ್ಕೆ ಯಾವುದೇ ಕಾರಣವಿಲ್ಲ ಎಂದು ಸರ್ಕಾರ ಭರವಸೆ ನೀಡಿದೆ. ಈ ಮಧ್ಯೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ನಗರ ವ್ಯಾಪ್ತಿಯಲ್ಲಿ ಇಂಧನ ಕೊರತೆ ಬಗ್ಗೆ ವದಂತಿ ಹಬ್ಬಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದು, ಸಾಕಷ್ಟು ಪೂರೈಕೆ ಇದೆ ಎಂದು ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ನರಕ ಸೃಷ್ಟಿಸುತ್ತೇವೆ: ಅಮೆರಿಕಾ ಬೆದರಿಕೆಗೆ ಕ್ಯಾರೆ ಎನ್ನದ ಇರಾನ್; ಇಸ್ರೇಲ್-ಕುವೈತ್ ಮೇಲೆ ಕ್ಷಿಪಣಿ-ಡ್ರೋನ್ ದಾಳಿ..!

“ನಮ್ಮನ್ನು ಕೆಣಕದಿರಿ”...: ಕೋಲ್ಕತಾ ಹೆಸರೆತ್ತಿ ಭಾರತಕ್ಕೆ ಪಾಕ್ ಬೆದರಿಕೆ, ಪದೇ ಪದೇ ಯುದ್ಧೋತ್ಸಾಹದ ಮಾತು..!

IPL 2026: ಅಹಮದಾಬಾದ್ ಮೈದಾನದಲ್ಲಿ RR ವಿರುದ್ಧ ಅತ್ಯಧಿಕ ರನ್ ಚೇಸ್‌ನಲ್ಲಿ ಕೊನೆಯ ಓವರ್‌ನಲ್ಲಿ ಸೋತ Gujarat Titans

ವಿದೇಶಗಳ Mk-84 ಗೆ ಪರ್ಯಾಯ, ಆತ್ಮನಿರ್ಭರತೆಗೆ ಉತ್ತೇಜನ: ದೇಶೀಯವಾಗಿ 1000-kg ವಾಯುಬಾಂಬ್‌ ತಯಾರಿಸಲಿರುವ ಭಾರತ!

ಮಾಗಡಿ Congress ಶಾಸಕ ಹೆಚ್​​.ಸಿ ಬಾಲಕೃಷ್ಣಗೆ ಕೋರ್ಟ್ ಶಾಕ್​​: ಜಾಮೀನು ರಹಿತ ವಾರೆಂಟ್ ಜಾರಿ

SCROLL FOR NEXT