ಸಂಗ್ರಹ ಚಿತ್ರ 
ರಾಜ್ಯ

ಇಂದು ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ!

ತುರ್ತು ಎಚ್ಚರಿಕೆಯ ಸಂದೇಶ. ಹೊಸ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಸರ್ಕಾರ ಪರೀಕ್ಷಿಸುತ್ತಿದ್ದು, ಈ ಕಾರಣದಿಂದ ಮೊಬೈಲ್ ಗಳಿಗೆ ಅಲರ್ಟ್ ಸಂದೇಶ ಹಾಗೂ ಸೈರನ್ ಮೊಳಗಲಿದೆ.

ಬೆಂಗಳೂರು: ಇಂದು (ಶನಿವಾರ) ನಿಮ್ಮ ಮೊಬೈಲ್‌ ಫೋನ್‌ ಜೋರಾಗಿ ಬೀಪ್ ಮಾಡದರೆ ಅಥವಾ ಅನಿರೀಕ್ಷಿತ ಅಲರ್ಟ್ ಮೆಸೇಜ್‌ ಬಂದರೆ ಭಯಪಡಬೇಡಿ.

ತುರ್ತು ಎಚ್ಚರಿಕೆಯ ಸಂದೇಶ. ಹೊಸ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಸರ್ಕಾರ ಪರೀಕ್ಷಿಸುತ್ತಿದ್ದು, ಈ ಕಾರಣದಿಂದ ಮೊಬೈಲ್ ಗಳಿಗೆ ಅಲರ್ಟ್ ಸಂದೇಶ ಹಾಗೂ ಸೈರನ್ ಮೊಳಗಲಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (NDMA) ಮೇ 2ರಂದು ದೇಶವ್ಯಾಪಿ ಹೊಸ ವಿಪತ್ತು ಎಚ್ಚರಿಕಾ ವ್ಯವಸ್ಥೆಯನ್ನು ಪರೀಕ್ಷಿಸುತ್ತಿದೆ. ಹೀಗಾಗಿ ಇಂದು ನಿಮ್ಮ ಮೊಬೈಲ್‌ನಲ್ಲಿ ಜೋರಾಗಿ ಸೈರನ್ ಶಬ್ದದೊಂದಿಗೆ ಅಲರ್ಟ್ ಸಂದೇಶ ಕಾಣಿಸಬಹುದು.

ಪ್ರಕೃತಿ ವಿಕೋಪ ಬಂದಾಗ ತನ್ನ ನಾಗರಿಕರನ್ನು ರಕ್ಷಿಸಲು ಭಾರತ ತನ್ನದೇ ಆದ ಎಚ್ಚರಿಕೆ ವ್ಯವಸ್ಥೆಯನ್ನು ನಿರ್ಮಿಸುತ್ತಿದೆ. ಸೆಲ್ ಬ್ರಾಡ್‌ಕಾಸ್ಟ್ ಅಲರ್ಟ್ ಹೆಸರಿನ ಈ ಸಿಸ್ಟಮ್ ಪ್ರಸ್ತುತ ದೇಶಾದ್ಯಂತ ಪರೀಕ್ಷೆಯಲ್ಲಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರತುರ್ತು ಸಂದರ್ಭಗಳಲ್ಲಿ ನಾಗರಿಕರ ಮೊಬೈಲ್‌ಗಳಿಗೆ ನೇರವಾಗಿ ಸಂದೇಶ ಬಿತ್ತರಿಸುವ ಸೆಲ್‌ ಬ್ರಾಡ್‌ಕಾಸ್ಟ್‌ ಸೇವೆ ಆರಂಭಕ್ಕೆ ಸಿದ್ಧತೆ ನಡೆಸಲಾಗಿದೆ. ಅದರ ಭಾಗವಾಗಿ ಇಂದು (ಮೇ 2) ಬೆಂಗಳೂರು ನಾಗರಿಕರ ಮೊಬೈಲ್‌ಗಳಿಗೆ NDMAನಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಫ್ಲ್ಯಾಶ್ SMS ಸಂದೇಶ ಬರಬಹುದು. ಹೀಗಾಗಿ ಯಾರೂ ಆತಂಕಪಡಬಾರದು.

ಪ್ರಕೃತಿ ವಿಕೋಪ ಮತ್ತು ತುರ್ತು ಸಂದರ್ಭಗಳಲ್ಲಿ ಸರ್ಕಾರವು ಸಕಾಲಿಕ ಮಾಹಿತಿಯನ್ನು ಒದಗಿಸಲು ಬಯಸುತ್ತಿದ್ದು, ಮೊಬೈಲ್ ಫೋನ್‌ಗಳಲ್ಲಿ ನೇರ ಎಚ್ಚರಿಕೆಗಳಿಗಿಂತ ಉತ್ತಮವಾದ ಆಯ್ಕೆ ಇನ್ನೊಂದಿಲ್ಲ. ಹೀಗಾಗಿ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಅದರ ಸನ್ನದ್ಧತೆಯ ಭಾಗವಾಗಿ, ಸರ್ಕಾರವು ಸ್ಥಳೀಯ ಸೆಲ್ ಪ್ರಸಾರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದೆ. ಪ್ರಸ್ತುತ ದೇಶಾದ್ಯಂತ ಈ ವ್ಯವಸ್ಥೆಯನ್ನು ಪರೀಕ್ಷಿಸುತ್ತಿದೆ.

ಸರ್ಕಾರವು ಈ ವ್ಯವಸ್ಥೆಯನ್ನು ಈ ಹಿಂದೆಯೂ ಕೆಲವು ಬಾರಿ ಪರೀಕ್ಷಿಸಿದೆ. ಆದರೆ, ಇದನ್ನು ರಾಷ್ಟ್ರವ್ಯಾಪಿ ಜಾರಿಗೆ ತರುವ ಮೊದಲು ವ್ಯವಸ್ಥೆಯ ಕಾರ್ಯಕ್ಷಮತೆ ಮತ್ತು ವಿಶ್ವಾಸಾರ್ಹತೆಯನ್ನು ನಿರ್ಣಯಿಸುವ ಸಲುವಾಗಿ ಮತ್ತೊಂದು ಪರೀಕ್ಷೆ ನಡೆಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನಾನೇ ಲಾಸ್ಟ್, ಇನ್ನು ಇರಾನ್ ನಂಬಲ್ಲ, ಹಾರ್ಮುಜ್ ಅಮೆರಿಕ ನಿಯಂತ್ರದಣದಲ್ಲಿದೆ': Donald Trump

ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ: ಮುನಿಯಪ್ಪಗೆ ಸಮಾಜಕಲ್ಯಾಣ, ಜಮೀರ್ – ವಸತಿ ಖಾತೆ?

ಪತ್ನಿ ಮೇಲೆ ಅನುಮಾನ; ಜೆಲಟಿನ್ ಕಡ್ಡಿ ಇಟ್ಟು ಮಾವನ ಮನೆ ಸ್ಫೋಟಿಸಿದ ಅಳಿಯ! ಇಬ್ಬರು ಸಾವು

‘ರಾಂಗ್ ರೂಟ್’ ರಕ್ಕಸ SUVಗೆ ಯೋಧ ಬಲಿ; ಕಾರು ಗುದ್ದಿದ ರಭಸಕ್ಕೆ ಗಾಳಿಯಲ್ಲಿ ಹಾರಿ ಬಿದ್ದ ಸೈನಿಕ, ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

ಮುಂದುವರಿದ ಕೌತುಕ: ಅಮಾವಾಸ್ಯೆ ಕಳೆದ ಬಳಿಕವಷ್ಟೇ ಖಾತೆ ಹಂಚಿಕೆ 'ಗ್ರಹಣ ಮುಕ್ತ'!