ಮಲ್ಲಿಕಾರ್ಜುನ ಖರ್ಗೆ TNIE
ರಾಜ್ಯ

ಬೌರಿಂಗ್ ಆಸ್ಪತ್ರೆ ದುರಂತ: ಬೀದಿ ವ್ಯಾಪಾರಿಗಳು ಕಾಂಪೌಂಡ್‌ ಪಕ್ಕದಲ್ಲಿ ವ್ಯಾಪಾರ ಮಾಡಲು ಬಿಡಬೇಡಿ; ಖರ್ಗೆ

ಬೀದಿ ವ್ಯಾಪಾರಿಗಳು ಎಲ್ಲೆಡೆ ವ್ಯಾಪಾರ ಮಾಡುತ್ತಿದ್ದಾರೆ. ಕಲಬುರಗಿ ಸಹ ಹೊರತಲ್ಲ, ಅಲ್ಲಿಯೂ ಅವರು (ಬೀದಿ ವ್ಯಾಪಾರಿಗಳು) ಪಾದಚಾರಿ ಮಾರ್ಗಗಳಲ್ಲಿ ಮಾರಾಟ ಮಾಡುತ್ತಾರೆ.

ಕಲಬುರಗಿ: ಬೆಂಗಳೂರು ಸರ್ಕಾರಿ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಜೀವಹಾನಿ ಸಂಭವಿಸಿದಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೀದಿ ವ್ಯಾಪಾರಿಗಳು ಕಾಂಪೌಂಡ್‌ಗಳ ಪಕ್ಕದಲ್ಲಿ ವ್ಯಾಪಾರ ಮಾಡಲು ಬಿಡಬಾರದು ಎಂದು ಹೇಳಿದರು. ಬುಧವಾರ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ನಗರದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಮಗು ಸೇರಿದಂತೆ ಏಳು ಜನರು ಸಾವನ್ನಪ್ಪಿ, ಏಳು ಜನರು ಗಾಯಗೊಂಡರು.

ಒಂದು ಮಾಹಿತಿ ಪ್ರಕಾರ ಅದು ಹಳೆಯ ಕಾಂಪೌಂಡ್ ಆಗಿತ್ತು, ಇನ್ನೊಂದರ ಪ್ರಕಾರ ಗೋಡೆಯನ್ನು ಸರಿಯಾಗಿ ನಿರ್ಮಿಸಲಾಗಿಲ್ಲ ಎಂದು ಕೇಳಿಬಂದಿದೆ. ಆದರೆ ಕಾಂಪೌಂಡ್‌ನಲ್ಲಿ ಬಿರುಕುಗಳು ಇರುವುದನ್ನು ನಾನು ನೋಡಿದ್ದೇನೆ. ನಾನು ಅಲ್ಲಿನ ಜನರೊಂದಿಗೆ ಮಾತನಾಡಿದ್ದೇನೆ, ಕಾಂಪೌಂಡ್ ಅನ್ನು ದುರಸ್ತಿ ಮಾಡಬೇಕಾಗಿದೆ . ಬೀದಿ ವ್ಯಾಪಾರಿಗಳು ಮತ್ತು ಅಪಘಾತಕ್ಕೊಳಗಾದವರಿಗೆ ಪರಿಹಾರ ನೀಡಬೇಕು ಎಂದು ಖರ್ಗೆ ಹೇಳಿದರು.

ಬೀದಿ ವ್ಯಾಪಾರಿಗಳು ಎಲ್ಲೆಡೆ ವ್ಯಾಪಾರ ಮಾಡುತ್ತಿದ್ದಾರೆ. ಕಲಬುರಗಿ ಸಹ ಹೊರತಲ್ಲ, ಅಲ್ಲಿಯೂ ಅವರು (ಬೀದಿ ವ್ಯಾಪಾರಿಗಳು) ಪಾದಚಾರಿ ಮಾರ್ಗಗಳಲ್ಲಿ ಮಾರಾಟ ಮಾಡುತ್ತಾರೆ. ನಾವು ಇದರ ವಿರುದ್ಧ ಏನಾದರೂ ಹೇಳಿದರೆ, ತಮ್ಮ ಜೀವನೋಪಾಯಕ್ಕೆ ನಾವು ಅಡ್ಡಿಪಡಿಸುತ್ತಿದ್ದೇವೆ ಎಂದು ಆರೋಪಿಸುತ್ತಾರೆ,

ಆದರೆ ಇತರ ನಾಗರಿಕರಿಗೆ ಅವರು ಅನಾನುಕೂಲತೆಯನ್ನುಂಟು ಮಾಡಬಾರದು ಎಂಬುದನ್ನು ಅವರು ಅರ್ಥಮಾಡಿಕೊಳ್ಳಬೇಕು ಎಂದು ಖರ್ಗೆ ಹೇಳಿದರು. ಪುರಸಭೆಗಳು ಬೀದಿ ವ್ಯಾಪಾರಿಗಳಿಗೆ ಸೂಕ್ತ ಸ್ಥಳಗಳನ್ನು ನಿಗದಿಪಡಿಸಿ ಅವರಿಗೆ ಸಹಾಯ ಮಾಡಬೇಕೆಂದು ಅವರು ಒತ್ತಾಯಿಸಿದರು.

ಬೆಂಗಳೂರಿನಲ್ಲಿ ನಡೆದ ಘಟನೆಯು ಇತರ ಸ್ಥಳಗಳಲ್ಲಿಯೂ ಸಂಭವಿಸಬಹುದು, ಹೀಗಾಗಿ ಸರ್ಕಾರ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ಖರ್ಗೆ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಸ್ಸಾಂ ಸಿಎಂ ಪತ್ನಿ ವಿರುದ್ಧ ಆರೋಪ: ಪವನ್ ಖೇರಾಗೆ ನಿರೀಕ್ಷಣಾ ಜಾಮೀನು ಮಂಜೂರು

ನಾಯಕತ್ವ ಹಗ್ಗಜಗ್ಗಾಟ ನಡುವೆ ಗುಪ್ತಚರ ಮುಖ್ಯಸ್ಥರ ಬದಲಾವಣೆ: ಅಧಿಕಾರ ಇನ್ನೂ ನನ್ನ ಕೈಯಲ್ಲೇ ಇದೆ, ಕಠಿಣ ಸಂದೇಶ ರವಾನಿಸಿದ ಸಿದ್ದರಾಮಯ್ಯ..?

ಗಾಯದ ಮೇಲೆ ಬರೆ: ವಾಣಿಜ್ಯ LPG ಸಿಲಿಂಡರ್ ದರ ರೂ.993 ಏರಿಕೆ, ಹೊಸ ದರ ಇಂದಿನಿಂದ ಜಾರಿ..!

ಬುದ್ದ- ಜಗವೆಲ್ಲಾ ಮಲಗಿರಲು ಅವನೊಬ್ಬ ಎದ್ದ: ಬೌದ್ಧ ಪೌರ್ಣಮಿ ಮಹತ್ವ, ಆಚರಣೆ - ಸಂದೇಶ

ಜಾಗತಿಕ ಅಸ್ಥಿರತೆ ನಡುವೆಯೂ ಇಂಧನ ದರ ಸ್ಥಿರ: ಬೆಲೆ ಏರಿಕೆ ಹೊರೆ ಹೊತ್ತ ತೈಲ ಕಂಪನಿಗಳು, ಗ್ರಾಹಕರಿಗೆ ರಿಲೀಫ್..!

SCROLL FOR NEXT