ಸುಟ್ಟು ಕರಕಲಾಗಿರುವ ಬಸ್ 
ರಾಜ್ಯ

ಬೆಂಗಳೂರು: Lulu Mall ಬಳಿ ಹೊತ್ತಿ ಉರಿದ KSRTC ಬಸ್; ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು- Video

ಗುರುವಾರ ರಾತ್ರಿ 10:15ಕ್ಕೆ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಶಿವಮೊಗ್ಗದತ್ತ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಕೇವಲ ಐದೇ ನಿಮಿಷಗಳಲ್ಲಿ ಅಂದರೆ 10:20ರ ಸುಮಾರಿಗೆ ಸುಜಾತಾ ಚಿತ್ರಮಂದಿರದ ಬಳಿಯ ಲುಲು ಮಾಲ್ ತಲುಪಿತ್ತು.

ಬೆಂಗಳೂರು: ಮೆಜೆಸ್ಟಿಕ್‌ನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್‌ನಲ್ಲಿ ತಡರಾತ್ರಿ ಭೀಕರ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಭಸ್ಮವಾಗಿರುವ ಘಟನೆ ನಗರದ ಪ್ರಸಿದ್ಧ ಲುಲು ಮಾಲ್ ಮುಂಭಾಗ ಸಂಭವಿಸಿದೆ.

ಚಾಲಕನ ಸಮಯಪ್ರಜ್ಞೆ ಹಾಗೂ ಸಾರ್ವಜನಿಕರ ಜಾಗರೂಕತೆಯಿಂದಾಗಿ ಬಸ್ಸಿನಲ್ಲಿದ್ದ ಸುಮಾರು 40 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗುರುವಾರ ರಾತ್ರಿ 10:15ಕ್ಕೆ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಶಿವಮೊಗ್ಗದತ್ತ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಕೇವಲ ಐದೇ ನಿಮಿಷಗಳಲ್ಲಿ ಅಂದರೆ 10:20ರ ಸುಮಾರಿಗೆ ಸುಜಾತಾ ಚಿತ್ರಮಂದಿರದ ಬಳಿಯ ಲುಲು ಮಾಲ್ ತಲುಪಿತ್ತು.

ಈ ವೇಳೆ ಬಸ್ಸಿನ ಎಂಜಿನ್ ಹಾಗೂ ಕೆಳಭಾಗದಿಂದ ದಟ್ಟವಾದ ಹೊಗೆಯೊಂದಿಗೆ ಬೆಂಕಿ ಕಾಣಿಸಿಕೊಂಡಿದೆ. ಬಸ್ಸಿನ ಹಿಂಭಾಗದಲ್ಲಿ ಬೆಂಕಿ ಇರುವುದನ್ನು ಗಮನಿಸಿದ ದಾರಿಹೋಕರು, ಕೂಡಲೇ ಚಾಲಕನಿಗೆ ಕೂಗಿ ಎಚ್ಚರಿಸಿದ್ದಾರೆ.

ಅಪಾಯದ ಮುನ್ಸೂಚನೆ ಅರಿತ ಚಾಲಕ, ತಕ್ಷಣವೇ ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರಿಗೆ ಇಳಿಯುವಂತೆ ಸೂಚಿಸಿದ್ದಾರೆ. ಪ್ರಯಾಣಿಕರು ಲಗೇಜ್‌ಗಳ ಸಮೇತ ಕೆಳಗಿಳಿದ ಕೇವಲ ಎರಡು ನಿಮಿಷಗಳಲ್ಲಿ ಬೆಂಕಿ ಇಡೀ ಬಸ್ಸನ್ನು ಆವರಿಸಿದೆ.

ಬೆಂಕಿಯ ತೀವ್ರತೆಗೆ ಬಸ್ಸಿನ ಕಿಟಕಿ ಗಾಜುಗಳು ಸಿಡಿದು ಅತೀ ಎತ್ತರಕ್ಕೆ ಚಿಮ್ಮುತ್ತಿದ್ದುದು ಕಂಡುಬಂದಿತು. ಇದರಿಂದ ಸ್ಥಳೀಯರಲ್ಲಿ ಹಾಗೂ ವಾಹನ ಸವಾರರಲ್ಲಿ ತೀವ್ರ ಆತಂಕ ಮನೆಮಾಡಿತ್ತು.

ಘಟನೆಯ ಹಿನ್ನೆಲೆಯಲ್ಲಿ ರಾಜಾಜಿನಗರ ಮತ್ತು ಮೆಜೆಸ್ಟಿಕ್ ಸಂಪರ್ಕಿಸುವ ರಸ್ತೆಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.

ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಎರಡು ವಾಹನಗಳು ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದವು.

ಮಲ್ಲೇಶ್ವರಂ ಮತ್ತು ರಾಜಾಜಿನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ, ಸುಟ್ಟು ಕರಕಲಾದ ಬಸ್ಸನ್ನು ಕ್ರೇನ್ ಮೂಲಕ ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದರು.

ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಳ್ಳಲು ಎಂಜಿನ್‌ನಲ್ಲಿನ ಶಾರ್ಟ್ ಸರ್ಕ್ಯೂಟ್ ಅಥವಾ ಮೆಕ್ಯಾನಿಕಲ್ ವೈಫಲ್ಯವೇ ಕಾರಣವಿರಬಹುದು ಎಂದು ಶಂಕಿಸಲಾಗಿದೆ.

ಅದೃಷ್ಟವಶಾತ್ ದೊಡ್ಡ ದುರಂತ ತಪ್ಪಿದೆ, ತಾಂತ್ರಿಕ ತಂಡದಿಂದ ತನಿಖೆ ನಡೆಸಿ ನಿಖರ ಕಾರಣ ತಿಳಿಯಲಾಗುವುದು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict- ಗ್ರಾಹಕರಿಗೆ ಸ್ವಲ್ಪ ನಿರಾಳ, ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಸಿದ ಕೇಂದ್ರ ಸರ್ಕಾರ

ಯುದ್ಧ ನಡುವಲ್ಲೇ ಅಮೆರಿಕಾ ರಾಜತಾಂತ್ರಿಕ ಹೆಜ್ಜೆ: ಇರಾನ್ ಮೇಲಿನ ದಾಳಿ ಗಡುವು ಮುಂದೂಡಿಕೆ, ಶಾಂತಿ ಮಾತುಕತೆಗಳಿಗೆ ಒತ್ತು..!

ಅಸ್ಸಾಂನಲ್ಲಿ ಬಿಜೆಪಿ-ಕಾಂಗ್ರೆಸ್‌ ಸೆಣಸಾಟ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೂ ಪರೀಕ್ಷೆ (ನೇರ ನೋಟ)

ಒಳ ಮೀಸಲಾತಿ: ಮತಬ್ಯಾಂಕ್ ಲೆಕ್ಕಾಚಾರದಲ್ಲಿ ಸಿದ್ದು ಸರ್ಕಾರ, ಉಪಚುನಾವಣೆ ಮುಗಿಯುವವರೆಗೂ ತೀರ್ಮಾನಕ್ಕೆ ಬ್ರೇಕ್..!

chopper ಪ್ರಯಾಣ ವಿವಾದ: ‘ಬೊಮ್ಮಾಯಿ ಕಾಲದಲ್ಲೇ ಕೋಟಿ ಕೋಟಿ ಖರ್ಚು’; ಪ್ರತಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

SCROLL FOR NEXT