ನವಿಲು ಸಾಂದರ್ಭಿಕ ಚಿತ್ರ 
ರಾಜ್ಯ

ತುಮಕೂರಿನಲ್ಲಿ 44 ನವಿಲುಗಳ ಸಾವಿಗೆ ಹಕ್ಕಿಜ್ವರ ಕಾರಣ: ICAR ಪರೀಕ್ಷೆಯಿಂದ ದೃಢ!

ಆದಾಗ್ಯೂ, ಏಪ್ರಿಲ್ 23 ರಿಂದ ತುಮಕೂರು ತಾಲ್ಲೂಕಿನ ಯಾವುದೇ ಭಾಗದಲ್ಲಿ ಹೊಸ ಸಾವುಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ ಹಕ್ಕಿಜ್ವರ H5N1 ಸೋಂಕಿನಿಂದ 44 ನವಿಲುಗಳ ಸಾವನ್ನಪ್ಪಿವೆ ಎಂದು ಪ್ರಯೋಗಾಲಯದ ವರದಿಗಳು ದೃಢಪಡಿಸಿವೆ.

ಏಪ್ರಿಲ್ 16 ರಂದು ಘಟನೆ ಮೊದಲಿಗೆ ವರದಿಯಾಗಿತ್ತು. ತದನಂತರ ಒಂದು ವಾರದ ಅವಧಿಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 44 ನವಿಲುಗಳು ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದವು. ವ್ಯಾಪಕವಾದ ಕಾರ್ಯಾಚರಣೆ ಸಮಯದಲ್ಲಿ ಕೆಸರಮಾಡು, ಹಿರೇಹಳ್ಳಿ ಮತ್ತು ಗೂಳೂರು ಗ್ರಾಮ ಪಂಚಾಯತ್‌ಗಳ ಕೃಷಿ ಹೊಲಗಳಲ್ಲಿ ನವಿಲುಗಳು ಸಾವಿನ ಬಗ್ಗೆ ವರದಿಯಾಗಿರುವುದಾಗಿ ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಅರಣ್ಯ ಇಲಾಖೆಯ ಪ್ರಕಾರ, ಮೃತಪಟ್ಟ ನವಿಲುಗಳಿಂದ ಸಂಗ್ರಹಿಸಲಾದ ಮಾದರಿಗಳನ್ನು ಭೋಪಾಲ್‌ನಲ್ಲಿರುವ ICAR (National Institute of High Security Animal Diseases)ಕಳುಹಿಸಲಾಗಿತ್ತು. ಇದು H5N1 ಸಾವಿಗೆ ಕಾರಣ ಎಂದು ದೃಢಪಡಿಸಿದೆ.

ಆದಾಗ್ಯೂ, ಏಪ್ರಿಲ್ 23 ರಿಂದ ತುಮಕೂರು ತಾಲ್ಲೂಕಿನ ಯಾವುದೇ ಭಾಗದಲ್ಲಿ ಹೊಸ ಸಾವುಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯೋಗಾಲಯದ ವರದಿಗಳು,H5N1 ಸೋಂಕಿನಿಂದ ನವಿಲುಗಳು ಸಾವನ್ನಪ್ಪಿವೆ ಎಂದು ದೃಢಪಡಿಸಿವೆ. ಸೋಂಕನ್ನು ತಡೆಗಟ್ಟಲು ಅರಣ್ಯ ಇಲಾಖೆಯು ಆರೋಗ್ಯ ಮತ್ತು ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಗಳೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಕುಮಾರ್ ಪುಷ್ಕರ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಸೋಂಕು ಹರಡುವುದನ್ನು ತಡೆಯಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಮತ್ತು ಸೋಂಕು ಪೀಡಿತ ಪ್ರದೇಶಗಳ 10 ಕಿಮೀ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ವಲಯವನ್ನು ಘೋಷಿಸಲಾಗಿದೆ. ವಲಯದೊಳಗಿನ ಎಲ್ಲಾ ಕೋಳಿ ಸಾಕಣೆ ಕೇಂದ್ರಗಳಿಗೆ ಪ್ರೋಟೋಕಾಲ್ ಪ್ರಕಾರ ಎಚ್ಚರಿಕೆ ನೀಡಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ. ಬಂಗಾಳದ 15 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ!

ಮದ್ಯಪಾನ ಮಾಡಿ ವಿಧಾನಸಭೆಗೆ ಬಂದ್ರಾ ಪಂಜಾಬ್ ಸಿಎಂ ಭಗವಂತ್ ಮಾನ್? ಡೋಪ್ ಪರೀಕ್ಷೆಗೆ ವಿಪಕ್ಷಗಳ ಒತ್ತಾಯ; Video

ಡಿಸಿಎಂ DKS ಪುತ್ರಿಗೆ ಹೆಣ್ಣು ಮಗು ಜನನ: ತಾತನಾದ ಖುಷಿ; ಆಸ್ಪತ್ರೆಗೆ ದೌಡಾಯಿಸಿದ ಡಿ.ಕೆ ಶಿವಕುಮಾರ್

Tamilnadu: ರಾಜಕೀಯ ದ್ವೇಷ, ಟಿವಿಕೆ ಪ್ರಚಾರ ಕಚೇರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ರಾಹುಲ್ ಗಾಂಧಿಗೆ ಅಲಹಾಬಾದ್ ಹೈಕೋರ್ಟ್ ನಿಂದ ಬಿಗ್ ರಿಲೀಫ್!

SCROLL FOR NEXT