ಸಂಗ್ರಹ ಚಿತ್ರ online desk
ರಾಜ್ಯ

ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ: ಕಲ್ಲಿನಿಂದ ಜಜ್ಜಿ 4 ವರ್ಷದ ಬಾಲಕಿ ಬರ್ಬರ ಹತ್ಯೆ, ಅತ್ಯಾಚಾರ ಶಂಕೆ..!

ಬಾಲಕಿ ಗುರುವಾರ ಸಂಜೆ ಆಟವಾಡುತ್ತಿದ್ದಾಗ ನಾಪತ್ತೆಯಾಗಿದ್ದಳು. ಪೋಷಕರು ಹುಡುಕಾಟ ನಡೆಸಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಪೊಲೀಸರಿಗೆ ದೂರು ನೀಡಿದ್ದರು.

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ನಾಲ್ಕೂವರೆ ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಈ ಘಟನೆ ನಗರವನ್ನು ಬೆಚ್ಚಿಬೀಳಿಸಿದೆ.

ಬಾಲಕಿಯ ಶವ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ಬೋಳುಗುಟ್ಟದ ನಿರ್ಜನ ಪ್ರದೇಶದ ನೀಲಗಿರಿ ತೋಪಿನಲ್ಲಿ ಪತ್ತೆಯಾಗಿದೆ.

ಬಾಲಕಿ ಗುರುವಾರ ಸಂಜೆ ಆಟವಾಡುತ್ತಿದ್ದಾಗ ನಾಪತ್ತೆಯಾಗಿದ್ದಳು. ಪೋಷಕರು ಹುಡುಕಾಟ ನಡೆಸಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಪೊಲೀಸರಿಗೆ ದೂರು ನೀಡಿದ್ದರು.

ಬಳಿಕ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿ, ರಾತ್ರಿ ವೇಳೆಗೆ ಬೋಳುಗುಟ್ಟದ ನಿರ್ಜನ ಪ್ರದೇಶದ ನೀಲಗಿರಿ ತೋಪಿನಲ್ಲಿ ಶವ ಪತ್ತೆ ಮಾಡಿದ್ದರು.

ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಗಳು ಬಾಲಕಿಯ ಗುರುತು ಮರೆಮಾಚಲು ಮುಖವನ್ನು ಕಲ್ಲಿನಿಂದ ಜಜ್ಜಿ ವಿಕೃತವಾಗಿ ಕೊಲೆ ಮಾಡಿದ್ದಾರೆ.

ದೇಹದ ಸ್ಥಿತಿಯನ್ನು ಗಮನಿಸಿದರೆ ಲೈಂಗಿಕ ದೌರ್ಜನ್ಯವೂ ನಡೆದಿರಬಹುದೆಂಬ ಅನುಮಾನವಿದೆ. ಈ ಬಗ್ಗೆ ಮರಣೋತ್ತರ ಪರೀಕ್ಷಾ ವರದಿಯಿಂದ ಸ್ಪಷ್ಟ ಮಾಹಿತಿಗಳು ಸಿಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಕುಟುಂಬ ಮೂಲತಃ ಅಸ್ಸಾಂ ಮೂಲದವರಾಗಿದ್ದು, ತಂದೆ ಅಪಾರ್ಟ್‌ಮೆಂಟ್‌ನಲ್ಲಿ ಹೌಸ್‌ಕೀಪಿಂಗ್ ಕೆಲಸ ಮಾಡುತ್ತಿದ್ದು, ಜೊತೆಗೆ ಕಸದ ಸಂಗ್ರಹಣೆಯ ಕೆಲಸವೂ ಮಾಡುತ್ತಿದ್ದರು. ಕುಟುಂಬ ತಾತ್ಕಾಲಿಕ ಶೆಡ್‌ನಲ್ಲಿ ವಾಸಿಸುತ್ತಿತ್ತು ಎಂದು ತಿಳಿದುಬಂದಿದೆ.

ಆರೋಪಿಗಳು ಬಾಲಕಿಗೆ ಪರಿಚಿತರಾಗಿರುವ ಸಾಧ್ಯತೆ ಇದೆ. ಆಮಿಷ ನೀಡಿ ಆಕೆಯನ್ನು ಕರೆದೊಯ್ದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ವೈಷಮ್ಯದ ಆಯಾಮದಲ್ಲೂ ತನಿಖೆ ನಡೆಯುತ್ತಿದೆ.

ಇದೀಗ ಪೊಲೀಸಕು ಶವವನ್ನು ಮಡಿವಾಳದ ಸಮೀಪದ ಆಸ್ಪತ್ರೆಗೆ ಸಾಗಿಸಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಈ ಸಂಬಂಧ ಅಪಹರಣ, ಕೊಲೆ ಹಾಗೂ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ವಿರುದ್ಧದ POCSO ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪತ್ತೆಹಚ್ಚಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia Conflict- ವದಂತಿಗಳಿಗೆ ಕಿವಿಗೊಡಬೇಡಿ, ಎಚ್ಚರಿಕೆ ಇರಲಿ, ಸವಾಲನ್ನು ಒಟ್ಟಾಗಿ ಎದುರಿಸೋಣ: ಪ್ರಧಾನಿ ಮೋದಿ-Video

ಟ್ರಂಪ್ ಎಚ್ಚರಿಕೆಗೆ ಬಗ್ಗದ ಇರಾನ್: ಸೌದಿ ವಾಯುನೆಲೆ ಮೇಲೆ ಮುಂದುವರೆದ ಕ್ಷಿಪಣಿ ದಾಳಿ; ಅಮೆರಿಕಾದ 15 ಸೈನಿಕರಿಗೆ ಗಾಯ, ಐವರ ಸ್ಥಿತಿ ಗಂಭೀರ

'ನಾವು ಓದುವಾಗ ಹಿಂದಿ ಭಾಷೆ ಕಡ್ಡಾಯ ಇರಲಿಲ್ಲ, ಪರೀಕ್ಷೆಗೆ ಅದು ಕಡ್ಡಾಯ ಆಗಬಾರದು': ಸಿಎಂ ಸಿದ್ದರಾಮಯ್ಯ

IPL 2026: ಚಿನ್ನಸ್ವಾಮಿಯಲ್ಲಿ RCB ಬ್ಯಾಟಿಂಗ್ ಅಬ್ಬರ; ಟಿ20 ಲೀಗ್​ನ ವಿಶ್ವ ದಾಖಲೆಯೇ ಉಡೀಸ್..!

IPL ಟಿಕೆಟ್ ವಿವಾದ: ಎರೆಡರಡು VIP ಪಾಸ್ ಪಡೆದರೂ ಮೈದಾನಕ್ಕೆ ಬಾರದ ಶಾಸಕರು, ಟೀಕೆ ಶುರು

SCROLL FOR NEXT