ಸಾಂದರ್ಭಿಕ ಚಿತ್ರ 
ರಾಜ್ಯ

ಗುಡ್ ಫ್ರೈಡೇ, ಈಸ್ಟರ್ ಹಿನ್ನೆಲೆ: ಬೆಂಗಳೂರು-ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರ! ಎಲ್ಲೆಲ್ಲಿ ನಿಲುಗಡೆ?

06271 ಸಂಖ್ಯೆಯ ಯಶವಂತಪುರ–ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 2ರಂದು ರಾತ್ರಿ 11.55ಕ್ಕೆ ಯಶವಂತಪುರದಿಂದ ಹೊರಟು, ಏಪ್ರಿಲ್ 3ರಂದು ಸಂಜೆ 5.30 ಕ್ಕೆ ಮಡಗಾಂವ್ ತಲುಪಲಿದೆ.

ಬೆಂಗಳೂರು: ಗುಡ್ ಫ್ರೈಡೇ ಹಾಗೂ ಈಸ್ಟರ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ನೈಋತ್ಯ ರೈಲ್ವೆಯು ಯಶವಂತಪುರ, ಮಡಗಾಂವ್ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ.

06271 ಸಂಖ್ಯೆಯ ಯಶವಂತಪುರ–ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 2ರಂದು ರಾತ್ರಿ 11.55ಕ್ಕೆ ಯಶವಂತಪುರದಿಂದ ಹೊರಟು, ಏಪ್ರಿಲ್ 3ರಂದು ಸಂಜೆ 5.30 ಕ್ಕೆ ಮಡಗಾಂವ್ ತಲುಪಲಿದೆ.

06272 ಸಂಖ್ಯೆಯ ಮಡಗಾಂವ್–ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ ರೈಲು ಏಪ್ರಿಲ್ 5ರಂದು ಬೆಳಿಗ್ಗೆ 11 ಗಂಟೆಗೆ ಮಡಗಾಂವ್ ನಿಂದ ಹೊರಟು, ಏಪ್ರಿಲ್ 6ರಂದು ಬೆಳಗಿನ ಜಾವ 5.20ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.

ಎಲ್ಲೆಲ್ಲಿ ನಿಲ್ಲಲಿವೆ?

ಈ ವಿಶೇಷ ರೈಲುಗಳು ಮಾರ್ಗಮಧ್ಯೆ ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ, ಕಾರವಾರ ಮತ್ತು ಕಾಣಕೋಣ ನಿಲ್ದಾಣಗಳಲ್ಲಿ ರೈಲು ನಿಲ್ಲಲಿದೆ.

ವಾಪಸ್ಸಾಗುವಾಗ 06272 ಸಂಖ್ಯೆಯ ರೈಲು ಯಶವಂತಪುರ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ. ಎಸ್ಎಂವಿಟಿ ಬೆಂಗಳೂರು ನಿಲ್ದಾಣದಲ್ಲಿ ರೈಲು ನಿಲ್ಲಲಿದೆ.

ಈ ವಿಶೇಷ ರೈಲುಗಳು ಒಟ್ಟು 19 ಬೋಗಿಗಳನ್ನು ಹೊಂದಿರಲಿದೆ. ಇದರಲ್ಲಿ ಎರಡು ಎಸಿ 2-ಟೈರ್, ಎರಡು ಎಸಿ 3-ಟೈರ್, 9 ಸ್ಲೀಪರ್ ಕ್ಲಾಸ್, 4 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ 2 ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಯನಾಡು ಭೂಕುಸಿತ 'ಮಾನವ ನಿರ್ಮಿತ'; ಮಣ್ಣು ತೆರವುಗೊಳಿಸಲು ಗುತ್ತಿಗೆದಾರರಿಗೆ ಸರ್ಕಾರ ಸೂಚಿಸಿದ್ರೂ ನಿರ್ಲಕ್ಷ್ಯ!

ರಾಜ್ಯದಲ್ಲಿ SIR ತಾತ್ಕಾಲಿಕ ತಡೆಗೆ ಎನ್‌ಡಿಎ ಪಟ್ಟು; ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು!

ಚಲಿಸುವ ರೈಲಿನಲ್ಲಿ ಸುರಕ್ಷಿತವಾಗಿ ತುರ್ತು ಹೆರಿಗೆ ಮಾಡಿಸಿದ ಹಾಸನದ SDM ಆರ್ಯುವೇದ ಕಾಲೇಜಿನ ಪಿಜಿ ವಿದ್ಯಾರ್ಥಿಗಳು!

Varanasi Movie: ವಾರಣಾಸಿ ಚಿತ್ರದಲ್ಲಿ ಶ್ರೀರಾಮನಾಗಿ ಮಹೇಶ್ ಬಾಬು! ವೈರಲ್ ಆಗಿರುವ ಫೋಟೋ ರಿಯಾಲಿಟಿ ಏನು?

ಪಾಕಿಸ್ತಾನದಲ್ಲಿ ಭೀಕರ ಉಗ್ರ ದಾಳಿ: ಒಂಬತ್ತು ಪೊಲೀಸ್ ಅಧಿಕಾರಿಗಳು ಸಾವು!