ಸಾಂದರ್ಭಿಕ ಚಿತ್ರ 
ರಾಜ್ಯ

ತುಮಕೂರು: ನವಿಲುಗಳ ಸಾವು ಬೆನ್ನಲ್ಲೇ ಈಗ 30 ಕೋಳಿಗಳ ಸಾವು; ಹಕ್ಕಿಜ್ವರ ಕುರಿತು ಹೆಚ್ಚಿದ ಆತಂಕ

ಸಾವನ್ನಪ್ಪಿದ ಕೋಳಿಗಳ ಮಾದರಿಗಳನ್ನು ಪರೀಕ್ಷೆಗಾಗಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದ್ದು, ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಲು ಪರಿಶೀಲನೆ ನಡೆಯುತ್ತಿದೆ.

ತುಮಕೂರು: ತುಮಕೂರಿನಲ್ಲಿ ಹಕ್ಕಿಜ್ವರದ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ ಕೆಲವು ದಿನಗಳಿಂದ ವರದಿಯಾಗಿದ್ದ ನವಿಲುಗಳ ಸರಣಿ ಸಾವುಗಳು ಬೆನ್ನಲ್ಲೇ ಇದೀಗ ಅದೇ ವ್ಯಾಪ್ತಿಯಲ್ಲಿ ಕೋಳಿಗಳ ಸಾವೂ ಸಂಭವಿಸಿದ್ದು, ಇದು ಆತಂಕ ಹೆಚ್ಚಾಗುವಂತೆ ಮಾಡಿದೆ.

ಸಾವನ್ನಪ್ಪಿದ ಕೋಳಿಗಳ ಮಾದರಿಗಳನ್ನು ಪರೀಕ್ಷೆಗಾಗಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದ್ದು, ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಲು ಪರಿಶೀಲನೆ ನಡೆಯುತ್ತಿದೆ.

ಹಕ್ಕಿ ಜ್ವರವೇ 44 ನವಿಲುಗಳ ಸಾವಿಗೆ ಕಾರಣ ಎಂದು ಈಗಾಗಲೇ ದೃಢಪಟ್ಟಿದ್ದು, ಈಗ ಕೋಳಿಗಳ ಸಾವಿಗೂ ಅದೇ ಕಾರಣವಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಕಳೆದ ಏಪ್ರಿಲ್ 16ರಿಂದ ತುಮಕೂರು ತಾಲೂಕಿನಾದ್ಯಂತ ನವಿಲುಗಳ ಸರಣಿ ಸಾವು ಆರಂಭವಾಗಿತ್ತು. ಕೇವಲ 11 ದಿನಗಳಲ್ಲಿ ಬರೋಬ್ಬರಿ 44 ನವಿಲುಗಳು ಮೃತಪಟ್ಟಿದ್ದವು. ಆರಂಭದಲ್ಲಿ ಜಿಲ್ಲೆಯಲ್ಲಿ ತಾಪಮಾನ ಏರುತ್ತಿದ್ದ ಕಾರಣ, ಅತಿಯಾದ ಶಾಖ ಮತ್ತು ನಿರ್ಜಲೀಕರಣದಿಂದ ಈ ಸಾವುಗಳು ಸಂಭವಿಸಿರಬಹುದು ಎಂದು ಶಂಕಿಸಲಾಗಿತ್ತು. ಆದರೆ, FSL ವರದಿಯಲ್ಲಿ ಹಕ್ಕಿ ಜ್ವರದ ಸೋಂಕಿನಿಂದಲೇ ನವಿಲುಗಳು ಸಾವನ್ನಪ್ಪಿವೆ ಎಂದು ದೃಢಪಟ್ಟಿದೆ.

ಇದೀಗ ಜಿಲ್ಲೆಯ ಬೊಮ್ಮನಹಳ್ಳಿ ಗ್ರಾಮದ ಕೋಳಿ ಫಾರಂನಲ್ಲಿ ಏಕಾಕಾಲದಲ್ಲಿ ಸುಮಾರು 30 ಕೋಳಿಗಳು ಸಾವನ್ನಪ್ಪಿದ್ದು, ಈ ಘಟನೆ ಹಕ್ಕಿಜ್ವರದ ಅನುಮಾನಕ್ಕೆ ಕಾರಣವಾಗಿದೆ. ಏತನ್ಮಧ್ಯೆ ಪಶು ಸಂಗೋಪನಾ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಹೈ ಅಲರ್ಟ್‌ ಘೋಷಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಮನ ಹೆಸರಿನಲ್ಲಿ ಲೂಟಿ: ಸುಮಾರು 5,000 ಕೋಟಿ ರೂ ಹಣ ದುರ್ಬಳಕೆ, ಬಿಜೆಪಿ ವಿರುದ್ಧ ಖರ್ಗೆ ಕಿಡಿ!

ಶೀಘ್ರದಲ್ಲೇ ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿ ರಚನೆ: ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ- ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕೆಲವೆಡೆ ಮೂರು ದಿನ ಭಾರಿ ಮಳೆ ಸಾಧ್ಯತೆ: ಸೋಮವಾರ 13 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್' ಘೋಷಣೆ

Women's T20 World Cup: ಮರಿಝಾನ್ ಕಾಪ್ ಸ್ಫೋಟಕ ಬ್ಯಾಟಿಂಗ್; ಭಾರತದ ವಿರುದ್ಧ ದಕ್ಷಿಣ ಆಫ್ರಿಕಾ 6 ವಿಕೆಟ್ ಭರ್ಜರಿ ಗೆಲುವು

ವಿಶ್ವ ಕ್ರಿಕೆಟಿನಲ್ಲಿ ಯಾರಿಗೂ ಸಾಧ್ಯವಾಗದ ಹೊಸ ದಾಖಲೆ ಬರೆದ ಭಾರತದ ಹರ್ಮನ್ ಪ್ರೀತ್ ಕೌರ್!