ಹೈಕೋರ್ಟ್  online desk
ರಾಜ್ಯ

ಮುಡಾ ಪ್ರಕರಣ: ಮತ್ತೆ ಸಿಎಂ ಗೆ ಸಂಕಷ್ಟ; 'ಬಿ' ರಿಪೋರ್ಟ್ ಸಂಬಂಧ ಸಿದ್ದರಾಮಯ್ಯ, ಪತ್ನಿ ಗೆ ಹೈಕೋರ್ಟ್ ನೋಟಿಸ್ ಜಾರಿ

ಪಾರ್ವತಿ ಅವರ 3.16 ಎಕರೆ ಭೂಮಿಗೆ ಬದಲಾಗಿ 50:50 ಅನುಪಾತದ ಯೋಜನೆಯಡಿಯಲ್ಲಿ ಮುಡಾ ಅವರಿಗೆ ನಿವೇಶನಗಳನ್ನು ಮಂಜೂರು ಮಾಡಿತ್ತು, ಅಲ್ಲಿ ಅದು ವಸತಿ ಲೌಟ್ ನ್ನು ಅಭಿವೃದ್ಧಿಪಡಿಸಿತ್ತು.

ಬೆಂಗಳೂರು: ಮುಡಾ ನಿವೇಶನ (ಪ್ಲಾಟ್) ಹಂಚಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ಬಿ-ರಿಪೋರ್ಟ್ ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಬಿ ಎಂ ಅವರಿಗೆ ನೋಟಿಸ್ ಜಾರಿ ಮಾಡಲು ಕರ್ನಾಟಕ ಹೈಕೋರ್ಟ್ ಗುರುವಾರ ಆದೇಶಿಸಿದೆ.

ಬಿ-ರಿಪೋರ್ಟ್ ಕುರಿತು ಲೋಕಾಯುಕ್ತ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯದಿಂದ ಪ್ರತಿಕ್ರಿಯೆ ನೀಡುವಂತೆ ನ್ಯಾಯಾಲಯ ಕೋರಿದೆ.

ಲೋಕಾಯುಕ್ತ ಪೊಲೀಸರು ಸಲ್ಲಿಸಿದ ಬಿ-ರಿಪೋರ್ಟ್ ನ್ನು ಪ್ರಶ್ನಿಸಿ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಎಸ್ ಸುನಿಲ್ ದತ್ ಯಾದವ್ ಅವರು ನೋಟಿಸ್ ಜಾರಿ ಮಾಡಲು ಆದೇಶಿಸಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದಲ್ಲಿ, ಮೈಸೂರಿನ ಉನ್ನತ ಪ್ರದೇಶದಲ್ಲಿ ಸಿದ್ದರಾಮಯ್ಯ ಅವರ ಪತ್ನಿಗೆ ಪರಿಹಾರ ನಿವೇಶನಗಳನ್ನು ಮಂಜೂರು ಮಾಡಲಾಗಿದೆ, ಅವರ ಭೂಮಿಯ ಸ್ಥಳಕ್ಕಿಂತ ಹೆಚ್ಚಿನ ಆಸ್ತಿ ಮೌಲ್ಯವನ್ನು ಹೊಂದಿದೆ ಎಂಬ ಆರೋಪಗಳನ್ನು ಮಾಡಲಾಗಿತ್ತು.

ಪಾರ್ವತಿ ಅವರ 3.16 ಎಕರೆ ಭೂಮಿಗೆ ಬದಲಾಗಿ 50:50 ಅನುಪಾತದ ಯೋಜನೆಯಡಿಯಲ್ಲಿ ಮುಡಾ ಅವರಿಗೆ ನಿವೇಶನಗಳನ್ನು ಮಂಜೂರು ಮಾಡಿತ್ತು, ಅಲ್ಲಿ ಅದು ವಸತಿ ಲೌಟ್ ನ್ನು ಅಭಿವೃದ್ಧಿಪಡಿಸಿತ್ತು.

ಈ ಯೋಜನೆಯಡಿಯಲ್ಲಿ, ವಸತಿ ವಿನ್ಯಾಸಗಳಿಗಾಗಿ ಸ್ವಾಧೀನಪಡಿಸಿಕೊಂಡಿರುವ ಅಭಿವೃದ್ಧಿಯಾಗದ ಭೂಮಿಗೆ ಬದಲಾಗಿ ಅಭಿವೃದ್ಧಿ ಹೊಂದಿದ ಭೂಮಿಯ ಶೇಕಡ 50 ರಷ್ಟು ಭೂಮಿಯನ್ನು ಭೂಮಾಲೀಕರಿಗೆ ಮುಡಾ ಹಂಚಿಕೆ ಮಾಡಿದೆ.

ಸಿದ್ದರಾಮಯ್ಯ, ಅವರ ಪತ್ನಿ ಮತ್ತು ಪತ್ನಿಯ ಸಹೋದರನ ವಿರುದ್ಧ ಪ್ರಕರಣ ದಾಖಲಿಸಿದ ಕರ್ನಾಟಕ ಲೋಕಾಯುಕ್ತ ಪೊಲೀಸರು, ನಂತರ ಬಿ ರಿಪೋರ್ಟ್ ವರದಿಯನ್ನು ಸಲ್ಲಿಸುವ ಮೂಲಕ ಅವರಿಗೆ ಕ್ಲೀನ್ ಚಿಟ್ ನೀಡಿದ್ದರು. ಇದನ್ನು ಜನವರಿ 28 ರಂದು ಸಾರ್ವಜನಿಕ ಪ್ರತಿನಿಧಿಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯವು ಒಪ್ಪಿಕೊಂಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪೆಟ್ರೋಲಿಯಂ ಉತ್ಪನ್ನಗಳ ಮಿತಬಳಕೆ "ಈಗಿನ ಅಗತ್ಯ"-ಪ್ರಧಾನಿ ಮೋದಿ: ಮುಂದೆ ಕಾದಿದೆಯಾ ಸಂಕಷ್ಟದ ದಿನಗಳು?

IPL 2026: ಕೊನೆಯ ಎಸೆತದಲ್ಲಿ RCBಗೆ ರೋಚಕ ಜಯ; MI ವಿರುದ್ಧದ ಪಂದ್ಯ ಗೆಲ್ಲಿಸಿದ ಕೃನಾಲ್, ಭುವಿ; ಅಗ್ರಸ್ಥಾನಕ್ಕೇರಿದ ಆರ್‌ಸಿಬಿ!

1 ಮತದಿಂದ DMK ಅಭ್ಯರ್ಥಿ ಪೆರಿಯಕರುಪ್ಪನ್ ಸೋಲು; ಅಂಚೆ ಮತ ಗೊಂದಲದ ಬಗ್ಗೆ ECI ವಿರುದ್ಧ ಮದ್ರಾಸ್ ಹೈಕೋರ್ಟ್ ಕಿಡಿ!

S Keerthana: ವಿಜಯ್ ಕ್ಯಾಬಿನೆಟ್ ನಲ್ಲಿ ಪಂಚಭಾಷಾ ಪಾರಂಗತೆ; ಅತಿ ಕಿರಿಯ ಶಾಸಕಿ!

Pak ನಲ್ಲಿ ರಕ್ತದೋಕುಳಿ: ಹೊಸ ಉಗ್ರ ಸಂಘಟನೆ ನಡೆಸಿದ ದಾಳಿಯಲ್ಲಿ 21 ಸೈನಿಕರು ಬಲಿ; ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ!

SCROLL FOR NEXT