ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ 
ರಾಜ್ಯ

ವಿವಾದದ ನಡುವೆ ಮೈಸೂರಿನ ಮುಕ್ತ ವಿವಿಯಲ್ಲಿ RSS ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಉನ್ನತ ಶಿಕ್ಷಣ ಇಲಾಖೆಗೆ ತಿಳಿಸದೆ ಮಾರ್ಚ್ 25 ರಿಂದ 27ರವರೆಗೆ ಆಯೋಜಿಸಲಾಗಿದ್ದ ಈ ಅಂತರರಾಷ್ಟ್ರೀಯ ಸಮ್ಮೇಳನವನ್ನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರ KSOU ಅಧಿಕಾರಿಗಳಿಗೆ ಮತ್ತು ಕಾರ್ಯಕ್ರಮ ಸಂಘಟಕರಿಗೆ ನಿರ್ದೇಶನ ನೀಡಿತ್ತು.

ಮೈಸೂರು: ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರ ನೀಡಿರುವ ನಿರ್ದೇಶನದ ವಿವಾದದ ನಡುವೆಯೇ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಬುಧವಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(KSOU)ದಲ್ಲಿ ಆರ್‌ಎಸ್‌ಎಸ್‌ ಸಂಬಂಧಿತ ‘ಏಕಾತ್ಮ ಮಾನವ ದರ್ಶನ – ಭಾರತದ ವಿಶ್ವದೃಷ್ಟಿ’ ಕುರಿತ ಅಂತಾರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನವನ್ನು ಉದ್ಘಾಟಿಸಿದರು.

ಉನ್ನತ ಶಿಕ್ಷಣ ಇಲಾಖೆಗೆ ತಿಳಿಸದೆ ಮಾರ್ಚ್ 25 ರಿಂದ 27ರವರೆಗೆ ಆಯೋಜಿಸಲಾಗಿದ್ದ ಈ ಅಂತರರಾಷ್ಟ್ರೀಯ ಸಮ್ಮೇಳನವನ್ನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರ KSOU ಅಧಿಕಾರಿಗಳಿಗೆ ಮತ್ತು ಕಾರ್ಯಕ್ರಮ ಸಂಘಟಕರಿಗೆ ನಿರ್ದೇಶನ ನೀಡಿತ್ತು.

ರಾಜ್ಯ ಸರ್ಕಾರದ ನಿರ್ದೇಶನದ ಹೊರತಾಗಿಯೂ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯಪಾಲರು, ದೀನದಯಾಳ್ ಉಪಾಧ್ಯಾಯ ಅವರ ಏಕಾತ್ಮ ಮಾನವ ದರ್ಶನ(ಸಮಗ್ರ ಮಾನವತಾವಾದ) ಎಂಬ ಪರಿಕಲ್ಪನೆಯು ಕೇವಲ ತಾತ್ವಿಕ ಕಲ್ಪನೆಯಲ್ಲ. ಅದು ಭಾರತದ ಆತ್ಮ, ಸಂಸ್ಕೃತಿ, ಚಿಂತನೆ ಮತ್ತು ಜೀವನ ವಿಧಾನದ ಮೂಲತತ್ವವಾಗಿದೆ ಎಂದು ಹೇಳಿದರು.

"ಏಕಾತ್ಮ ಮಾನವ ದರ್ಶನ ಭಾರತೀಯ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ಮೌಲ್ಯಗಳಲ್ಲಿ ಬೇರೂರಿರುವ ಸಮಗ್ರ ದೃಷ್ಟಿಕೋನವನ್ನು ಪ್ರಸ್ತುತಪಡಿಸುತ್ತದೆ" ಎಂದು ರಾಜ್ಯಪಾಲರು ಹೇಳಿದರು.

ಭಾರತವು ತನ್ನ ಶ್ರೀಮಂತ ನಾಗರಿಕತೆ ಮತ್ತು ಕಾಲಾನಂತರದಲ್ಲಿ ಮಹಾನ್ ಚಿಂತಕರು ಮತ್ತು ನಾಯಕರಿಂದ ರೂಪಿಸಲ್ಪಟ್ಟ ಸಾಂಸ್ಕೃತಿಕ ಪರಂಪರೆಗೆ ಜಾಗತಿಕ ಮನ್ನಣೆಯನ್ನು ಗಳಿಸಿದೆ ಎಂದು ಗೆಹ್ಲೋಟ್ ತಿಳಿಸಿದರು.

ದೀನದಯಾಳ್ ಉಪಾಧ್ಯಾಯ ಅವರನ್ನು ಒಬ್ಬ ಉತ್ತಮ ಸಂಘಟಕ, ತತ್ವಜ್ಞಾನಿ, ವಾಗ್ಮಿ ಮತ್ತು ಅರ್ಥಶಾಸ್ತ್ರಜ್ಞ ಎಂದು ಉಲ್ಲೇಖಿಸಿದ ರಾಜ್ಯಪಾಲರು, ಆರು ದಶಕಗಳ ಹಿಂದೆ ಪ್ರತಿಪಾದಿಸಲಾದ ಸಮಗ್ರ ಮಾನವತಾವಾದದ ಸಿದ್ಧಾಂತವು ವ್ಯಕ್ತಿ, ಸಮಾಜ ಮತ್ತು ಪ್ರಕೃತಿಯ ನಡುವಿನ ಸಾಮರಸ್ಯವನ್ನು ಒತ್ತಿಹೇಳುವ ಸಮಗ್ರ ಚೌಕಟ್ಟನ್ನು ನೀಡುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪೆಟ್ರೋಲಿಯಂ ಉತ್ಪನ್ನಗಳ ಮಿತಬಳಕೆ "ಈಗಿನ ಅಗತ್ಯ"-ಪ್ರಧಾನಿ ಮೋದಿ: ಮುಂದೆ ಕಾದಿದೆಯಾ ಸಂಕಷ್ಟದ ದಿನಗಳು?

IPL 2026: ಕೊನೆಯ ಎಸೆತದಲ್ಲಿ RCBಗೆ ರೋಚಕ ಜಯ; MI ವಿರುದ್ಧದ ಪಂದ್ಯ ಗೆಲ್ಲಿಸಿದ ಕೃನಾಲ್, ಭುವಿ; ಅಗ್ರಸ್ಥಾನಕ್ಕೇರಿದ ಆರ್‌ಸಿಬಿ!

1 ಮತದಿಂದ DMK ಅಭ್ಯರ್ಥಿ ಪೆರಿಯಕರುಪ್ಪನ್ ಸೋಲು; ಅಂಚೆ ಮತ ಗೊಂದಲದ ಬಗ್ಗೆ ECI ವಿರುದ್ಧ ಮದ್ರಾಸ್ ಹೈಕೋರ್ಟ್ ಕಿಡಿ!

S Keerthana: ವಿಜಯ್ ಕ್ಯಾಬಿನೆಟ್ ನಲ್ಲಿ ಪಂಚಭಾಷಾ ಪಾರಂಗತೆ; ಅತಿ ಕಿರಿಯ ಶಾಸಕಿ!

Pak ನಲ್ಲಿ ರಕ್ತದೋಕುಳಿ: ಹೊಸ ಉಗ್ರ ಸಂಘಟನೆ ನಡೆಸಿದ ದಾಳಿಯಲ್ಲಿ 21 ಸೈನಿಕರು ಬಲಿ; ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ!

SCROLL FOR NEXT