ಪ್ರೊಫೆಸರ್ ಗೆ ಥಳಿಸಿದ ವಿದ್ಯಾರ್ಥಿಗಳು 
ರಾಜ್ಯ

ವಿದ್ಯಾರ್ಥಿನಿಗೆ ಪ್ರೊಫೆಸರ್‌ ಪ್ರಪೋಸ್‌: Video ವೈರಲ್ ಬೆನ್ನಲ್ಲೇ ಕಾಲೇಜಿಗೆ ಬಾಂಬ್‌ ಬೆದರಿಕೆ..!

ಶುಕ್ರವಾರ ಮುಂಜಾನೆ ಕಾಲೇಜಿನ ಪ್ರಿನ್ಸಿಪಾಲ್ ಸೇರಿದಂತೆ ಅಧಿಕಾರಿಗಳ ಅಧಿಕೃತ ಇಮೇಲ್‌ಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಸಂದೇಶದಲ್ಲಿ, “ಡಾ. ಅಬ್ದುಲ್ ಅವರಿಗೆ ನಡೆದ ಅವಮಾನಕ್ಕೆ ಪ್ರತಿಯಾಗಿ, ಕಾಲೇಜು ಆವರಣದಲ್ಲಿ 15 ಸೈನೈಡ್ ಗ್ಯಾಸ್ ತುಂಬಿದ ಐಇಡಿ ಬಾಂಬ್‌ಗಳನ್ನು ಅಳವಡಿಸಲಾಗಿದೆ.

ಬೆಂಗಳೂರು: ಬೆಂಗಳೂರು ಸಮೀಪದ ನೆಲಮಂಗಲ ತಾಲ್ಲೂಕಿನ ಟಿ. ಬೇಗೂರಿನಲ್ಲಿರುವ ಶ್ರೀ ಸಿದ್ಧಾರ್ಥ ಮೆಡಿಕಲ್ ಸೈನ್ಸಸ್ ಮತ್ತು ರಿಸರ್ಚ್ ಸೆಂಟರ್ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಒಬ್ಬರು ತರಗತಿಯಲ್ಲಿ ವಿದ್ಯಾರ್ಥಿನಿಗೆ ಲವ್ ಪ್ರಪೋಸ್ ಮಾಡಿದ ವಿಡಿಯೋ ವೈರಲ್ ಆದ ಪ್ರಕರಣದ ಬೆನ್ನಲ್ಲೇ, ಕಾಲೇಜಿಗೆ ಇದೀಗ ಬಾಂಬ್ ಬೆದರಿಕೆ ಕರೆ ಬಂದಿದೆ,

ಶುಕ್ರವಾರ ಮುಂಜಾನೆ ಕಾಲೇಜಿನ ಪ್ರಿನ್ಸಿಪಾಲ್ ಸೇರಿದಂತೆ ಅಧಿಕಾರಿಗಳ ಅಧಿಕೃತ ಇಮೇಲ್‌ಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಸಂದೇಶದಲ್ಲಿ, “ಡಾ. ಅಬ್ದುಲ್ ಅವರಿಗೆ ನಡೆದ ಅವಮಾನಕ್ಕೆ ಪ್ರತಿಯಾಗಿ, ಕಾಲೇಜು ಆವರಣದಲ್ಲಿ 15 ಸೈನೈಡ್ ಗ್ಯಾಸ್ ತುಂಬಿದ ಐಇಡಿ ಬಾಂಬ್‌ಗಳನ್ನು ಅಳವಡಿಸಲಾಗಿದೆ. ಮಧ್ಯಾಹ್ನ 2 ಗಂಟೆಗೆ ಸ್ಫೋಟವಾಗಲಿದೆ, ವಿದ್ಯಾರ್ಥಿಗಳನ್ನು ತಕ್ಷಣ ತೆರವುಗೊಳಿಸಿ” ಎಂದು ಉಲ್ಲೇಖಿಸಿರುವುದು ಕಂಡು ಬಂದಿದೆ.

ಈ ಇಮೇಲ್ ಅನ್ನು ‘ಡಾ. ಸೌರವ್ ಖಾನ್’ ಎಂಬ ಹೆಸರಿನಲ್ಲಿ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ. ಈ ಸುದ್ದಿ ಹರಡುತ್ತಿದ್ದಂತೆ ಕಾಲೇಜು ಆಡಳಿತ ಹಾಗೂ ವಿದ್ಯಾರ್ಥಿಗಳಲ್ಲಿ ಕೆಲಕಾಲ ಭಾರೀ ಆತಂಕ ಉಂಟಾಗಿತ್ತು.

ತಕ್ಷಣವೇ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ (BDDS), ಶ್ವಾನ ದಳ ಸ್ಥಳಕ್ಕೆ ಧಾವಿಸಿ ಸಂಪೂರ್ಣ ಶೋಧ ಕಾರ್ಯಾಚರಣೆ ನಡೆಸಿದವು.

ಕಾಲೇಜಿನ ಪ್ರತಿಯೊಂದು ಕಟ್ಟಡ, ತರಗತಿ ಕೊಠಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಪರಿಶೀಲಿಸಿದರೂ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಲಿಲ್ಲ.

ಆ ನಂತರ ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ಪೊಲೀಸರು ದೃಢಪಡಿಸಿದರು. ಇದೇ ವೇಳೆ, ಈ ಬೆದರಿಕೆ ಇಮೇಲ್ ಕಳುಹಿಸಿದ ವ್ಯಕ್ತಿಯನ್ನು ಪತ್ತೆಹಚ್ಚಲು ನೆಲಮಂಗಲ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಮೇಲೆ ನಿಯಂತ್ರಣ: ತೆರಿಗೆ ವ್ಯವಸ್ಥೆ ಜಾರಿಗೆ ಇರಾನ್ ಮುಂದು, ವಿರೋಧವಾಗಿ G7 ಒಕ್ಕೂಟ ರೂಪಿಸಲು ರೂಬಿಯೋ ಕರೆ

ಭಾರತದಲ್ಲಿ ಇಂಧನ ಬಿಕ್ಕಟ್ಟು: ರಾಜ್ಯಗಳ ಮುಖ್ಯಮಂತ್ರಿ ಜೊತೆಗೆ ಪ್ರಧಾನಿ ಮೋದಿ ಸಭೆ, ಸಿಎಂ ಸಿದ್ದರಾಮಯ್ಯ ಗೈರು!

ಶ್ರೀನಗರ-ಲೇಹ್ ಹೆದ್ದಾರಿಯ ಝೋಜಿಲಾ ಪಾಸ್ ನಲ್ಲಿ ಭಾರಿ ಹಿಮಪಾತ: ಏಳು ಮಂದಿ ದುರ್ಮರಣ, ಐವರಿಗೆ ಗಾಯ! Video

ಕೇರಳ ಚುನಾವಣೆ: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಡಿಕೆಶಿಗೆ ಸ್ಥಾನ, ಸಿಎಂ ಸಿದ್ದರಾಮಯ್ಯಗೆ ಇಲ್ಲ!

MS Dhoniಗೆ ಹೇಳೋಕೆ ನೀವ್ಯಾರು..?: ಕೊನೆಗೂ ಧೋನಿ ಬೆನ್ನಿಗೆ ನಿಂತ Yograj Singh, ಈ ಬಾರಿ ಯಾರಿಗೆ ಚಾಟಿ?

SCROLL FOR NEXT