ಈಶ್ವರ್ ಖಂಡ್ರೆ ಸಾಂದರ್ಭಿಕ ಚಿತ್ರ 
ರಾಜ್ಯ

ನೀರಾನೆ ದಾಳಿಯಿಂದ ಪಶುವೈದ್ಯೆ ಸಾವು: ಘಟನೆ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, SOP ರೂಪಿಸಲು ಸೂಚನೆ

ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವೇನು ಎಂಬುದರ ಕುರಿತು ವಿವರವಾದ ತನಿಖೆಯನ್ನು ಕೈಗೊಳ್ಳಲು ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದರು.

ಬೆಂಗಳೂರು: ನೀರಾನೆ ದಾಳಿಯಿಂದ ಪಶುವೈದ್ಯೆ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಪಶುವೈದ್ಯರ ಸುರಕ್ಷಿತ ಕಾರ್ಯನಿರ್ವಹಣೆಗೆ ಮಾನದಂಡ ಕಾರ್ಯವಿಧಾನ (SOP)ಗಳನ್ನು ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಿಧನರಾದ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಅವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಚಿವ ಈಶ್ವರ್ ಖಂಡ್ರೆಯವರು ಪ್ರತಿಕ್ರಿಯೆ ನೀಡಿದರು.

ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವೇನು ಎಂಬುದರ ಕುರಿತು ವಿವರವಾದ ತನಿಖೆಯನ್ನು ಕೈಗೊಳ್ಳಲು ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದರು.

ಸಿಬ್ಬಂದಿ ಮತ್ತು ಪಶುವೈದ್ಯರು ಕರ್ತವ್ಯದಲ್ಲಿರುವಾಗ ಅವರ ಸುರಕ್ಷತೆ ಅತ್ಯಂತ ಮುಖ್ಯವಾಗಿರುತ್ತದೆ. ಅವರ ಕಾಳಜಿಗಳನ್ನು ಅರ್ಥಮಾಡಿಕೊಳ್ಳಲು ಪಶುವೈದ್ಯರನ್ನು ಸಂಪರ್ಕಿಸಲು ಅರಣ್ಯ ಮತ್ತು ಮೃಗಾಲಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ತಿಳಿಸಿದರು.

ಸಮೀಕ್ಷಾ ರೆಡ್ಡಿ ಅವರ ಕುಟುಂಬವು ಸ್ಮಾರಕ ನಿರ್ಮಿಸುವಂತೆ ಒತ್ತಾಯಿಸಿದ್ದು, ಕೆಲವರು ಆನೆಗೆ ಅವರ ಹೆಸರಿಡಬೇಕೆಂದು ಸೂಚಿಸಿದ್ದಾರೆ. ಈ ವಿಷಯವನ್ನು ಅಧಿಕಾರಿಗಳು ಮತ್ತು ಸರ್ಕಾರದೊಂದಿಗೆ ಚರ್ಚಿಸಿ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಈ ನಡುವೆ ಪಶುವೈದ್ಯರ ಸುರಕ್ಷಿತ ಕಾರ್ಯನಿರ್ವಹಣೆಗೆ ಮಾನದಂಡ ಕಾರ್ಯವಿಧಾನ (SOP)ಗಳನ್ನು ರೂಪಿಸುವಂತೆ ಅಧಿಕಾರಿಗಳಿಗೆ ಈಶ್ವರ್ ಖಂಡ್ರೆಯವರು ಸೂಚನೆ ನೀಡಿದ್ದಾರೆ.

ಮಾನದಂಡ ಕಾರ್ಯವಿಧಾನದಲ್ಲಿ ಪಶುವೈದ್ಯರು ವನ್ಯಜೀವಿಗಳಿಗೆ ಚಿಕಿತ್ಸೆ ನೀಡುವಾಗ ಅನುಸರಿಸಬೇಕಾದ ಕ್ರಮಗಳು, ಅವರ ವೈಯಕ್ತಿಕ ಸುರಕ್ಷತೆ ಹಾಗೂ ಪ್ರಾಣಿಗಳ ಭದ್ರತೆ ಕುರಿತ ಅಂಶಗಳು ಒಳಗೊಂಡಿರಬೇಕು ಎಂದೂ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ಮಿತ್ರರಾಷ್ಟ್ರಗಳಿಗಷ್ಟೇ ಹಾರ್ಮುಜ್‌ ಜಲಸಂಧಿ ತೆರೆದ ಇರಾನ್‌; 15 ಅಂಶಗಳ ಶಾಂತಿ ಸೂತ್ರ ಮುಂದಿಟ್ಟ ಅಮೆರಿಕಾ, ಒಪ್ಪುತ್ತದೆಯೇ ಟೆಹ್ರಾನ್..?

ಮಹಾರಾಷ್ಟ್ರ DCM ಅಜಿತ್ ಪವಾರ್ ವಿಮಾನ ಪತನ ಆಕಸ್ಮಿಕವಲ್ಲ, ಇದೊಂದು ವ್ಯವಸ್ಥಿತ ಕೊಲೆ: ಬೆಂಗಳೂರಲ್ಲಿ FIR ದಾಖಲು

Jakkur aerodrome 200 ಏಕರೆ ಭೂಮಿ ಮೇಲೆ ರಿಯಲ್ ಎಸ್ಟೇಟ್ ಕಣ್ಣು: ಕಬಳಿಕೆಗೆ ದೊಡ್ಡ ಲಾಬಿಯೇ ನಡೆಯುತ್ತಿದೆ; BJP ಗಂಭೀರ ಆರೋಪ

ಗದಗ: ನೀರು ಕುಡಿದ ವಿಚಾರಕ್ಕೆ 2 ಸಮುದಾಯಗಳ ನಡುವೆ ಘರ್ಷಣೆ; 15 ಮಂದಿಗೆ ಗಾಯ

ಇ-ಖಾತೆಯಲ್ಲಿ ಲಂಚಾವತಾರ: ಸದನದಲ್ಲಿ ದಾಖಲೆ ಸಹಿತ ಆರ್.ಅಶೋಕ್ ಗಂಭೀರ ಆರೋಪ

SCROLL FOR NEXT