ಡಾ ಜಿ ಪರಮೇಶ್ವರ್  
ರಾಜ್ಯ

'ದೇಶದ ಆರ್ಥಿಕ ಸ್ಥಿತಿ ಬಲವಾಗಿದೆ ಎಂದು ಪ್ರಧಾನ ಮಂತ್ರಿ, ಹಣಕಾಸು ಸಚಿವರು ಹೇಳುತ್ತಾರೆ, ಹೀಗಿರುವಾಗ ಬೆಲೆ ಹೆಚ್ಚಿಸುವ ಅಗತ್ಯವೇನು?': ಡಾ ಜಿ ಪರಮೇಶ್ವರ್

ಈಗಾಗಲೇ ಎಲ್ಲಾ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನತೆ ತತ್ತರಿಸಿ ಹೋಗಿದ್ದಾರೆ, ಜೀವನ ಕಷ್ಟವಾಗುತ್ತಿದೆ, ಅಂತಹ ಸಂದರ್ಭದಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಹೆಚ್ಚು ಮಾಡುವ ಅವಶ್ಯಕತೆಯಿರಲಿಲ್ಲ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರು: ದೇಶದ ಆರ್ಥಿಕ ಸ್ಥಿತಿ ಬಲವಾಗಿದೆ ಎಂದು ಪ್ರಧಾನ ಮಂತ್ರಿ, ಹಣಕಾಸು ಸಚಿವರನ್ನು ಒಳಗೊಂಡು ಅನೇಕ ನಾಯಕರು ಹೇಳುತ್ತಿರುವ ಸಂದರ್ಭದಲ್ಲಿ, ಈಗ ದರಗಳನ್ನು ಹೆಚ್ಚಿಸುವ ಅಗತ್ಯವೇನು? ಜನರ ಮೇಲೆ ಹೆಚ್ಚುವರಿ ದರ ಏರಿಕೆಯ ಭಾರ ಹಾಕುವುದು ಸರಿಯಲ್ಲ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಎಲ್‌ಪಿಜಿ ದರ ಏರಿಕೆ ಕುರಿತು ಹೇಳಿದ್ದಾರೆ.

ಈಗಾಗಲೇ ಎಲ್ಲಾ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನತೆ ತತ್ತರಿಸಿ ಹೋಗಿದ್ದಾರೆ, ಜೀವನ ಕಷ್ಟವಾಗುತ್ತಿದೆ, ಅಂತಹ ಸಂದರ್ಭದಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಹೆಚ್ಚು ಮಾಡುವ ಅವಶ್ಯಕತೆಯಿರಲಿಲ್ಲ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇರಾನ್ ಯುದ್ಧ ಪ್ರಾರಂಭವಾದಾಗಿನಿಂದ ಬಹಳಷ್ಟು ತೊಂದರೆಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಆದರೆ ಈಗ ಬೆಲೆ ಹೆಚ್ಚಳ ಮಾಡಬಾರದಾಗಿತ್ತು. ಆದರೆ ದೇಶದ ಆರ್ಥಿಕತೆ ಉತ್ತಮವಾಗಿದೆ, ಹಣದುಬ್ಬರ ನಿಯಂತ್ರಿಸಲು, ಸಂಕಷ್ಟ ನಿಭಾಯಿಸುವ ಶಕ್ತಿಯಿದೆ, ಆರ್ಥಿಕ ಸ್ಥಿತಿ ಸುಭದ್ರವಾಗಿದೆ ಎಂದು ಪ್ರಧಾನ ಮಂತ್ರಿಗಳೂ ಹೇಳುತ್ತಾರೆ, ಕೇಂದ್ರ ಹಣಕಾಸು ಸಚಿವರು ಕೂಡ ಹೇಳುತ್ತಾರೆ. ಹೀಗಿರುವಾಗ ಇಂತಹ ಸಂದರ್ಭದಲ್ಲಿ ತೋರಿಸಬೇಕು ಎಂದರು.

ತೈಲದ ದರ ಬ್ಯಾರಲ್ ಗೆ ದರ ಹೆಚ್ಚಳವಾಗಿದ್ದರೆ ಅದನ್ನು ತಡೆದುಕೊಳ್ಳುವ ಶಕ್ತಿ ತೋರಿಸಬೇಕು, ಅದನ್ನು ಬಿಟ್ಟು ಜನಸಮುದಾಯಕ್ಕೆ ಹೊರೆಯಾಗುವ ರೀತಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡುವುದು ಸರಿಯಲ್ಲ ಎಂದರು.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಹೆಚ್ಚಳವಾದಾಗ ದರ ಏರಿಕೆ ಮಾಡುವುದು ಅನಿವಾರ್ಯ ಎಂದು ನಾವು ಹೇಳುತ್ತಿದ್ದಾಗ ಬಿಜೆಪಿಯವರು ಟೀಕೆ ಮಾಡುತ್ತಿದ್ದರು. ಈಗ ಅವರೇನು ಮಾಡುತ್ತಿದ್ದಾರೆ ಎಂದು ಪರಮೇಶ್ವರ್ ಕೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ಮತ ಎಣಿಕೆಗೆ ಕೇಂದ್ರ ಸಿಬ್ಬಂದಿ ನಿಯೋಜನೆ: EC ಕ್ರಮ ಮಾನ್ಯ ಎಂದ ಸುಪ್ರೀಂಕೋರ್ಟ್, TMCಗೆ ಹಿನ್ನಡೆ

ಯುದ್ಧದಲ್ಲಿ ಅಮೆರಿಕಾ ಗೆಲ್ಲುತ್ತಿಲ್ಲ ಎನ್ನುತ್ತಿರುವವರು ದ್ರೋಹಿಗಳು, ಇರಾನ್ ಅಣ್ವಸ್ತ್ರ ಹೊಂದಿದರೆ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಭಾರೀ ಅಪಾಯ: ಟ್ರಂಪ್

ಅಣ್ವಸ್ತ್ರ ಒತ್ತಡಕ್ಕೆ ಮಣಿಯದ ಅಮೆರಿಕಾ: ಶಾಂತಿ ಪ್ರಸ್ತಾವನೆಗೆ ನಕಾರ; ಷರತ್ತುಗಳು ಅತಿಯಾಯ್ತು-ಸಮಯ ವ್ಯರ್ಥ ಮಾಡುತ್ತಿದ್ದಾರೆ; ಇರಾನ್ ವಿರುದ್ಧ ಟ್ರಂಪ್ ತೀವ್ರ ಕಿಡಿ

ಕದನ ವಿರಾಮ ನಡುವಲ್ಲೂ ಲೆಬನಾನ್ ಮೇಲೆ ಇಸ್ರೇಲ್ ದಾಳಿ: 10 ಮಂದಿ ಸಾವು, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಬೇಸಿಗೆಯಲ್ಲಿ ಬಾಡದಿರಲಿ ಚರ್ಮ (ಕುಶಲವೇ ಕ್ಷೇಮವೇ)

SCROLL FOR NEXT