ಕರ್ನಾಟಕ ಹೈಕೋರ್ಟ್, ರವಿಶಂಕರ ಗುರೂಜಿ 
ರಾಜ್ಯ

ಸರ್ಕಾರಿ ಜಮೀನು ಒತ್ತುವರಿ ಆರೋಪ: ರವಿಶಂಕರ ಗುರೂಜಿ ವಿರುದ್ಧ ಕೇಸು ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ (BMTF) ದಾಖಲಿಸಿದ್ದ ಎಫ್‌ಐಆರ್ ಪ್ರಶ್ನಿಸಿ ರವಿಶಂಕರ್ ಗುರೂಜಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.

ಬೆಂಗಳೂರು: ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಂಸ್ಥಾಪಕ ರವಿಶಂಕರ ಗುರೂಜಿಯವರ(Sri Ravishankara Guruji) ವಿರುದ್ಧದ ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ ಆರೋಪದ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ (BMTF) ದಾಖಲಿಸಿದ್ದ ಎಫ್‌ಐಆರ್ ಪ್ರಶ್ನಿಸಿ ರವಿಶಂಕರ್ ಗುರೂಜಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.

ರವಿಶಂಕರ್‌ ವಿರುದ್ಧದ ಪ್ರಕರಣ ರದ್ದುಪಡಿಸಿರುವ ನ್ಯಾಯಪೀಠ, ಆದೇಶದಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯ ಅರ್ಜಿದಾರರ ವಿರುದ್ಧದ ಪ್ರಕರಣವನ್ನು ಪರಿಗಣಿಸುವುದಕ್ಕೆ ಮಾತ್ರ ಸೀಮಿತವಾಗಿದೆ. ಯಾವುದೇ ಸಕ್ಷಮ ನ್ಯಾಯಾಲಯದ ಮುಂದೆ ಬಾಕಿ ಇರುವ ಯಾವುದೇ ಆರೋಪಗಳಿಗೆ ಆದೇಶ ಅನ್ವಯಿಸುವುದಿಲ್ಲ ಎಂದು ಆದೇಶ ನೀಡಿದೆ. ಆದೇಶವದ ವಿವರವಾದ ಪ್ರತಿ ಇನ್ನೂ ಲಭ್ಯವಾಗಿಲ್ಲ.

ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದ ಸರ್ವೇ ನಂಬರ್ 46, 135, 137, 150, 160, 164/1 ಮತ್ತು 164/2ರಲ್ಲಿನ ವಿವಿಧೆಡೆ ಸರ್ಕಾರಿ ಜಮೀನು, ಕೆರೆ ಮತ್ತು ರಾಜಕಾಲುವೆ ಒತ್ತುವರಿ ಮಾಡಿದ ಆರೋಪ ರವಿಶಂಕರ್ ಗುರೂಜಿಯವರ ಆರ್ಟ ಆಫ್ ಲಿವಿಂಗ್ ಸಂಸ್ಥೆಯ ವಿರುದ್ಧ ಕೇಳಿಬಂದಿತ್ತು.

ಅದನ್ನು ರದ್ದುಪಡಿಸಲು ಕೋರಿದ್ದ ರವಿಶಂಕರ್‌ ಗುರೂಜಿ, ತಾವು ಯಾವುದೇ ಆಸ್ತಿ ಹೊಂದಿರುವ ಅಥವಾ ಯಾವುದೇ ಭೂಮಿಯನ್ನು ಅತಿಕ್ರಮಿಸಿರುವುದನ್ನು ಬಿಎಂಟಿಎಫ್‌ ವರದಿ ತೋರಿಸುವುದಿಲ್ಲ. ಖಾಸಗಿ ರಿಯಲ್ ಎಸ್ಟೇಟ್ ಕಂಪನಿ ಸೇರಿ ಕೆಲವರ ವಿರುದ್ಧ ಒತ್ತುವರಿ ಮಾಡಿರುವ ಆರೋಪವಿದೆ. ಆದರೆ, ಈ ಯಾವುದೇ ಪ್ರದೇಶ ತಮ್ಮ ಆಶ್ರಮದ ಕಾಂಪೌಂಡ್ ಒಳಗೆ ಬರುವುದಿಲ್ಲ ಎಂದು ಆಕ್ಷೇಪಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಮೇಲೆ ನಿಯಂತ್ರಣ: ತೆರಿಗೆ ವ್ಯವಸ್ಥೆ ಜಾರಿಗೆ ಇರಾನ್ ಮುಂದು, ವಿರೋಧವಾಗಿ G7 ಒಕ್ಕೂಟ ರೂಪಿಸಲು ರೂಬಿಯೋ ಕರೆ

ಬೆಂಗಳೂರಿನಲ್ಲಿಂದು IPL 2026 ಉದ್ಘಾಟನೆ: ಕಾಲ್ತುಳಿತ ಘಟನೆ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ; ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಹೈ ಅಲರ್ಟ್, ಎಲ್ಲೆಡೆ ಬಿಗಿ ಭದ್ರತೆ

ತಮಿಳುನಾಡು ವಿಧಾನಸಭೆ ಚುನಾವಣೆ- 2026: ಸೀಟು ಹಂಚಿಕೆ ಬಗ್ಗೆ ಅಸಮಾಧಾನ; ಸ್ಪರ್ಧಿಸಲು ಅಣ್ಣಾಮಲೈ ಹಿಂದೇಟು; ಬಿಎಲ್ ಸಂತೋಷ್ ಸಭೆಗೆ ಗೈರು!

ಬಾಲೇಂದ್ರ ಶಾ ಪದಗ್ರಹಣದ ಬೆನ್ನಲ್ಲೇ ನೇಪಾಳದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅರೆಸ್ಟ್‌

ನಮ್ಮ ರಾಜಕೀಯ ಸಂಸ್ಕೃತಿ ಎಷ್ಟು ಕೆಳಮಟ್ಟಕ್ಕೆ ಇಳಿದಿದೆ: ದೇಶಕ್ಕೆ ಸೇವೆ ಮಾಡಿದವರು ತಲೆಬಾಗಬೇಕೆ? ಸೋಷಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಫೋಟೋ!

SCROLL FOR NEXT