ಜ್ಯೋತಿ ನಿವಾಸ್ ಕಾಲೇಜು ಕಾರ್ಯಕ್ರಮದಲ್ಲಿ ಭಾಗವಹಿಸಿದ ಡಿಕೆ ಶಿವಕುಮಾರ್ 
ರಾಜ್ಯ

ದೇಶ ಹಾಗೂ ರಾಜ್ಯದ ಬೆಳವಣಿಗೆಗೆ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರ: ಡಿಸಿಎಂ ಡಿ.ಕೆ ಶಿವಕುಮಾರ್

ಪ್ರತಿಭೆಯ ಜೊತೆಗೆ ಸಂವಹನ ಮುಖ್ಯವಾದುದು. ನಾನು ರಾಜಕಾರಣಿ ಇರಬಹುದು‌ ಆದರೆ ನಾನು ಶಿಕ್ಷಣ ಪ್ರೇಮಿ. ಅಂತಿಮವಾಗಿ ನಮ್ಮನ್ನೆಲ್ಲಾ ಕಾಪಾಡುವುದೇ ಶಿಕ್ಷಣ. ನೀವು ಉದಾಹರಣೆ ಕೊಡುವುದು ತುಂಬಾ ಸುಲಭ. ಅದೇ ಎಲ್ಲರಿಗೂ ಉದಾಹರಣೆಯಾಗಿ ಬೆಳೆಯುವುದು ಕಠಿಣ ಕೆಲಸ.

ಬೆಂಗಳೂರು: ಅನೇಕ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳು ಈ ದೇಶ ಹಾಗೂ ರಾಜ್ಯದ ಶಿಕ್ಷಣ ವ್ಯವಸ್ಥೆಗೆ ಸಾಕಷ್ಟು ಕೊಡುಗೆ ನೀಡಿವೆ. ಅನೇಕ ನಾಯಕರನ್ನು ಹುಟ್ಟುಹಾಕಿವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಣ್ಣಿಸಿದರು.

ಜ್ಯೋತಿ ನಿವಾಸ್ ಶಿಕ್ಷಣ ಸಂಸ್ಥೆ ಶುಕ್ರವಾರ ಆಯೋಜಿಸಿದ್ದ 'ಕಾಲೇಜು ದಿವಸ' ದಲ್ಲಿ ಭಾಗವಹಿಸಿ ಮಾತನಾಡಿದರು. 60 ವರ್ಷಗಳ ಕಾಲ ಅತ್ಯುತ್ತಮ ಸೇವೆಯನ್ನು ಜ್ಯೋತಿ ನಿವಾಸ ಸಂಸ್ಥೆ ಮಾಡಿದೆ. ಈ ಕಾಲೇಜಿನ ಅನೇಕ ವಿದ್ಯಾರ್ಥಿಗಳನ್ನು ನಾನು ಬೇರೆ,‌ ಬೇರೆ ದೇಶಗಳಲ್ಲಿ ಭೇಟಿ ಮಾಡಿದ್ದೇನೆ. ಗ್ಲೋಬಲ್ ಮಟ್ಟದಲ್ಲಿ ಅನೇಕ ಪ್ರತಿಭಾವಂತರನ್ನು ಈ ಸಂಸ್ಥೆ ಕೊಡುಗೆಯಾಗಿ ಕೊಟ್ಟಿದೆ" ಎಂದರು.

ಪ್ರತಿಭೆಯ ಜೊತೆಗೆ ಸಂವಹನ ಮುಖ್ಯವಾದುದು. ನಾನು ರಾಜಕಾರಣಿ ಇರಬಹುದು‌ ಆದರೆ ನಾನು ಶಿಕ್ಷಣ ಪ್ರೇಮಿ. ಅಂತಿಮವಾಗಿ ನಮ್ಮನ್ನೆಲ್ಲಾ ಕಾಪಾಡುವುದೇ ಶಿಕ್ಷಣ. ನೀವು ಉದಾಹರಣೆ ಕೊಡುವುದು ತುಂಬಾ ಸುಲಭ. ಅದೇ ಎಲ್ಲರಿಗೂ ಉದಾಹರಣೆಯಾಗಿ ಬೆಳೆಯುವುದು ಕಠಿಣ ಕೆಲಸ" ಎಂದರು.

"ನಾನು ಕನಕಪುರದ ಸಣ್ಣ ಹಳ್ಳಿಯಿಂದ ಬಂದವನು. ಮೊದಲು ಸೆಂಟ್ ಥಾಮಸ್ ಶಾಲೆಯಲ್ಲಿ ಕಲಿತೆ. ನಂತರ ಎನ್ ಪಿಎಸ್ ಸೇರಿದೆ ಅಲ್ಲಿಂದ ನನ್ನ ಕಿತ್ತು ಹಾಕಿದರು. ಪದವಿ ಓದುವಾಗ ಎಲೆಕ್ಷನ್ ಗೆ ನಿಂತ ಕಾರಣಕ್ಕೆ ಪೂರ್ಣಗೊಳಿಸಲು ಆಗಲಿಲ್ಲ. ಕಡಿಮೆ ವಯಸ್ಸಿಗೆ ಶಾಸಕನಾದೇ. ಸದನದಲ್ಲಿ ಘಟಾನುಘಟಿ ನಾಯಕರ ಮಾತನ್ನು ಕೇಳಿ ನಾನು ಓದಬೇಕು ಎಂದು 46 ನೇ ವಯಸ್ಸಿನಲ್ಲಿ ಪದವಿ ಓದಿದೆ" ಎಂದರು.

ಹೊಸ ಮಹಿಳಾ ನಾಯಕಿಯರು ಬೆಳೆಯಬೇಕು. ಶೇ 33 ರಷ್ಟು ಮೀಸಲಾತಿ ರಾಜಕೀಯ ಕ್ಷೇತ್ರದಲ್ಲಿದೆ. ಸ್ಥಳೀಯ ಸಂಸ್ಥೆಗಳಲ್ಲಿ 50 ರಷ್ಟು ಮೀಸಲಾತಿ ನೀಡಲಾಗಿದೆ. ಭವಿಷ್ಯದಲ್ಲಿ ಈ ಕಾಲೇಜಿನಿಂದ ನಾಯಕಿಯರು ಹೊರಬರಬೇಕು ಎಂದು ಆಶಿಸುತ್ತೇನೆ" ಎಂದರು.

"ಮೂಲವನ್ನು ಮರೆತರೆ ಫಲ ದೊರೆಯುವುದಿಲ್ಲ. ಬೇರು ಗಟ್ಟಿಯಾಗಿರಬೇಕು ಆಗ ಮಾತ್ರ ಸಾಧನೆ ಮಾಡಲು ಸಾಧ್ಯ. ನಾನು ಡಿಸಿಎಂ ಇರಬಹುದು ಆದರೆ ನನ್ನ ಗುರುಗಳು ಎದುರಾದಾಗ ಅವರಿಗೆ ನಮಸ್ಕರಿಸುತ್ತೇನೆ. "ನಾವೆಲ್ಲರೂ ಒಬ್ಬರಿಗೊಬ್ಬರು ಆಧಾರವಾಗಿದ್ದು ಬೆಳೆಯಬೇಕು. ಪ್ರತಿಭೆಯನ್ನು ಬಚ್ಚಿಟ್ಟುಕೊಳ್ಳಬಾರದು. ಜ್ಞಾನವನ್ನು ಹಂಚಬೇಕು. ಹಂಚಿದಾಗ ಮಾತ್ರ ಪ್ರಗತಿ ಸಾಧ್ಯ" ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ಸೀತಾಪುರದಲ್ಲಿ ವಿಚಿತ್ರ ಪ್ರಕರಣ: ಹಗಲು ಪ್ರೇಮಿ, ರಾತ್ರಿ ಗಂಡ ಬೇಕಂತೆ! ಇಬ್ಬರ ಜತೆ ಸಂಸಾರ ನಡೆಸಲು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ! Video

‘ಏನೇನ್ ಮಾಡ್ತಾರೋ ಗೊತ್ತಿಲ್ಲ’: Donald Trump ‘ಅನಿರೀಕ್ಷಿತ ವರ್ತನೆ’ ಬಗ್ಗೆ ಎಚ್ಚರಿಕೆ: ಮೋದಿ ಭೇಟಿ ಬಳಿಕ ಜಂಟಿ ಸುದ್ದಿಗೋಷ್ಠಿಗೆ ಭಾರತ ಹಿಂದೇಟು!

ಪ್ರತಿಪಕ್ಷಗಳ ಪ್ರತಿಭಟನೆ, ಗದ್ದಲದ ನಡುವೆ ಯಾವುದೇ ಚರ್ಚೆಯಿಲ್ಲದೇ ವಿಧಾನ ಪರಿಷತ್ತಿನಲ್ಲಿ ಎರಡು ವಿಧೇಯಕಗಳು ಪಾಸ್

Biggboss Kannada ಅಗ್ನಿಪರೀಕ್ಷೆ: ಗೆಟ್ ಔಟ್, ಇದೆಲ್ಲಾ ಬೇಡ ಬ್ರೋ; ವಿನಯ್ ಗೌಡಗೆ ಸ್ಪರ್ಧಿ ತಿರುಗೇಟು, Video ವೈರಲ್!