ಎಐಸಿಸಿ ಕಾರ್ಯದರ್ಶಿ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷರು, ಸಿಎಂ ಅವರ ಜಂಟಿ ಮಾಧ್ಯಮಗೋಷ್ಠಿ. 
ರಾಜ್ಯ

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ: ಜನರನ್ನು ಮೂರ್ಖರನ್ನಾಗಿ ಮಾಡಲು ಬಿಜೆಪಿ ಪ್ರಯತ್ನ; ಕೇಂದ್ರಕ್ಕೆ ಬುದ್ಧಿ ಕಲಿಸಿ- ಸುರ್ಜೇವಾಲ

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ನಂತರ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆಗಳಲ್ಲಿ ಸಂಭಾವ್ಯ ಹೆಚ್ಚಳದ ಬಗ್ಗೆ ಸುರ್ಜೇವಾಲ ಜನರಿಗೆ ಎಚ್ಚರಿಕೆ ನೀಡಿದರು.

ಬೆಂಗಳೂರು: ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವ ಮೂಲಕ ಜನರನ್ನು "ಮೂರ್ಖರನ್ನಾಗಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಶುಕ್ರವಾರ ಆರೋಪಿಸಿದರು.

ಇದು ತೈಲ ಕಂಪನಿಗಳಿಗೆ ಲಾಭದಾಯಕವಾಗಿದ್ದು, ಜನ ಸಾಮಾನ್ಯ ಜನರಿಗೆ ಯಾವುದೇ ಪರಿಹಾರವನ್ನು ನೀಡುವುದಿಲ್ಲ ಎಂದಿದ್ದಾರೆ. ಇದನ್ನು ಕೇಂದ್ರ ಸರ್ಕಾರದಿಂದ ಬ್ಯಾಲೆನ್ಸ್ ಶೀಟ್ ನಿರ್ವಹಣೆ, ಅನುಕೂಲಕರ ಲೆಕ್ಕಪತ್ರ ನಿರ್ವಹಣೆ ಮತ್ತು ಹೆಡ್ ಲೈನ್ ನಿರ್ವಹಣೆ" ಎಂದು ಕರೆದಿದ್ದು, ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ನಂತರ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆಗಳಲ್ಲಿ ಸಂಭಾವ್ಯ ಹೆಚ್ಚಳದ ಬಗ್ಗೆ ಎಚ್ಚರಿಕೆ ನೀಡಿದರು.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ತೈಲ ಬೆಲೆ ಏರಿಕೆಯಿಂದ ದೇಶಿಯ ಗ್ರಾಹಕರನ್ನು ರಕ್ಷಿಸುವ ಗುರಿಯೊಂದಿಗೆ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ. ಯಷ್ಟು ಕಡಿತಗೊಳಿಸಿದೆ. ಜೊತೆಗೆ, ಸರ್ಕಾರವು ಡೀಸೆಲ್ ಮತ್ತು ಏವಿಯೇಷನ್ ​​ಟರ್ಬೈನ್ ಇಂಧನ (ATF) ರಫ್ತಿನ ಮೇಲೆ ಸುಂಕವನ್ನು ಪುನರ್ ವಿಧಿಸಿ, 43 ಲಕ್ಷ ಕೋಟಿ ರೂ. ಲೂಟಿ ಹೊಡೆದಿದೆ. ಇದು ಮೋದಿ ಸರ್ಕಾರ ಮತ್ತು ಬಿಜೆಪಿ ಕಳೆದ 11 ವರ್ಷಗಳಲ್ಲಿ ಭಾರತದ ಜನರ ಮೇಲೆ ತೆರಿಗೆ ವಿಧಿಸಿ ಸಂಗ್ರಹಿಸಿದ ಹಣ ಎಂದು ಸುರ್ಜೇವಾಲಾ ಪ್ರತಿಪಾದಿಸಿದರು.

ಕೇವಲ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅಬಕಾರಿ ಮತ್ತು ಕಸ್ಟಮ್ಸ್ ಸುಂಕಗಳನ್ನು ವಿಧಿಸುವ ಮೂಲಕ ಪ್ರತಿನಿತ್ಯ 1,000 ಕೋಟಿ ರೂ. ಸಂಗ್ರಹಿಸುತ್ತಿದ್ದ ಮೋದಿ ಸರ್ಕಾರ ಕಳೆದ 11 ವರ್ಷಗಳಿಂದ ಎಷ್ಟು ಸಂಗ್ರಹಿಸಿದೆ ಎಂದು ಪ್ರಶ್ನಿಸಿದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರ್ಜೇವಾಲ, ಪಶ್ಚಿಮ ಏಷ್ಯಾದಲ್ಲಿ ಉದ್ಬವಿಸಿರುವ ಬಿಕ್ಕಟ್ಟಿನ ಪರಿಣಾಮ ನಯಾರ ತೈಲ ಕಂಪನಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯನ್ನು 5.30 ರೂ ಹಾಗೂ ಡೀಸೆಲ್ ಬೆಲೆಯನ್ನು 3 ರೂ. ಏರಿಕೆ ಮಾಡಿದೆ. ಏಪ್ರಿಲ್ 9 ಮತ್ತು 23 ರಂದು ಪಂಚ ರಾಜ್ಯಗಳ ಚುನಾವಣೆ ನಡೆಯಲಿದ್ದು, ಇದಾದ ಬಳಿಕ ಕೇಂದ್ರ ಸರ್ಕಾರ ಇಂಧನ ಬೆಲೆ ಏರಿಕೆ ಮಾಡುವುದು ಬಹುತೇಕ ಖಚಿತವಾಗಿದೆ ಎಂದು ತಿಳಿಸಿದರು.

ಜನರನ್ನು ದಾರಿ ತಪ್ಪಿಸಿ, ವಂಚಿಸುವ ಮೋದಿ ಸರ್ಕಾರದ ಕಾರ್ಯವೈಖರಿ ಮತ್ತೆ ಆರಂಭವಾಗಿದೆ. ಇದರ ಭಾಗವಾಗಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಸುಂಕ ಕಡಿತದ ತೀರ್ಮಾನ ಮಾಡಿದೆ. ಇದರಿಂದ ತೈಲ ಕಂಪನಿಗಳಿಗೆ ನೆರವಾಗಲಿದೆ ಹೊರತು ಜನಸಾಮಾನ್ಯರಿಗೆ ಯಾವುದೇ ಪ್ರಯೋಜನವಿಲ್ಲ. ಬಿಜೆಪಿಗೆ ಮತ ಹಾಕುವುದರಿಂದ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆಗಳು ಹೆಚ್ಚಾಗುತ್ತವೆ. ಈ ಬಾರಿ ಮೋದಿ ಸರ್ಕಾರಕ್ಕೆ ಬುದ್ಧಿ ಕಲಿಸಿ, ಅವರನ್ನು ಅಧಿಕಾರದಿಂದ ದೂರವಿಟ್ಟರೆ ಹಣದುಬ್ಬರವನ್ನು ನಿಯಂತ್ರಿಸಬಹುದು ಎಂದರು.

ಚುನಾವಣೆ ನಂತರ ಇಂಧನ ಬೆಲೆಗಳು ಸ್ಥಿರವಾಗಿರುತ್ತವೆ ಎಂದು ಬಿಜೆಪಿ ಮತ್ತು ಪ್ರಧಾನಿ ಭರವಸೆ ನೀಡದಿದ್ದರೆ, ಕರ್ನಾಟಕ ಉಪಚುನಾವಣೆ ಸೇರಿದಂತೆ ಎಲ್ಲಾ ಐದು ರಾಜ್ಯಗಳಿಂದ ತಮ್ಮ ಅಭ್ಯರ್ಥಿಗಳನ್ನು ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SSLC ಪರೀಕ್ಷೆಗಳ ಅಂಕ 625 ಬದಲಿಗೆ 525ಕ್ಕೆ ಇಳಿಕೆ: ಹಿಂದಿ ಸೇರಿ ತೃತೀಯ ಭಾಷೆಗಳು ಲೆಕ್ಕಕ್ಕಿಲ್ಲ!

ಇರಾನ್‌ನ ಉನ್ನತಾಧಿಕಾರಿ ಅರಘ್ಚಿ, ಗಾಲಿಬಾಫ್'ರನ್ನು ಇಸ್ರೇಲ್ ಕೊಲ್ಲದಂತೆ ತಡೆದಿದ್ದೇ ನಾವು: Pakistan

IPL ನ ಕನಸಲ್ಲಿ ಮಾತ್ರ ಮೀರಿಸ್ತೀವಿ.. ಒಳ್ಳೆ ಆಫರ್ ಸಿಕ್ರೆ ಆಟಗಾರರು ಹೋಗ್ದೇ ಏನ್ ಮಾಡ್ತಾರೆ..: ಪಾಕ್ ಆಟಗಾರನಿಂದ PSLನ ಭೀಕರ ಟ್ರೋಲ್!

West Bengal polls 2026: ಇಂದು ರಾಜಕೀಯ ಬದ್ಧ ವೈರಿ ಆದರೆ ಬಿಜೆಪಿ ಗೆಲುವಿನ ಖಾತೆ ತೆರೆಯಲು ಕಾರಣವೇ TMC: ಹೇಗೆ ಗೊತ್ತೇ?

ದೇಗುಲದ ಗೆಸ್ಟ್ ಹೌಸ್ ನಲ್ಲೇ ಮಹಿಳೆ ಜೊತೆ TDP ನಾಯಕರ ಅಶ್ಲೀಲ 'ನಾಗಿನ್ ಡ್ಯಾನ್ಸ್', Video Viral

SCROLL FOR NEXT