ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯಕ್ಕೆ ಇಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿದು ಹೊಸ ಗೇಟ್ ಅಳವಡಿಸಿದ ನಂತರ ಇದೇ ಮೊದಲ ಬಾರಿಗೆ ಅವರು ಡ್ಯಾಂಗೆ ಆಗಮಿಸಿದ್ದಾರೆ.
ಪ್ರಾಯೋಗಿಕ ಪರೀಕ್ಷೆ ತೋರಿಸಿದ ಟಿಬಿ ಡ್ಯಾಂ ಅಧಿಕಾರಿಗಳು
ಜಲಾಶಯದ ಹೊಸ ಕ್ರಸ್ಟ್ ಗೇಟ್ ನಿರ್ಮಾಣ ಕಾಮಗಾರಿಯನ್ನು ಕೂಲಂಕಷವಾಗಿ ವೀಕ್ಷಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಟಿಬಿ ಡ್ಯಾಂ ಆಡಳಿತ ಮಂಡಳಿ ಅಧಿಕಾರಿಗಳು ಪ್ರಾಯೋಗಿಕ ಪರೀಕ್ಷೆಯನ್ನು ತೋರಿಸಿದರು.
ಎರಡು ವರ್ಷಗಳ ಹಿಂದೆ ಜಲಾಶಯದ 19ನೇ ನಂಬರಿನ ಕ್ರಸ್ಟ್ ಗೇಟ್ ಮುರಿದಿತ್ತು, ಈ ವೇಳೆ 19ನೇ ಕ್ರಸ್ಟ್ ಗೇಟ್ ನ್ನು ಮೇಲಕ್ಕೆ ಎತ್ತುವ ಮೂಲಕ ಗೇಟ್ ಕಾರ್ಯನಿರ್ವಹಣೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಯಿತು. ಯಶಸ್ವಿಯಾಗಿ ಪೂರ್ಣಗೊಂಡ ಟಿಬಿ ಡ್ಯಾಂ ಗೇಟ್ ಅಳವಡಿಕೆ ಕಾರ್ಯ ನಡೆದಿತ್ತು.
ಡಿ.ಕೆ. ಶಿವಕುಮಾರ್ ಅವರು ಯುದ್ಧೋಪಾದಿಯಲ್ಲಿ ಹೊಸ ಗೇಟ್ ಅಳವಡಿಸುವ ಭರವಸೆ ನೀಡಿದ್ದರು. ಎಂಜಿನಿಯರ್ಗಳ ನಿರಂತರ ಪರಿಶ್ರಮದಿಂದಾಗಿ ಈ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದೆ.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳ ಜೊತೆ ಸಚಿವರಾದ ಎನ್.ಎಸ್. ಬೋಸರಾಜು ಮತ್ತು ಶಿವರಾಜ್ ತಂಗಡಗಿ ಇದ್ದರು.