ಹೆದ್ದಾರಿಯಲ್ಲಿ ಲಾರಿ ತಡೆಯುತ್ತಿರುವ ಅಧಿಕಾರಿಗಳು 
ರಾಜ್ಯ

ಹೆದ್ದಾರಿ ಮಧ್ಯೆ ಇದ್ದಕ್ಕಿದ್ದಂತೆ ಲಾರಿ ನಿಲ್ಲಿಸಿ ತಪಾಸಣೆ: ದೇವನಹಳ್ಳಿಯಲ್ಲಿ ಭೀಕರ ಅಪಘಾತ; RTO ಅಧಿಕಾರಿಗಳ ವಿರುದ್ಧ ಆರೋಪ..! Video

ಮೂಲಗಳ ಪ್ರಕಾರ, ನೆಲಮಂಗಲ ಮೂಲದ RTO ಅಧಿಕಾರಿ ದಿನೇಶ್ ಕುಮಾರ್ ಡಿ.ಕೆ. ಅವರು ಕರ್ತವ್ಯ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ತಮ್ಮ ವ್ಯಾಪ್ತಿಗೆ ಸೇರದ ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸಲು ಯತ್ನಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರು: ದೇವನಹಳ್ಳಿ ಸಮೀಪ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತ ಜನರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಪಘಾತಕ್ಕೆ RTO ಅಧಿಕಾರಿಯ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿಬಂದಿದೆ.

ಮೂಲಗಳ ಪ್ರಕಾರ, ನೆಲಮಂಗಲ ಮೂಲದ RTO ಅಧಿಕಾರಿ ದಿನೇಶ್ ಕುಮಾರ್ ಡಿ.ಕೆ. ಅವರು ಕರ್ತವ್ಯ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ತಮ್ಮ ವ್ಯಾಪ್ತಿಗೆ ಸೇರದ ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸಲು ಯತ್ನಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ.

ಜೀಪ್ ಅನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿರುವ ಅಧಿಕಾರಿಗಳು, ಹೆದ್ದಾರಿಯಲ್ಲಿ ಯಾವುದೇ ಮುನ್ನೆಚ್ಚರಿಕೆ ನೀಡದೆ ಲಾರಿಯನ್ನು ತಡೆದಿದ್ದಾರೆ. ಈ ವೇಳೆ ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಮತ್ತೊಂದು ಲಾರಿ ನಿಲ್ಲಿಸಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಘಟನೆ ಬಳಿಕ ಗಾಯಾಳುಗಳಿಗೆ ಸಹಾಯ ಮಾಡುವ ಬದಲು ಅಧಿಕಾರಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಹೇಳಳಾಗುತ್ತಿದೆ. ಈ ನಡೆ ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಾನೂನು ಜಾರಿಗೆ ಜವಾಬ್ದಾರರಾಗಿರುವ ಅಧಿಕಾರಿಗಳೇ ನಿಯಮ ಉಲ್ಲಂಘಿಸಿರುವುದಕ್ಕೆ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!