ಹೆದ್ದಾರಿಯಲ್ಲಿ ಸರಣಿ ಅಪಘಾತದಿಂದ ರೊಚ್ಚಿಗೆದ್ದ ಪ್ರಯಾಣಿಕರು 
ರಾಜ್ಯ

ನೆಲಮಂಗಲ ಬಳಿ ಸರಣಿ ಅಪಘಾತ; KSRTC ಚಾಲಕನಿಗೆ ಥಳಿತ! ಹೆದ್ದಾರಿಯಲ್ಲಿ ಕೆಲಕಾಲ ಸಾಲುಗಟ್ಟಿ ನಿಂತ ವಾಹನಗಳು!

ಈ ವೇಳೆ ಚಾಲಕ ಮತ್ತು ಉಳಿದ ವಾಹನಗಳ ಚಾಲಕರು, ಪ್ರಯಾಣಿಕರ ಮಧ್ಯೆ ವಾಗ್ವಾದ ನಡೆದಿದ್ದು, ಬಸ್ ಚಾಲಕನಿಗೆ ಥಳಿಸಿದ್ದಾರೆ.

ನೆಲ ಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ- ಕುಣಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ ಸರಣಿ ಅಪಘಾತ ಸಂಭವಿಸಿದೆ.

ಹಾಸನದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ KSRTC ಪುಷ್ಪಕ್‌ ಪ್ಲಸ್‌ ಇವಿ ಬಸ್‌ ಓವರ್ ಟೇಕ್ ಮಾಡಲು ಹೋಗಿ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಒಂದು ಕಾರಿನ ಹಿಂಭಾಗ ನಜ್ಜುಗುಜ್ಜಾಗಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಈ ವೇಳೆ ಚಾಲಕ ಮತ್ತು ಉಳಿದ ವಾಹನಗಳ ಚಾಲಕರು, ಪ್ರಯಾಣಿಕರ ಮಧ್ಯೆ ವಾಗ್ವಾದ ನಡೆದಿದ್ದು, ಬಸ್ ಚಾಲಕನಿಗೆ ಥಳಿಸಿದ್ದಾರೆ.

ಸಾಮಾನ್ಯವಾಗಿ ಭಾನುವಾರ ಊರಿನಿಂದ ಬೆಂಗಳೂರಿಗೆ ಬರುವ ವಾಹನಗಳ ಸಂಖ್ಯೆ ಈ ಹೆದ್ದಾರಿಯಲ್ಲಿ ಜಾಸ್ತಿ ಇರುತ್ತದೆ. ಹೀಗಾಗಿ ಇಂತಹ ಘಟನೆಗಳು ಆಗಾಗ್ಗೆ ನಡೆಯುತ್ತಲೇ ಇರುತ್ತದೆ. ಇಂದು ಕೂಡಾ ಸರಣಿ ಅಪಘಾತ ನಡೆದಿದೆ.

ಚಾಲಕ ಮತ್ತು ಸವಾರರ ಮಧ್ಯೆ ಜಗಳ ನಡೆದ ಪರಿಣಾಮ ಹೆದ್ದಾರಿಯಲ್ಲಿ ಕೆಲವು ಗಂಟೆಗಳ ಕಾಲ ಕಿಲೋಮೀಟರ್‌ಗಟ್ಟಲ್ಲೇ ವಾಹನಗಳ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel